ಗುರು ಪರಂಪರೆ ಭಾರತೀಯ ಸಂಸ್ಕೃತಿಯ ತಿರುಳು: ಡಾ.ಅಜಿತ ಪ್ರಸಾದ
ಧಾರವಾಡ 16; ಇತ್ತೀಚಿನ ದಿನಗಳಲ್ಲಿ ಗುರು ಶಿಷ್ಯರ ಸಂಬಂಧಗಳು ಕದಡಿ ಹೋಗುತ್ತಿದ್ದು ಆಧುನಿಕ ಯುಗದಲ್ಲಿ ಶಿಕ್ಷಕರಿಲ್ಲದೇ ತಂತ್ರಜ್ಞಾನದ ಮುಖಾಂತರ ಜ್ಞಾನ ಸಂಪಾದನೆ ಸಾಧ್ಯವಾಗಿದೆ. ಆದರೆ ವಿದ್ಯಾಥರ್ಿಗಳಿಗೆ ತಾಳ್ಮೆ, ಸಹನೆ, ಭಕ್ತಿ ಗೌರವ ಇವುಗಳನ್ನು ಪಡೆಯಲು ಸಾಧ್ಯವಾಗುತ್ತಿಲ್ಲ ಕೇವಲ ಗುರುಕುಲದಲ್ಲಿ ಕಲಿತ ಹಲವಾರು ವಿದ್ವಾನರು ನಮಗೆ ಗೋಚರಿಸುತ್ತಾರೆ. ಆದರೆ ಬೆರಳ ತುದಿಯಲ್ಲಿಯೇ ಸಮಗ್ರ ಜ್ಞಾನದ ಕಣಜವಿದ್ದರೂ ಆತಂಕವಾದ ಮಾದಕ ವಸ್ತುಗಳ ಸೇವನೆ ಮುಂತಾದವುಗಳು ಮಿತಿ ಮೀರಿ ನಡೆಯುತ್ತಿರುವದಕ್ಕೆ ಗುರುಗಳ ಮಾರ್ಗದರ್ಶನವಿಲ್ಲದಿರುವುದೇ ಕಾರಣ ಎಂದು ಜನತಾ ಶಿಕ್ಷಣ ಸಮಿತಿಯ ವಿತ್ತಾಧಿಕಾರಿ ಡಾ. ಅಜಿತ ಪ್ರಸಾದ ಹೇಳಿದರು.
ಜೆ.ಎಸ್.ಎಸ್ ಮಂಜುನಾಥೇಶ್ವರ ಸಿ.ಬಿ.ಎಸ್.ಸಿ ಶಾಲೆಯಲ್ಲಿ ಆಯೋಜಿಸಿದ್ದ ಗುರುಕುಲ ಮಾದರಿಯ ಶಿಕ್ಷಣ ಪದ್ಧತಿಯ ವಿವಿಧ ಮಜಲುಗಳ ಸನ್ನಿವೇಶಗಳನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು. ಗುರುವೆಂದರೆ ಕೇವಲ ಪಾಠ ಹೇಳುವ ಯಂತ್ರವಲ್ಲ, ಜೀವನವನ್ನು ರೂಪಗೊಳಿಸುವ ಚೇತನ ಶಕ್ತಿ ಎಂದು ಹೇಳಿದರು.
ಆಶ್ರಮ, ಯಜ್ಞಕುಂಡ, ಪಾಠಶಾಲೆ, ಉದ್ಯಾನವನ, ನೀರಿನ ಹೊಂಡ ನೋಡುಗರ ಕಣ್ಮನ ಸೆಳೆಯುವಂತಿದ್ದವು. ಇದೇ ಸಂದರ್ಭದಲ್ಲಿ ಶಾಲೆಯವತಿಯಿಂದ ಡಾ. ಅಜಿತ ಪ್ರಸಾದರವರನ್ನು ಪ್ರಾಚಾರ್ಯರಾದ ಸಾಧನಾ ಸನ್ಮಾನಿಸಿದರು. ಮಹಾವೀರ ಉಪಾದ್ಯೆ ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.
ನೀಲಣ್ಣವರ ಪರ ಮಹಾರಾಷ್ಟ್ರದ ಹೂಡಿಕೆದಾರನ ಬ್ಯಾಟಿಂಗ್: ಪೊಲೀಸರ ವಿರುದ್ದ ಆಕ್ರೋಶದ ಅಡಿಯೊ ವೈರಲ್
ಒಳಚರಂಡಿಗೆ ನುಗ್ಗುತ್ತಿದೆ ಮಳೆಯ ನೀರು : ಗಲ್ಲಿಯಲ್ಲಾ ಗಬ್ಬು ವಾಸನೆ, ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಜನರ ಹಿಡಿಶಾಪ
ಭಾರಿ ಮಳೆ, ಗಾಳಿಯಿಂದ ಹಾರಿಹೋದ ಸರ್ಕಾರಿ ಶಾಲೆಗಳ ಮೇಲ್ಚಾವಣಿ : ಮರ ಕಂಬಗಳು ಧರೆಗೆ
ಅಗಲಿದ ಅನಾಥನಿಗೆ ಅಗ್ನಿಸ್ಪರ್ಶ ಮಾಡಿ ಆಪತ್ಭಾಂದವನಾದ ವಿಜಯ ಮೋರೆ: ಅಂತ್ಯಕ್ರಿಯೆಗೆ ಮಾರ್ಕೆಟ್ ಪೊಲೀಸರ ಸಾಥ್
ದ್ವಿಚಕ್ರವಾಹನ ಕಳ್ಳರ ಬಂಧನ : 6.10 ಲಕ್ಷ ಮೌಲ್ಯದ 14 ವಾಹನಗಳ ವಶಕ್ಕೆ ಎಸ್ ಪಿ ರಾಮರಾಜನ್
ಸಾವಿರಾರು ಕೋಟಿ ವಂಚನೆ, ವರ್ಗಾವಣೆ ಆರೋಪ: ಶಿವಾನಂದ ನೀಲಣ್ಣವರ ಬಂಧನ 