ಶ್ರೀನಗರದಲ್ಲಿ ವಿದೇಶಿ ಪ್ರತಿನಿಧಿಗಳ ತಂಡ
ಜಮ್ಮು, ಫೆ 13 : ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ಕಲ್ಪಿಸಿದ್ದ ಸಂವಿಧಾನ ವಿಧಿ 370 ರದ್ದುಪಡಿಸಿದ ನಂತರ ಅಲ್ಲಿನ ವಸ್ತುಸ್ಥಿತಿ ತಿಳಿಯಲು ಐರೋಪ್ಯ ಒಕ್ಕೂಟ ಹಾಗೂ ಕೊಲ್ಲಿ ರಾಷ್ಟ್ರಗಳ ವಿಶೇಷ ಪ್ರತಿನಿಧಿಗಳ ತಂಡ ಬುಧವಾರ ಶ್ರೀನಗರಕ್ಕೆ ಭೇಟಿ ನೀಡಿತು.
ಜರ್ಮನಿ, ಕೆನಡಾ, ಫ್ರಾನ್ಸ್, ನ್ಯೂಜಿಲೆಂಡ್ , ಮೆಕ್ಸಿಕೋ, ಇಟಲಿ, ಅಫ್ಘಾನಿಸ್ತಾನ, ಆಸ್ಟ್ರೇಲಿಯಾ, ಉಜ್ಬೇಕಿಸ್ತಾನ, ಪೋಲೆಂಡ್ ಹಾಗೂ ಐರೋಪ್ಯ ಒಕ್ಕೂಟದ ರಾಯಭಾರಿಗಳು ನಿಯೋಗದಲ್ಲಿದ್ದಾರೆ.
ಶ್ರೀನಗರದಲ್ಲಿರುವ ಕೈಗಾರಿಕೋದ್ಯಮಿಗಳು ಹಾಗೂ ವರ್ತಕರ ಪ್ರತಿನಿಧಿಗಳನ್ನೊಳಗೊಂಡ ಗುಂಪುಗಳೊಂದಿಗೆ ನಿಯೋಗ ಸಂವಾದ ನಡೆಸಿದೆ.
ಬುಧವಾರವೇ ಉತ್ತರ ಕಾಶ್ಮೀರದ ಬಾರಾಮುಲ್ಲಾ ನಗರಕ್ಕೆ ನಿಯೋಗ ಭೇಟಿ ನೀಡುವ ಉದ್ದೇಶ ಹೊಂದಿತ್ತಾದರೂ ಪ್ರತಿಕೂಲ ಹವಾಮಾನದಿಂದ ಈ ಕಾರ್ಯಕ್ರಮ ರದ್ದಾಗಿದೆ. ನಿಯೋಗ
ಗುರುವಾರ ಜಮ್ಮುವಿಗೆ ಭೇಟಿ ನೀಡಿ ಲೆಫ್ಟಿನೆಂಟ್ ಗವರ್ನರ್ ಗಿರೀಶ್ಚಂದ್ರ ಮುರ್ಮು ಹಾಗೂ ಉನ್ನತಾಧಿಕಾರಿಗಳನ್ನು ಭೇಟಿ ಮಾಡಲಿದೆ. ಈ ಹಿಂದೆ ಜಮ್ಮುವಿನಲ್ಲಿ ಪರಿಸ್ಥಿತಿ ಪರಾಮರ್ಶೆಗೆ ಭಾರತದ ಅಮೆರಿಕ ರಾಯಭಾರಿ ಕೆನ್ನೆತ್ ಜಸ್ಟರ್ ಸೇರಿದಂತೆ 15 ರಾಯಭಾರಿಗಳ ತಂಡ ಜನವರಿ ತಿಂಗಳಲ್ಲಿ ಜಮ್ಮು ಮತ್ತು ಕಾಶ್ಮೀರಕ್ಕೆ ಎರಡು ದಿನ ಭೇಟಿ ನೀಡಿತ್ತು.
ಬೆಳಗಾವಿಯ ನಡುರಸ್ತೆಯಲ್ಲಿ ಹೊತ್ತಿ ಉರಿದ ಕಾರು : ತಡರಾತ್ರಿ ಘಟನೆಯಿಂದ ಬೆಚ್ವಿಬಿದ್ದ ಜನ
ಸಮೃದ್ಧಿ ಎಕ್ಸ್ಪ್ರೆಸ್ವೇಯಲ್ಲಿ ನಿಂತಿದ್ದ ಟ್ರಕ್ಗೆ ಕಾರು ಡಿಕ್ಕಿ ಹೊಡೆದು ಒಂದೇ ಕುಟುಂಬದ ಐವರು ಮೃತ
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ 