ಮಾನಸಿಕ ಆರೋಗ್ಯಕ್ಕಾಗಿ ಟೆಲಿಮನಸ್ ಸಹಾಯವಾಣಿ 14416 ಸಂಪರ್ಕಿಸಿ: ಡಾ.ಯಲ್ಲಾ ರಮೇಶ್ ಬಾಬು
Telemanus Helpline for Mental Health 14416 Contact: Dr. Yalla Ramesh Babu
ಬಳ್ಳಾರಿ 09: ಮಾನಸಿಕ ಆರೋಗ್ಯ ಸಮಸ್ಯೆ, ಒತ್ತಡ ಇದ್ದಲ್ಲಿ ನೆರವು ಪಡೆಯಲು ಟೆಲಿಮನಸ್ ಸಹಾಯವಾಣಿ 14416 ಗೆ ಕರೆಮಾಡಿ ಉಚಿತ ಆಪ್ತಸಮಾಲೋಚನೆ ಪಡೆಯಬಹುದು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಯಲ್ಲಾ ರಮೇಶ್ ಬಾಬು ಅವರು ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಮಾನಸಿಕ ಕಾರ್ಯಕ್ರಮ ವಿಭಾಗದ ವತಿಯಿಂದ ನಗರದ ಜಿಲ್ಲಾ ಅರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಾರ್ಯಾಲಯದಲ್ಲಿ ವೈದ್ಯಾಧಿಕಾರಿಗಳಿಗೆ, ಕ್ಷೇತ್ರ ಮಟ್ಟದ ಸಿಬ್ಬಂದಿಗೆ ಮಾನಸಿಕ ಆರೋಗ್ಯದ ನಿರ್ವಹಣೆ ಕುರಿತು ಸೋಮವಾರ ಏರಿ್ಡಸಿದ್ದ ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.
ಪ್ರತಿಯೊಬ್ಬ ವ್ಯಕ್ತಿಗೂ ಜೀವನದ ಯಾವುದಾದರೂ ಸನ್ನಿವೇಶಗಳಲ್ಲಿ ಮಾನಸಿಕ ಆರೋಗ್ಯ ಸಮಸ್ಯೆ ಕಂಡುಬರುವ ಸಾಧ್ಯತೆ ಇರುತ್ತದೆ. ಅಂತಹ ಸಂದರ್ಭದಲ್ಲಿ ಇನ್ನೊಬ್ಬರೊಂದಿಗೆ ವಿಷಯ ಹಂಚಿಕೊಳ್ಳುವ ಅಥವಾ ಸಮಸ್ಯೆಯ ತೀವ್ರತೆ ಹೆಚ್ಚಾದಾಗ ಮಾನಸಿಕ ತಜ್ಞರೊಂದಿಗೆ ತಪ್ಪದೇ ಸಮಾಲೋಚಿಸಬೇಕು ಎಂದು ತಿಳಿಸಿದರು.
ಕರ್ನಾಟಕ ರಾಜ್ಯ ಸರ್ಕಾರವು ರಾಷ್ಟ್ರೀಯ ಟೆಲಿ ಮಾನಸಿಕ ಆರೋಗ್ಯ ಕಾರ್ಯಕ್ರಮದಡಿ ಟೆಲಿಮೆನಸ್ ಎಂಬ 14416 ಉಚಿತ ಸಹಾಯವಾಣಿ ಕಾರ್ಯನಿರ್ವಹಿಸುತ್ತಿದ್ದು, ಕರೆ ಮಾಡಿ ಸೂಕ್ತ ನೆರವು ಪಡೆದುಕೊಳ್ಳಬಹುದು ಎಂದರು.
