ತಂತ್ರಜ್ಞಾನ ಬಳಕೆ ಇತಿಮಿತಿಯಲ್ಲಿರಬೇಕು: ಆನ್ವೇರಿ
ರಾಣೇಬೆನ್ನೂರು-ಜು.21: ತಂತ್ರಜ್ಞಾನವು ಅತ್ಯಂತ ಪ್ರಭಾವಶಾಲಿಯಾಗಿ ಬೆಳವಣಿಗೆ ಕಂಡಿದೆ. ಅದರ ಬಳಕೆ ಮಿತಿಮೀರಿದೆ. ಇದರ ಪರಿಣಾಮ ಮಕ್ಕಳಲ್ಲಿ ನೈತಿಕತೆ, ಭೌತಿಕತೆ ಮತ್ತು ಸಂಸ್ಕೃತಿ-ಸಂಸ್ಕಾರ ಮರೆಯಾಗುತ್ತಲಿದೆ. ತಂತ್ರಜ್ಞಾನದ ಬಳಕೆ ಅಗತ್ಯಕ್ಕಷ್ಟೇ ಸೀಮಿತವಾಗಿರಬೇಕು ಎಂದು ಮಾತಾ ಪಬ್ಲಿಕ್ ಶಾಲಾ ಉಪಾಧ್ಯಕ್ಷ ಕೆ.ಎಫ್.ಆನ್ವೇರಿ ಹೇಳಿದರು.
ಅವರು ಇಲ್ಲಿನ ಹಲಗೇರಿ ರಸ್ತೆ ಚೋಳಮರಡೇಶ್ವರ ನಗರದ ಮಾತಾ ಪಬ್ಲಿಕ್ ಶಾಲಾ ಸಭಾಂಗಣದಲ್ಲಿ ಆಯೋಜಿಸಿದ್ದ, ಮೊಬೈಲ್ ಹಾಗೂ ದೂರದರ್ಶನ ಬಳಕೆ ಕುರಿತು ನಡೆದ ವಿಚಾರ ಸಂಕೀರ್ಣ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ವಿಧ್ಯಾರ್ಥಿಗಳು ನಾಲ್ಕು ಗೋಡೆಗಳ ಮಧ್ಯ ನಡೆಯುವ ಪಾಠ-ಪ್ರವಚನಗಳಿಗೆ ಮಾತ್ರ ಸೀಮಿತವಾಗದೇ, ಸಮಾಜದ ಎಲ್ಲ ವಿಷಯ ಮತ್ತು ವಿಚಾರಗಳನ್ನು ಅರಿತುಕೊಂಡು ಭವಿಷ್ಯದಲ್ಲಿ ಜ್ಞಾನವಂತರಾಗಲು ಇಂತಹ ವೈಚಾರಿಕ ಚಿಂತನೆಯನ್ನು ಮೂಡಿಸುವ ವಿಚಾರ ಸಂಕೀರ್ಣಗಳಲ್ಲಿ ಸಕ್ರೀಯವಾಗಿ ಪಾಲ್ಗೊಳ್ಳುವುದರ ಮೂಲಕ ಜ್ಞಾನಾರ್ಜನೆ ಬೆಳೆಸಿಕೊಳ್ಳಲು ಮುಂದಾಗಬೇಕು ಎಂದು ಕರೆನೀಡಿದರು.
ವಿಚಾರ ಸಂಕೀರ್ಣದಲ್ಲಿ ಶಾಲೆಯ ನೂರಾರು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ವೇದಿಕೆಯಲ್ಲಿ ಮುಖ್ಯ ಶಿಕ್ಷಕ ಚನಬಸಪ್ಪ ಎಸ್., ಶಿಕ್ಷಕಿಯರಾದ ಶಿಲ್ಪಾ ಬಿ ಕೆ ,ಶ್ಯಾಮಿಲಿ ಎಸ್ ಕೆ , ಉಷಾ ಎನ್ . ರೇಖಾ, ಸುಮಾ,ಸೌಮ್ಯ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
ಸಮೃದ್ಧಿ ಎಕ್ಸ್ಪ್ರೆಸ್ವೇಯಲ್ಲಿ ನಿಂತಿದ್ದ ಟ್ರಕ್ಗೆ ಕಾರು ಡಿಕ್ಕಿ ಹೊಡೆದು ಒಂದೇ ಕುಟುಂಬದ ಐವರು ಮೃತ
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ 