8 ದಿನಗಳಲ್ಲಿ ಜಾತಿ ಗಣತಿ ಮುಗಿಸಿದ ಶಿಕ್ಷಕನಿಗೆ ಸನ್ಮಾನ
Teacher honored for completing caste census in 8 days
ದೇವರಹಿಪ್ಪರಗಿ 30: ಕರ್ನಾಟಕ ಸರ್ಕಾರ ನಡೆಸುತ್ತಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಗಣತಿದಾರರಿಗೆ ದೊಡ್ಡ ತಲೆನೋವಾಗಿ ಮಾರ್ಪಟಟಿರುವ ಬಗ್ಗೆ ಸಾಕಷ್ಟು ಮಾತುಗಳು ಕೇಳಿ ಬಂದಿದ್ದವು. ಆದ್ರೆ ತಾಲೂಕಿನ ಯಾಳವಾರ ಹೊಸನಗರ ಗ್ರಾಮದ ಸಹ ಶಿಕ್ಷಕಯೋರ್ವರು ಕಡಕೋಳ ಗ್ರಾಮ ವ್ಯಾಪ್ತಿಯಲ್ಲಿ ಕೇವಲ 8ದಿನಗಳಲ್ಲಿ ಸಮೀಕ್ಷೆ ಪೂರ್ಣಗೊಳಿಸಿ ಎಲ್ಲರ ಗಮನ ಸೆಳೆದಿದ್ದಾರೆ.
ಗ್ರಾಮದ ಜನರು ಕೆಲಸಕ್ಕೆ ಹೋಗುವ ಮುನ್ನ ಮನೆಗೆ ಭೇಟಿ ನೀಡುತ್ತಿದ್ದ ಶಿಕ್ಷಕ ನಿಂಗರಾಜ ಜಾಲವಾದ ಗ್ರಾಮದಲ್ಲೇ ಉಳಿದುಕೊಂಡು ಸಮೀಕ್ಷೆ ಕಾರ್ಯ ಮುಗಿಸಿದ್ದಾರೆ. ನಿಂಗರಾಜ ಅವರ ಕಾರ್ಯಕ್ಕೆ ತಹಶೀಲ್ದಾರ್ ಪ್ರಕಾಶ ಸಿಂದಗಿ ಅವರು ಮೆಚ್ಚುಗೆ ವ್ಯಕ್ತಪಡಿಸಿ ಸನ್ಮಾನಿಸಿ, ಗೌರವಿಸಿದ್ದಾರೆ. ಶಿಕ್ಷಕನ ಈ ಕಾರ್ಯಕ್ಕೆ ತಾಲೂಕ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಎ.ಎಚ್.ವಾಲೀಕಾರ, ಕಸಾಪ ತಾಲೂಕು ಮಾಜಿ ಅಧ್ಯಕ್ಷ ಜಿ.ಪಿ.ಬಿರಾದಾರ ಸೇರಿದಂತೆ ಪದಾಧಿಕಾರಿಗಳು ಅಭಿನಂದಿಸಿದ್ದಾರೆ.
ಇದೇ ಸಂದರ್ಭದಲ್ಲಿ ಕಂದಾಯ ಶಿರಸ್ತೇದಾರರಾದ ಡಿ.ಬಿ.ಬೋವಿ, ಸುರೇಶ ಮ್ಯಾಗೇರಿ ಸೇರಿದಂತೆ ಕಂದಾಯ, ಶಿಕ್ಷಣ, ಒಬಿಸಿ ಇಲಾಖೆ ಸಿಬ್ಬಂದಿ ವರ್ಗ ಹಾಗೂ ಕುಟುಂಬ ಸದಸ್ಯರು ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 