ಶಿಷ್ಯಂದಿರ ಭವಿಷ್ಯ ರೂಪಿಸುವಲ್ಲಿ ಗುರುಗಳ ಗುರುತರ ಜವಾಬ್ದಾರಿ : ಯಲಿಗಾರ
Teachers have a huge responsibility in shaping the future of their students: Yaligara
ಶಿಗ್ಗಾವಿ 13 : ಶಿಷ್ಯಂದಿರ ಭವಿಷ್ಯ ರೂಪಿಸುವಲ್ಲಿ ಗುರುಗಳ ಮೇಲೆ ಗುರುತರ ಜವಾಬ್ದಾರಿಗಳಿವೆ ಎಂದು ಸಾಹಿತಿ ಬ.ಫ.ಯಲಿಗಾರ ಹೇಳಿದರು. ಪಟ್ಟಣದ ಮಾಮಲೆದೇಸಾಯಿ ಪ್ರೌಢಶಾಲೆಯಲ್ಲಿ ಜರುಗಿದ 1985-86ನೇ ಸಾಲಿನ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳ ಸ್ನೇಹ ಸಮ್ಮಿಲನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸಮಾಜದಲ್ಲಿ ಸಜ್ಜನರ ನಿರ್ಮಾಣದಲ್ಲಿ ತಾಯಿ ಮೊದಲ ಗುರುಗಳಾದರೆ ನಂತರದ ಸ್ಥಾನ ವಿದ್ಯೆ ಕಲಿಸಿದ ಗುರುಗಳದ್ದು. ಸದೃಢ ದೇಶ ನಿರ್ಮಾಣದಲ್ಲಿ ಗುರುಗಳು ಅತ್ಯಂತ ನಿರ್ಣಾಯಕ. ಈ. ಹಿನ್ನೆಲೆಯಲ್ಲಿ ತಮ್ಮ ಗುರುಗಳನ್ನು ಮತ್ತು ಸಹಪಾಠಿಗಳನ್ನು ಮತ್ತೊಮ್ಮೆ ಕೂಡುವ ಇಂಥ ಕಾರ್ಯಕ್ರಮ ಪ್ರೇರಣಾದಾಯಕ ಎಂದರು.
ನಿವೃತ್ತ ಶಿಕ್ಷಕ ಪಿ.ಎಸ್.ಯಲಿಗಾರ ಮಾತನಾಡಿ, ಇದೊಂದು ಪವಿತ್ರ ದಿನ. ನಾಲ್ವತ್ತು ವರ್ಷಗಳ ಬಳಿಕ ಮತ್ತೆ ಸೇರಿರುವುದು ಧನ್ಯತೆಯ ಕ್ಷಣ. ಗುರುವಿನ ಬಗ್ಗೆ ಯಾವುದೇ ಭಾಷೆ, ಜಾತಿ ಮತ್ತು ಧರ್ಮದ ಪೂರ್ವಗ್ರಹ ಪೀಡಿತರಾಗದೇ ಎಲ್ಲರನ್ನೂ ಗೌರವಿಸಿರುವುದು ಆದರ್ಶ ವ್ಯಕ್ತಿತ್ವದ ಮಾದರಿ ಎಂದರು. ಪ್ರಾಸ್ತಾವಿಕವಾಗಿ ಮಾತನಾಡಿದ ಮಹೇಶ ದ್ಯಾವಪ್ಪನವರ, ನಮ್ಮ ಸಹಪಾಠಿ ಸ್ನೇಹಿತರನ್ನು ಮತ್ತೊಮ್ಮೆ ಒಗ್ಗೂಡಿಸುವ ಪ್ರಯತ್ನವನ್ನು ಕಳೆದ ಐದು ತಿಂಗಳಿಂದ ಮಾಡಿದೆವು. ಅದಕ್ಕಾಗಿ ವಾಟ್ಸ್ ಆಪ್ ಗ್ರುಪ್ ರಚಿಸಿ, ಜವಾಬ್ದಾರಿ ಹಂಚಿದೆವು. ಗುರುಗಳ ಋಣ ತೀರಿಸಲು ಸಾಧ್ಯವಿಲ್ಲ. ಆದರೂ ನಮ್ಮ ಸೇವೆ ಮುಂದುವರೆಯುತ್ತದೆ ಎಂದರು.್ಷ್ಷ ್ಷ್ಷಭಾಕ್ಸ ಸುದ್ದಿ : ಹೈಸ್ಕೂಲ್ ದಿನಗಳಲ್ಲಿ ನಮ್ಮ ಗುರುಗಳು ಸಾಧನೆಗೆ ಪ್ರೇರೇಪಿಸುತ್ತಿದ್ದರು. ಅವರ ಒತ್ತಾಸೆ ಹಾಗೂ ನಮ್ಮ ಪ್ರಯತ್ನದ ಫಲವಾಗಿ ನಾವು ಉನ್ನತ ಸ್ಥಾನ ಅಲಂಕರಿಸಿರುವುದಕ್ಕೆ ಹೆಮ್ಮೆ ಇದೆ.ಅಶೋಕ ಛಲವಾದಿ, ಜಂಟಿ ನಿರ್ದೇಶಕರು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು ಹಳೆಯ ವಿದ್ಯಾರ್ಥಿಗಳ ಪೈಕಿ ಚಂದ್ರಕಾಂತ ಪೋಕಳೆ, ಯಲ್ಲಪ್ಪ ಉಪ್ಪಿನ, ಗೀತಾ ಹೂಗಾರ ಅನಿಸಿಕೆ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ನಿವೃತ್ತ ಶಿಕ್ಷಕರನ್ನು ಮತ್ತು ಸಿಬ್ಬಂದಿಯನ್ನು ಸನ್ಮಾನಿಸಿ, ಗೌರವಿಸಲಾಯಿತು.ದತ್ತಣ್ಣ ವೆರ್ಣೇಕರ್ ಅಧ್ಯಕ್ಷತೆ ವಹಿಸಿದ್ದರು.ಎಸ್.ಪಿ.ಜೋಶಿ,ಆರ್.ಎಸ್. ಸಿಂಧೂರ, ಕೆ.ಡಿ.ಪಾಟೀಲ, ಎಲ್.ಜಿ.ಕಾಂಗೋ, ಬಿ.ಡಿ.ಚಾರಿ, ಸಿ.ಎಸ್.ಸುರಗಿಮಠ, ನಾಗೇಂದ್ರ್ಪ ಕಮ್ಮಾರ, ಜಿ.ಎನ್.ಯಲಿಗಾರ, ಆರ್.ಎಸ್.ಭಟ್, ಕೆ.ಬಿ.ಚನ್ನಪ್ಪ, ಜಯಣ್ಣ ಹೆಸರೂರ, ರಾಜು ಮಾಮಲೆದೇಸಾಯಿ ಉಪಸ್ಥಿತರಿದ್ದರು.ಆರ್.ಸಿ.ಹಿರೇಮಠ ಹಾಗೂ ವಿನೋದಾ ಪಾಟೀಲ ನಿರೂಪಿಸಿದರು. ಎಂ.ಎಚ್.ಬೆಂಡಿಗೇರಿ ಸ್ವಾಗತಿಸಿದರು. ಶಿವಾನಂದ ಕುನ್ನೂರ ವಂದಿಸಿದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 