ಸುಸಂಸ್ಕೃತ ಸಮಾಜ ನಿರ್ಮಾಣವಾಗಲು ಶಿಕ್ಷಕರ ಕೊಡುಗೆ ಅಪಾರ
Teachers' contribution to building a civilized society is immense.
ಶಿಗ್ಗಾವಿ 08: ಪ್ರತಿಯೊಬ್ಬರ ಜೀವನಕ್ಕೂ ಅಕ್ಷರ ಎಂಬ ಹಣತೆಯಿಂದ ಭವ್ಯ ಭವಿಷ್ಯದ ಅಡಿಪಾಯಕ್ಕೆ ಬೆಳಕಾಗಿ, ಸುಸಂಸ್ಕೃತ ಸಮಾಜ ನಿರ್ಮಾಣವಾಗಲು ಶಿಕ್ಷಕರ ಕೊಡುಗೆ ಅಗಣಿತವಾದುದು ಎಂದು ಭಾರತ ಸೇವಾ ಸಂಸ್ಥೆ ಅಧ್ಯಕ್ಷ ಶ್ರೀಕಾಂತ ದುಂಡಿಗೌಡ್ರ ಹೇಳಿದರು.
ತಾಲೂಕಿನ ಬನ್ನೂರ ಗ್ರಾಮದಲ್ಲಿ ಎಜುಕೇಶನಲ್ ವೆಲ್ಫೇರ್ ಫೌಂಡೇಶನ್, ಗ್ರಾಮದ ಸರ್ಕಾರಿ ಕನ್ನಡ ಪ್ರಾಥಮಿಕ ಶಾಲೆಯಲ್ಲಿ ಹಮ್ಮಿಕೊಂಡಿದ್ದ ಶಿಕ್ಷಕರ ದಿನಾಚರಣೆಯ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ಅವರುಶಿಕ್ಷಕರು ಶಾಲೆಗಳಲ್ಲಿ ಪಾಠ ಪ್ರವಚನಗಳನ್ನು ಅಷ್ಟೇ ಬೋಧಿಸುವುದಲ್ಲದೆ, ಸಮಾಜದಲ್ಲಿ ಗೌರವಯುತವಾಗಿ ಬದುಕಲು ಬೇಕಾದ ಮೌಲ್ಯಗಳನ್ನು ನಮ್ಮಲ್ಲಿ ಬಿತ್ತಿ, ಸಭ್ಯ ಸಮಾಜದ ನಿರ್ಮಾಣದಲ್ಲೂ ನಿರ್ಣಾಯಕ ಪಾತ್ರ ವಹಿಸುತ್ತಿದ್ದಾರೆ ಎಂದರು.
ಈ ಸಂದರ್ಭದಲ್ಲಿ ಎಸ್.ಡಿ.ಎಂ.ಸಿ ಅಧ್ಯಕ್ಷ ವಿಶ್ವನಾಥಯ್ಯ ಚಿಕ್ಕಮಠ,ಗ್ರಾಮ ಪಂಚಾಯತಿ ಅಧ್ಯಕ್ಷಿಣೆ ಗಿರಿಜವ್ವ ದೊಡ್ಮನಿ, ಪಿ.ಡಿ.ಓ ಹೂಗಾರ, ಪ್ರಧಾನ ಗುರುಗಳು ಅಂಗಡಿ, ವೀರನಗೌಡ ಹೊನ್ನಗೌಡ್ರ, ಟಿ.ವಿ.ಪಾಟೀಲ್, ವೀರಭದ್ರಗೌಡ ಪೊಲೀಸ್ ಗೌಡ್ರ,ವೀರನಗೌಡ ಪೊಲೀಸ್ ಗೌಡ್ರ ಸೇರಿದಂತೆ ಫೌಂಡೇಶನ್ ಸರ್ವ ಸದಸ್ಯರು ಹಾಗೂ ಎಸ್.ಡಿ.ಎಂ.ಸಿ ಸರ್ವ ಸದಸ್ಯರು, ವಿದ್ಯಾರ್ಥಿಗಳು ಭಾಗವಹಿಸಿದ್ದರು, ಬಸವರಾಜ ಮಾಯಣ್ಣವರ ಪ್ರಾಸ್ತಾವಿಕವಾಗಿ ಮಾತನಾಡಿದರು, ಮೊಹಮ್ಮದ್ ಜಾಫರ್ ಇಸುಮಿಯನವರ ವಂದಿಸಿದರು.ಪ್ರವೀಣ್ ಸಿದ್ದಣ್ಣವರ್ ನಿರೂಪಿಸಿದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 