ವಿದ್ಯಾರ್ಥಿಗಳಿಗೆ ಹೂ ನೀಡಿ ಶಾಲೆಗೆ ಬರ ಮಾಡಿಕೊಂಡ ಶಿಕ್ಷಕರು
Teachers welcomed students to school with flowers
ವಿದ್ಯಾರ್ಥಿಗಳಿಗೆ ಹೂ ನೀಡಿ ಶಾಲೆಗೆ ಬರ ಮಾಡಿಕೊಂಡ ಶಿಕ್ಷಕರು
ಇಂಡಿ 30; ತಾಲ್ಲೂಕಿನ ಝಳಕಿ ಸರಕಾರಿ ಪ್ರೌಢ ಶಾಲೆ ಝಳಕಿಯಲ್ಲಿ ಶಾಲಾ ಪ್ರಾರಂಬೋತ್ಸವದ ಸಂಭ್ರಮ ಸಡಗರ ಮನೆ ಮಾಡಿತ್ತುಎರಡು ತಿಂಗಳ ಬೇಸಿಗೆ ರಜೆ ಬಳಿಕ ವಿದ್ಯಾರ್ಥಿಗಳು ಮರಳಿ ಬಂದ ವಿದ್ಯಾರ್ಥಿಗಳನ್ನು ಶಿಕ್ಷಕರು ಪುಷ್ಪ ಮಳೆ ಮಾಡುವುದರ ಮೂಲಕ ಗುಲಾಬಿ ಹೂ ನೀಡಿ ಸ್ವಾಗತಿಸಿದರು.ಈ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಶಾಲಾ ಮುಖ್ಯ ಗುರುಗಳಾದ ಎಸ್ ಬಿ ನಾಗಣೆ ಅವರು ಮಾತನಾಡಿ ಸರಕಾರಿ ಶಾಲೆಗಳು ಉಚಿತ ಶಿಕ್ಷಣವನ್ನು ನೀಡುವುದರ ಜೊತೆಗೆ ಪಠ್ಯಪುಸ್ತಕ ಸಮವಸ್ತ್ರ ನುರಿತ ಶಿಕ್ಷಕವೃಂದ ಸುಸಜ್ಜಿತ ಪ್ರಯೋಗಾಲಯಗಳು ಕಂಪ್ಯೂಟರ್ ಲ್ಯಾಬ ವ್ಯವಸ್ಥೆ ಹೊಂದಿರುವ ಉತ್ತಮ ಕ್ರೀಡಾಂಗಣ ಸೌಲಭ್ಯ ಒದಗಿಸಿದೆ. ಸದೃಢ ದೇಹದಲ್ಲಿ ಸಧೃಢ ಮನಸ್ಸು ಎಂಬ ಧ್ಯೇಯ ವಾಕ್ಯದಂತೆ ಪೋಷಣ ಅಭಿಯಾನ ಕಾರ್ಯಕ್ರಮದ ಮೂಲಕ ಪೌಷ್ಟಿಕಾಂಶ ತುಂಬಿದ ಊಟದ ಜೊತೆ ಮೊಟ್ಟೆ ಹಾಲು ರಾಗಿ ಮಾಲ್ಟ ಕಬ್ಬಿಣಾಂಶದ ಮಾತ್ರೆ ನೀಡುವುದರ ಜೊತೆಗೆ ಆರೋಗ್ಯದ ಕಾಳಜಿ ತೆಗೆದುಕೊಳ್ಳಲಾಗುತ್ತದೆ ಎಂದರು.ಕಾರ್ಯಕ್ರಮದಲ್ಲಿ ಸಿಆರ್ ಪಿ ಬಾಲಗಾಂವ, ಕಾರ್ಯಕ್ರಮ ನಿರೂಪಿಸಿದ ಪ್ರಕಾಶ ಬನಗೊಂಡೆ, ರವಿ ಕಪಲಿ, ಶಿವಾನಂದ ಹಳಕಿ, ಜೀರಂಕಲಗಿ ಕಾತ್ರಳ ಮೇಡಂಎಸ್ ಡಿ ಎಂ ಸಿ ಅದ್ಯಕ್ಷರಾದ ಅಣ್ಣಪ್ಪ ತಳವಾರ ,ಸರಕಾರಿ ಗ್ಯಾರಂಟಿ ಯೋಜನೆ ನಿರ್ದೇಶಕರಾದ ಸಣ್ಣಪ್ಪ ತಳವಾರ ಸೇರಿದಂತೆ ಅನೇಕರು ಭಾಗವಹಿಸಿದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 