ಶ್ರೀನಗರದಲ್ಲಿ ವಿದೇಶಿ ಪ್ರತಿನಿಧಿಗಳ ತಂಡ
ಜಮ್ಮು, ಫೆ 13 : ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ಕಲ್ಪಿಸಿದ್ದ ಸಂವಿಧಾನ ವಿಧಿ 370 ರದ್ದುಪಡಿಸಿದ ನಂತರ ಅಲ್ಲಿನ ವಸ್ತುಸ್ಥಿತಿ ತಿಳಿಯಲು ಐರೋಪ್ಯ ಒಕ್ಕೂಟ ಹಾಗೂ ಕೊಲ್ಲಿ ರಾಷ್ಟ್ರಗಳ ವಿಶೇಷ ಪ್ರತಿನಿಧಿಗಳ ತಂಡ ಬುಧವಾರ ಶ್ರೀನಗರಕ್ಕೆ ಭೇಟಿ ನೀಡಿತು.
ಜರ್ಮನಿ, ಕೆನಡಾ, ಫ್ರಾನ್ಸ್, ನ್ಯೂಜಿಲೆಂಡ್ , ಮೆಕ್ಸಿಕೋ, ಇಟಲಿ, ಅಫ್ಘಾನಿಸ್ತಾನ, ಆಸ್ಟ್ರೇಲಿಯಾ, ಉಜ್ಬೇಕಿಸ್ತಾನ, ಪೋಲೆಂಡ್ ಹಾಗೂ ಐರೋಪ್ಯ ಒಕ್ಕೂಟದ ರಾಯಭಾರಿಗಳು ನಿಯೋಗದಲ್ಲಿದ್ದಾರೆ.
ಶ್ರೀನಗರದಲ್ಲಿರುವ ಕೈಗಾರಿಕೋದ್ಯಮಿಗಳು ಹಾಗೂ ವರ್ತಕರ ಪ್ರತಿನಿಧಿಗಳನ್ನೊಳಗೊಂಡ ಗುಂಪುಗಳೊಂದಿಗೆ ನಿಯೋಗ ಸಂವಾದ ನಡೆಸಿದೆ.
ಬುಧವಾರವೇ ಉತ್ತರ ಕಾಶ್ಮೀರದ ಬಾರಾಮುಲ್ಲಾ ನಗರಕ್ಕೆ ನಿಯೋಗ ಭೇಟಿ ನೀಡುವ ಉದ್ದೇಶ ಹೊಂದಿತ್ತಾದರೂ ಪ್ರತಿಕೂಲ ಹವಾಮಾನದಿಂದ ಈ ಕಾರ್ಯಕ್ರಮ ರದ್ದಾಗಿದೆ. ನಿಯೋಗ
ಗುರುವಾರ ಜಮ್ಮುವಿಗೆ ಭೇಟಿ ನೀಡಿ ಲೆಫ್ಟಿನೆಂಟ್ ಗವರ್ನರ್ ಗಿರೀಶ್ಚಂದ್ರ ಮುರ್ಮು ಹಾಗೂ ಉನ್ನತಾಧಿಕಾರಿಗಳನ್ನು ಭೇಟಿ ಮಾಡಲಿದೆ. ಈ ಹಿಂದೆ ಜಮ್ಮುವಿನಲ್ಲಿ ಪರಿಸ್ಥಿತಿ ಪರಾಮರ್ಶೆಗೆ ಭಾರತದ ಅಮೆರಿಕ ರಾಯಭಾರಿ ಕೆನ್ನೆತ್ ಜಸ್ಟರ್ ಸೇರಿದಂತೆ 15 ರಾಯಭಾರಿಗಳ ತಂಡ ಜನವರಿ ತಿಂಗಳಲ್ಲಿ ಜಮ್ಮು ಮತ್ತು ಕಾಶ್ಮೀರಕ್ಕೆ ಎರಡು ದಿನ ಭೇಟಿ ನೀಡಿತ್ತು.
ಮಳೆಯ ಅವಾಂತರ : ನದಿಯಂತಾದ ರಾಷ್ಟ್ರೀಯ ಹೆದ್ದಾರಿ, ವಾಹನಗಳು ಸಿಲುಕಿ ಪರದಾಡಿದ ಪ್ರಯಾಣಿಕರು
ಬೆಳಗಾವಿಯಲ್ಲಿ ಆನೆಕಲ್ಲು ಮಿಶ್ರಿತ ಗಾಳಿ ಮಳೆಯ ಅರ್ಭಟಕ್ಕೆ ಜನಜೀವನ ಅಸ್ತವ್ಯಸ್ತ
ಹಣ ದ್ವಿಗುಣ ಹೆಸರಲ್ಲಿ ಜನರಿಗೆ ವಂಚಿಸುತ್ತಿದ್ದ ಅಂತರಾಜ್ಯ ಖದೀಮರ ಬಂಧನ : ಗೋಕಾಕ ಪೊಲೀಸರ ಕಾರ್ಯಕ್ಕೆ ಎಸ್ ಪಿ ಶ್ಲಾಘನೆ
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ 