ಮಹಾರಾಣಾ ಪ್ರತಾಪಸಿಂಹ ಶಿಕ್ಷಣ ಸಂಸ್ಥೆಯಲ್ಲಿ ಶಿಕ್ಷಕರ ದಿನಾಚರಣೆ

ಮಹಾರಾಣಾ ಪ್ರತಾಪಸಿಂಹ ಶಿಕ್ಷಣ ಸಂಸ್ಥೆಯಲ್ಲಿ ಶಿಕ್ಷಕರ ದಿನಾಚರಣೆ Teachers' Day celebration at Maharana Pratap Simha Educational Institute

ಮಹಾರಾಣಾ ಪ್ರತಾಪಸಿಂಹ ಶಿಕ್ಷಣ ಸಂಸ್ಥೆಯಲ್ಲಿ ಶಿಕ್ಷಕರ ದಿನಾಚರಣೆ 

ಬೆಟಗೇರಿ 05: ಇಂದು ನಗರದ ಮಹಾರಾಣಾ ಪ್ರತಾಪಸಿಂಹ ಶಿಕ್ಷಣ ಸಂಸ್ಥೆಯ ಆವರಣದಲ್ಲಿ ಮಾಜಿ ಉಪರಾಷ್ಟ್ರಪತಿಗಳಾಗಿದ್ದ  ಸರ್ವಪಲ್ಲಿ ರಾಧಾಕೃಷ್ಣನ್‌ರವರ ಜಯಂತಿಯನ್ನು ಶಿಕ್ಷಕರ ದಿನಾಚರಣೆಯನ್ನಾಗಿ ಏರಿ​‍್ಡಸಲಾಗಿತ್ತು, ಶಿಕ್ಷಣ ಸಂಸ್ಥೆಯ ಸಂಸ್ಥಾಪಕರಾದ ಗಣೇಶಸಿಂಗ ಬ್ಯಾಳಿಯವರು ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ರಾಧಾಕೃಷ್ಣನ್‌ರವರ ಕುರಿತು ಮಾತನಾಡಿದರು.  

 

ಇತ್ತೀಚೇಗಷ್ಟೇ ಬೆಟಗೇರಿಯ ಕನ್ನಡ ಹಿರಿಯ ಪ್ರಾಥಮಿಕ ಹೆಣ್ಣು ಮಕ್ಕಳ ಶಾಲೆ ನಂ.:3 ಶಾಲೆಯಲ್ಲಿ ಮುಖ್ಯಾಧ್ಯಾಪಕಿಯಾಗಿ ಸುದೀರ್ಘ ಸೇವೆ   ಸಲ್ಲಿಸಿ ನಿವೃತ್ತಿಗೊಂಡ ಪಿ.ಆರ್‌.ನಿಡಗುಂದಿ ಇವರು ಸಂಸ್ಥೆಯ ಪರವಾಗಿ ಶಾಲು ಹೊದಿಸಿ ಪುಷ್ಪ ಮಾಲೆ ಹಾಕಿ ಸಲ್ಲಿಸಿದ ಗೌರವ ಸನ್ಮಾನವನ್ನು ಸ್ವೀಕರಿಸಿ ಮಾತನಾಡಿ ನಮ್ಮ ಶಾಲೆಗೂ ಈ ಸಂಸ್ಥೆಗೆ ನಿಕಟವಾದ ಸಂಬಂಧವಿದ್ದು ಸಂಸ್ಥಾಪಕರಾದ ಗಣೇಶಸಿಂಗ ಬ್ಯಾಳಿಯವರು ನಮ್ಮ ಶಾಲೆಗೆ ಸಹಾಯ ಸಹಕಾರ ನೀಡಿದ್ದನ್ನು ಈ ಸಂದರ್ಭದಲ್ಲಿ ಸ್ಮರಿಸಿ ಧನ್ಯವಾದಗಳನ್ನು ಸಲ್ಲಿಸಿದರು.   

        ಈ ಸಂದರ್ಭದಲ್ಲಿ ಪ್ರೌಢ ಶಾಲಾ ಮುಖ್ಯಾಧ್ಯಾಪಕರಾದ ಎಸ್‌.ಎಸ್‌.ಬಡಿಗೇರ, ಪ್ರಾಚಾರ್ಯರಾದ ಎಸ್‌.ಎಂ.ಉಳ್ಳಾಗಡ್ಡಿ, ಸಮಸ್ತ ಸಿಬ್ಬಂದಿ ಹಾಗೂ ವಿದ್ಯಾರ್ಥಿವೃಂದ ಉಪಸ್ಥಿತರಿದ್ದರು.