ಕರೆ ಮಾಡಿದವರ ವಿವರ ಗೌಪ್ಯವಾಗಿ ಇಡಲಾಗುವುದು. ಧ್ವನಿಮುದ್ರಣ ಆಗುವುದಿಲ್ಲ. ಪರೀಕ್ಷಾ ಒತ್ತಡಕೊಳ್ಳಗಾದವರು, ಕೌಟುಂಬಿಕ ಸಮಸ್ಯೆಗೊಳಗಾದವರು, ಆತ್ಮಹತ್ಯೆ ಆಲೋಚನೆ ಮಾಡುವರು, ಮಾದಕ ವಸ್ತು ವ್ಯಸನಿಗಳು, ಸಂಬಂಧಗಳ ಸಮಸ್ಯೆಯಲ್ಲಿ ಸಿಲುಕಿರುವವರು, ಜ್ಞಾಪಕ ಶಕ್ತಿ ತೊಂದರೆ ಉಳ್ಳವರು, ಆರ್ಥಿಕ ಒತ್ತಡದಲ್ಲಿ ಇರುವವರು ಅಥವಾ ಇತರೆ ಯಾವುದೇ ಮಾನಸಿಕ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿರುವವರು ಇದ್ದಲ್ಲಿ ಈ ಸಹಾಯವಾಣಿ ಮೂಲಕ ನೆರವು ಪಡೆಯಬಹುದಾಗಿದೆ ಎಂದು ತಿಳಿಸಿದರು.
ಜಿಲ್ಲಾ ಮಾನಸಿಕ ಕಾರ್ಯಕ್ರಮ ಅನುಷ್ಠಾನಾಧಿಕಾರಿ ಡಾ.ವಿರೇಂದ್ರ ಕುಮಾರ್ ಅವರು ಮಾತನಾಡಿ, ಜಿಲ್ಲೆಯಲ್ಲಿ ಸಾರ್ವಜನಿಕರಿಗೆ ಮಾನಸಿಕ ಆರೋಗ್ಯ ಸೇವೆಗಳನ್ನು ನೀಡಲು ಜಿಲ್ಲಾ ಮಟ್ಟದಿಂದ ಮನೋರೋಗ ತಜ್ಞ ಡಾ.ಕಿಶೋರ್ ಅವರ ನೇತೃತ್ವದಲ್ಲಿ ಪ್ರತಿ ಮೊದಲ ಮಂಗಳವಾರ ಸಿರುಗುಪ್ಪ, ಎರಡನೇ ಮಂಗಳವಾರ ಸಂಡೂರು, ಮೂರನೇ ಮಂಗಳವಾರ ಕಂಪ್ಲಿ, ನಾಲ್ಕನೇ ಮಂಗಳವಾರ ಕುರುಗೋಡು ಹಾಗೂ ಪ್ರತಿ ತಿಂಗಳು 16ನೇ ತಾರೀಖು ಮೋಕ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಮಾನಸಿಕ ಆರೋಗ್ಯ ಸೇವೆ ನೀಡಲಾಗುತ್ತಿದೆ. ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಹೇಳಿದರು.
ಕಾರ್ಯಾಗಾರದಲ್ಲಿ ಮನೋರೋಗ ತಜ್ಞ ಡಾ.ಕಿಶೋರ್ ಅವರು ಮಾನಸಿಕ ಕಾಯಿಲೆಗಳಾದ ಆತಂಕ, ಮಾನಸಿಕ ಖಿನ್ನತೆ, ಗಾಬರಿ, ಮನೋರೋಗ, ಚಿತ್ತವಿಕಲತೆ, ಮೇನಿಯಾ ಕಾಯಿಲೆ ಲಕ್ಷಣಗಳು ಮತ್ತು ಚಿಕಿತ್ಸೆಯ ಬಗ್ಗೆ ವಿವರವಾಗಿ ಮಾಹಿತಿ ಮೂಲಕ ತರಬೇತಿ ನೀಡಿದರು.
ಈ ಸಂದರ್ಭದಲ್ಲಿ ಪ್ರಭಾರಿ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಖುರ್ಶಿದ್ ಬೇಗಮ್, ಮನೋ ಶಾಸ್ತ್ರಜ್ಞ ಶರ್ಮಸ್ ವಲಿ, ಮನೋ ಸಾಮಾಜಿಕ ಕಾರ್ಯಕರ್ತ ಶಾಂತಕುಮಾರ್, ಮನೋ ಶುಶ್ರೂಷಣಾಧಿಕಾರಿ ರಂಜೀತಾ ಸೇರಿದಂತೆ ಇತರೆ ಅಧಿಕಾರಿ-ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 