ಶಿಕ್ಷಕ ಪ್ರಕಾಶ್ ಓಟದ ಸ್ಪರ್ಧೆಯಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆ

ಶಿಕ್ಷಕ ಪ್ರಕಾಶ್ ಓಟದ ಸ್ಪರ್ಧೆಯಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆ Teacher Prakash selected for state level in running competition

ಲೋಕದರ್ಶನ ವರದಿ 

ವಿಜಯನಗರ 10: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ, ವಿಜಯನಗರ ಜಿಲ್ಲಾ ಶಾಖೆ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಪ್ರಕಾಶ್ ಶಿಕ್ಷಕರು 100 ಮೀಟರ್ ಓಟದಲ್ಲಿ ಪ್ರಥಮ ಸ್ಥಾನವನ್ನು ಪಡೆದು (50ವರ್ಷ ದಿಂದ 60ವರ್ಷದ ವಯೋಮಿತಿಯ ಪುರುಷರ ವಿಭಾಗದಲ್ಲಿ) 6ನೇ ಬಾರಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.  

ಈ ಸಂದರ್ಭದಲ್ಲಿ ಕರ್ನಾಟಕ ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷರಾದ ಮಲ್ಲಿಕಾರ್ಜುನಗೌಡ.ಜಿ. ಹಾಗೂ ರಾಜ್ಯ ಪರಿಷತ್ ಸದಸ್ಯರಾದ ರಾಘವೇಂದ್ರ ಹೆಗಡೆಹಾಳ್, ಖಜಾಂಚಿ ಮಲ್ಲೇಶಪ್ಪ, ಕಾರ್ಯದರ್ಶಿ ಟಿ.ಪಂಪಣ್ಣ ಹಾಗೂ ಕಡ್ಲಿವೀರಭದ್ರೇಶ, ಮಾರ್ಗದಪ್ಪ, ರಾಜೀವ್, ಆಂದಾನಪ್ಪಗೌಡ, ಬಸವರಾಜ.ಕೆ. ಸುಧಾದೇವಿ, ಲತಾ, ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿಗಳಾದ ಶ್ರೀಕಾಂತ ವಾಲ್ಮೀಕಿ ಹಾಗೂ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷರಾದ ಜಾಕೀರ್, ಪ್ರಶಸ್ತಿ ಪತ್ರವನ್ನು ನೀಡಿ ಗೌರವಿಸಿದರು.  

ಸಾಧಕ ಶಿಕ್ಷಕನಿಗೆ ಉಪನಿರ್ದೇಶಕರು ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳು ಮತ್ತು ತಾಲೂಕು ನೌಕರರ ಸಂಘ ಹಾಗೂ ಕ.ಸ.ಪಾ ತಾಲೂಕು ಘಟಕ ಹೊಸಪೇಟೆ ಹಾಗೂ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಾಕುಬಾಳು ಮುಖ್ಯಗುರುಗಳು ಹಾಗೂ ಸಹಶಿಕ್ಷಕರು ಮತ್ತು ಎಸ್‌.ಡಿ.ಎಂ.ಸಿ. ಅಧ್ಯಕ್ಷರು, ಹರ್ಷ ವ್ಯಕ್ತಪಡಿಸಿ ರಾಜ್ಯಮಟ್ಟದ ಕ್ರೀಡಾ ಕೂಟದಲ್ಲಿ ವಿಜಯ ಪತಾಕೆ ಹಾರಿಸಿ ಜಿಲ್ಲೆಗೆ ಕೀರ್ತಿ ತರಲೆಂದು ಶುಭ ಹಾರೈಸಿದರು.