ನಟ ಅಲ್ಲು ಅರ್ಜುನ್ ರಿಂದಾಗಿ ಇಡೀ ಚಿತ್ರರಂಗ ತಲೆತಗ್ಗಿಸುವಂತಾಗಿದೆ: ನಿರ್ದೇಶಕ ತಮ್ಮಾರೆಡ್ಡಿ ಭಾರದ್ವಾಜ್
Telugu producers are furious about actor Allu Arjun
ಹೈದರಾಬಾದ್ 28: ಹೈದರಾಬಾದ್ ನ ಸಂಧ್ಯಾ ಥಿಯೇಟರ್ ನಲ್ಲಿ ನಡೆದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿಂತೆ ನಟ ಅಲ್ಲು ಅರ್ಜುನ್ ವಿಚಾರವಾಗಿ ತೆಲುಗು ನಿರ್ಮಾಪಕರು ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿದ್ದು, 'ಒಬ್ಬ ವ್ಯಕ್ತಿಯ ಅಹಂಕಾರದಿಂದ ಇಡೀ ಚಿತ್ರರಂಗ ತಲೆತಗ್ಗಿಸುವಂತಾಯಿತು' ಎಂದು ಕಿಡಿಕಾರಿದ್ದಾರೆ.
ಹೌದು.. ಪುಷ್ಪ2 ಚಿತ್ರ ಪ್ರದರ್ಶನ ವೇಳೆ ‘ಐಕಾನ್ ಸ್ಟಾರ್ ಅಲ್ಲು ಅರ್ಜನ್ ಮಾಡಿದ ತಪ್ಪಿನಿಂದಾಗಿ ಇಂದು ಇಡೀ ತೆಲುಗು ಚಿತ್ರರಂಗ ತೆಲಂಗಾಣ ಸಿಎಂ ರೇವಂತ್ ರೆಡ್ಡಿ ಮುಂದೆ ಕೈಮುಗಿದು ನಿಲ್ಲುವಂತಾಗಿದೆ’ ಎಂದು ತೆಲುಗು ನಿರ್ಮಾಪಕ, ನಿರ್ದೇಶಕ ತಮ್ಮಾರೆಡ್ಡಿ ಭಾರದ್ವಾಜ್ ಕಿಡಿಕಾರಿದ್ದಾರೆ.
ಪುಷ್ಪ–2 ಶೋ ವೇಳೆ ಹೈದರಾಬಾದ್ ಸಂದ್ಯಾ ಚಿತ್ರಮಂದಿರದಲ್ಲಿ ಸಂಭವಿಸಿದ್ದ ಕಾಲ್ತುಳಿತ ಪ್ರಕರಣದ ಬಗ್ಗೆ ಹಾಗೂ ಅಲ್ಲು ಅರ್ಜುನ್ ಅವರ ಮೇಲೆ ಕೇಸ್ ಹಾಕಿರುವ ಬಗ್ಗೆ ಖಾಸಗಿ ಸುದ್ದಿವಾಹಿನಿಗಳ ಜೊತೆ ಮಾತನಾಡಿರುವ ತಮ್ಮಾರೆಡ್ಡಿ, ‘ಒಬ್ಬ ನಟ, ಸ್ಟಾರ್ ಆದವನು ಸಾರ್ವಜನಿಕವಾಗಿ ಹೇಗೆ ಇರಬೇಕೊ ಹಾಗೆ ಅಲ್ಲು ಅರ್ಜುನ್ ಇರಲಿಲ್ಲ. ಸಿಂಗಲ್ ಸ್ಕ್ರೀನ್ ಥಿಯೇಟರ್ಗಳಲ್ಲಿ ಸಿನಿಮಾ ಬಿಡುಗಡೆಯಾದ ದಿನ ತಾನೂ ಸಿನಿಮಾ ನೋಡಲು ಹೋದರೆ ಜನಸಾಮಾನ್ಯರು ಜಮಾಯಿಸಿ ಎಡವಟ್ಟಾಗುತ್ತವೆ ಎಂದು ಗೊತ್ತಿದ್ದರೂ ಅಲ್ಲು ಅರ್ಜನ್ ಅಲ್ಲಿ ಹೋಗಿ ತಪ್ಪು ಮಾಡಿದರು. ಅವರಿಂದಾಗಿಯೇ ಇಂದು ಟಾಲಿವುಡ್ ಸಿಎಂ ರೇವಂತ್ ರೆಡ್ಡಿ ಮುಂದೆ ಕೈ ಮುಗಿದು ನಿಲ್ಲುವಂತಾಗಿದೆ. ಇದು ಸರಿಯಲ್ಲ’ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.
ಇದೇ ವೇಳೆ ‘ಚಿರಂಜೀವಿ, ನಾಗಾರ್ಜುನ್ ಸೇರಿದಂತೆ ಅನೇಕ ಹಿರಿಯ ಸ್ಟಾರ್ ನಟರು ಸಾರ್ವಜನಿಕವಾಗಿ ತಾವು ಹೇಗೆ ಇರಬೇಕು ಎಂಬುದು ಅವರಿಗೆ ಗೊತ್ತಿದೆ. ಬಹುನಿರೀಕ್ಷಿತ ಸಿನಿಮಾಗಳು ಬಿಡುಗಡೆಯಾದಾಗ ಮಲ್ಟಿಫ್ಲೆಕ್ಸ್ಗಳಿಗೆ ಹೋಗಿ, ಔಪಚಾರಿಕವಾಗಿ ಅಭಿಮಾನಿಗಳನ್ನು ಭೇಟಿಯಾಗಿ ಬರುತ್ತಾರೆ. ಅಲ್ಲು ಅರ್ಜುನ್ ಕೂಡ ಹಾಗೇಯೇ ಮಾಡಬಹುದಿತ್ತು. ಆದರೆ ಅವರು ಹಾಗೆ ಮಾಡಲಿಲ್ಲ ಎಂದು ಹೇಳಿದ್ದಾರೆ.
ಅಂತೆಯೇ ಸಂಧ್ಯಾ ಥಿಯೇಟರ್ ಕಾಲ್ತುಳಿತ ಪ್ರಕರಣ ಕುರಿತು ಮಾತನಾಡಿದ ಅವರು, 'ಆ ಘಟನೆ ನಡೆಯಬಾರದಿತ್ತು. ಅದು ದುರಾದೃಷ್ಟವಶಾತ್ ನಡೆದಿರುವುದು. ತಪ್ಪು ತಿಳಿದು ಮಾಡಿದರೂ, ತಿಳಿಯದೇ ಮಾಡಿದರೂ ಅದು ತಪ್ಪೇ.. ಮಾಡಿದ ತಪ್ಪನ್ನು ಮುಚ್ಚಿಹಾಕಲು ತಿಳಿದೂ ಸುಳ್ಳು ಹೇಳುವುದು ಸ್ವೀಕಾರಾರ್ಹವಲ್ಲ.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 