ಶಿಕ್ಷಕ ವೃತ್ತಿ ಬಲು ದೊಡ್ಡದು: ರಮೇಶ ಕತ್ತಿ
Teaching profession is big: Ramesh Katthi
ಆಲಮೇಲ 06: ಶಿಕ್ಷಕ ವೃತ್ತಿ ಬಲು ದೊಡ್ಡದು, ಅದರ ಘನತೆಯನ್ನು ಕಾಪಿಟ್ಟುಕೊಳ್ಳುವವನೇ ನಿಜವಾದ ಶಿಕ್ಷಕ ಎಂದು ಡಾ.ರಮೇಶ ಕತ್ತಿ ಹೇಳಿದರು.
ಅವರು ತಾಲ್ಲೂಕಿನ ಮೋರಟಗಿ ಗ್ರಾಮದ ಸಿದ್ಧರಾಮೇಶ್ವರ ಕಲಾ ಮಹಾವಿದ್ಯಾಲಯದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಶಿಕ್ಷಕ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.
ಮೊಬೈಲ್ ಯುಗದಲ್ಲಿ ಪಠ್ಯಗಳು ಮಾಯಾವಾಗುತ್ತಿರುವುದು ಶೋಚನೀಯ ಸಂಗತಿ, ವಿದ್ಯಾರ್ಥಿಗಳಲ್ಲಿ ಅಧ್ಯಯನಶೀಲರಾಗಲು ಪುಸ್ತಕಗಳು ಸಹಾಯ ಮಾಡುತ್ತವೆ, ಮೊಬೈಲನಿಂದ ದೂರವಿದ್ದು ಪಠ್ಯಮತ್ತು ಸಾಂಸ್ಕೃತಿಕವಾಗಿ ತೊಡಗಿಕೊಳ್ಳಬೇಕು ಎಂದು ಕರೆ ನೀಡಿದರು.
ಉದ್ಘಾಟನೆಯನ್ನು ಸಂಸ್ಥೆಯ ಆಡಳಿತಾಧಿಕಾರಿ ಬಿ.ಎಸ್.ಪಾಟೀಲ ನೆರವೇರಿಸಿ ಮಾತನಾಡಿದರು. ಅಧ್ಯಕ್ಷತೆಯನ್ನು ವಹಿಸಿದ ಪ್ರಾಚಾರ್ಯ ಡಾ. ವೀರಭದ್ರ ಗೋಲಾ ಮಾತನಾಡಿ 'ಗುರು ಮತ್ತು ಶಿಷ್ಯರ ನಡುವಿನ ಸಂಬಂಧ ಗಟ್ಟಿಗೊಳಿಸಲು ಆದರ್ಶತನ, ಪ್ರಾಮಾಣಿಕತೆಗಳು ಇಬ್ಬರಲ್ಲೂ ಬರಬೇಕು ಎಂದರು.
ಮುಖ್ಯ ಅತಿಥಿಗಳಾಗಿ ಪ್ರೊ. ಎಸ್.ಎಂ.ಹರನಾಳ, ಪ್ರೊ. ಆರ್.ವೈ.ಕಂಬಾರ, ಪ್ರೊ. ವಿ.ಎಸ್.ಶಹಾಪೂರ, ಡಾ. ಐ.ಜಿ.ಕೋಣಶಿರಸಗಿ ಮಾತನಾಡಿದರು. ಸಂಸ್ಥೆಯ ಶಿಕ್ಷಕಿ ಆರ್ ವೈ ಚೌಗಲೆ ಮತ್ತು ಮಾಲಾಶ್ರೀ ಮಂದೇವಾಲಿ ಅವರನ್ನು ಈ ಸಂದರ್ಭದಲ್ಲಿ ಸನ್ಮಾನಿಸಲಾಯಿತು. ವಿದ್ಯಾರ್ಥಿನೀಯರಾದ ಸಂಗೀತಾ ದುದ್ದಗಿ, ಜಯಶ್ರೀ ನಡುವಿನಮನಿ, ಯಶೋಧಾ ಮುಡೆ ಮಾತನಾಡಿದರು.
ಗೌರಿ ಶಾಬಾದಿ, ತ್ರಿವೇಣಿ, ವಿದ್ಯಾಶ್ರೀ ಪ್ರಾರ್ಥಿಸಿದರು. ಪ್ರತಿಭಾ ದುದ್ದಗಿ ಸ್ವಾಗತಸಿದರು. ಐಶ್ವರ್ಯ ತಳವಾರ ನಿರೂಪಿಸಿದರು. ಶಾಂತಾಬಾಯಿ ದುದ್ದಗಿ ವಂದಿಸಿದರು.
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ 