ತಾಂತ್ರಿಕ ದೋಷ: ರಜನಿಕಾಂತ್ ಪ್ರಯಾಣಿಸುತ್ತಿದ್ದ ವಿಮಾನ ವಿಳಂಬ
ಚೆನ್ನೈ / ಮೈಸೂರು, ಜ 27 ಸೂಪರ್ ಸ್ಟಾರ್ ರಜನಿಕಾಂತ್ ಸೇರಿದಂತೆ 42 ಪ್ರಯಾಣಿಕರನ್ನು ಹೊತ್ತ ಮೈಸೂರಿಗೆ ಹೊರಟಿದ್ದ ಖಾಸಗಿ ವಿಮಾನದಲ್ಲಿ ಸೋಮವಾರ ಬೆಳಿಗ್ಗೆ ತಾಂತ್ರಿಕ ದೋಷ ಉಂಟಾಗಿತ್ತು ಎಂದು ವಿಮಾನ ನಿಲ್ದಾಣದ ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ.‘ವಿಮಾನವು ಟೇಕ್-ಆಫ್ ಆಗುವ ಸ್ವಲ್ಪ ಸಮಯದ ಮುನ್ನವೇ ದೋಷ ಪತ್ತೆಯಾಗಿದೆ. ತಕ್ಷಣವೇ ಎಂಜಿನಿಯರ್ ಗಳನ್ನು ಕರೆಸಲಾಗಿದ್ದು, ದೋಷವನ್ನು ಅವರು ಸರಿಪಡಿಸಿದ್ದಾರೆ.’ ಎಂದು ಅಧಿಕಾರಿಗಳು ತಿಳಿಸಿದ್ದಾರೆ ಾಂತ್ರಿಕ ದೋಷದಿಂದ ವಿಮಾನ ನಿರ್ದಿಷ್ಟ ಸ್ಥಳ ತಲುಪಲು ಸುಮಾರು ಎರಡು ತಾಸು ವಿಳಂಬವಾಗಿತ್ತು. ಎರಡು ತಾಸಿನ ನಂತರ ವಿಮಾನ ಮೈಸೂರಿನತ್ತ ಹೊರಟಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ‘ಈ ಮಧ್ಯೆ ರಜನಿಕಾಂತ್ ಅವರು ವಿಮಾನದಲ್ಲಿದ್ದ ಕೆಲ ಪ್ರಯಾಣಿಕರೊಂದಿಗೆ ಚರ್ಚೆ ನಡೆಸಿದ್ದಾರೆ. ಅಲ್ಲದೆ, ಪ್ರಯಾಣಿಕರೊಂದಿಗೆ ಚಿತ್ರಗಳನ್ನು ತೆಗೆಸಿಕೊಂಡಿದ್ದಾರೆ.’ ಎಂದು ಅಧಿಕಾರಿಗಳು ಹೇಳಿದ್ದಾರೆ.
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ 