ದೇವಸ್ಥಾನ ಸಮುದಾಯ ಭವನ-20 ಲಕ್ಷ ಕಾಮಗಾರಿ ಚಾಲನೆ
Temple Community Bhawan-20 Lakh work started
ದೇವಸ್ಥಾನ ಸಮುದಾಯ ಭವನ-20 ಲಕ್ಷ ಕಾಮಗಾರಿ ಚಾಲನೆ
ಸಂಬರಗಿ 31: ಈ ವರ್ಷ ಒಂದು ತಿಂಗಳ ಮುಂಚಿತವಾಗಿ ಮಳೆಯಾದ ಕಾರಣ ನೀರಾವರಿ ಯೋಜನೆಯ ಕಾಮಗಾರಿ ವಿಳಂಬವಾಗಿದೆ. ಇಲ್ಲವಾದರೆ, ಖಿಳೇಗಾಂವ ಬಸವೇಶ್ವರ ಏತ ನೀರಾವರಿ ಯೋಜನೆ ಮುಕ್ತಾಯಗೊಳ್ಳುತ್ತಿದ್ದು, ಮಳೆಯಿಂದ ವಿಳಂಬವಾಗಿದೆ ಎಂದು ಕರ್ನಾಟಕ ವಾಯುವ್ಯ ರಸ್ತೆ ಸಾರಿಗೆ ಅಧ್ಯಕ್ಷರು ಹಾಗೂ ಶಾಸಕರಾದ ರಾಜು ಕಾಗೆ ಹೇಳಿದರು. ಖಿಳೇಗಾಂವ ಗ್ರಾಮಗಳಲ್ಲಿ ದೇವಸ್ಥಾನ ಸಮುದಾಯ ಭವನ ಕಾಮಗಾರಿ ಚಾಲನೆ ನೀಡಿ ಮಾತನಾಡಿ ಅವರು ನಾವು ಹೇಳಿದ ಪ್ರಕಾರ ನೀರಾವರಿ ಯೋಜನೆಯ ಕಾಮಗಾರಿ ಪ್ರಗತಿಯಲ್ಲಿದ್ದು, ಮಳೆಯ ಪ್ರಭಾವದಿಂದ ವಿಳಂಬವಾಗಿದ್ದು, ಶೀರ್ಘದಲ್ಲಿ ಬಸವೇಶ್ವರ ಏತ ನೀರಾವರಿ ಯೋಜನೆ ನೀರು ಹರಿಸುತ್ತೇನೆ. ಸನ್ 2026ರ ಜೂನ್ ಒಳಗಾಗಿ ಕಾಮಗಾರಿ ಪೂರ್ಣಗೊಳಿಸಿ ನೀರು ಹರಿಸುತ್ತೇವೆ. ಮಳೆಯ ಕಾರಣದಿಂದ ಕಾಮಗಾರಿ ವಿಳಂಬವಾಗಿದೆ. ಕ್ಷೇತ್ರದಲ್ಲಿ 74 ಸಮುದಾಯ ಭವನ 13 ಕೋಟಿ ರೂಪಾಯಿ ಮಂಜೂರಾತಿ ಮಾಡಿ ಪ್ರತಿ ಗ್ರಾಮದಲ್ಲಿ ಸಮುದಾಯ ಭವನ ಕಟ್ಟಡ ನಿರ್ಮಾಣ ಮಾಡುತ್ತೆವೆ. ಕ್ಷೇತ್ರದಲ್ಲಿ ನೆನಗುದ್ದಿಗೆ ಬಿದ್ದಿರುವ ಕಾಮಗಾರಿ ಪೂರ್ಣಗೊಳಿಸುವ ಭರವಸೆ ನೀಡಿದರು. ಈ ವೇಳೆ ವಿನಾಯಕ ಬಾಗಡಿ, ಖಂಡೇರಾವ ಘೋರೆ್ಡ, ಜಿಲ್ಲಾ ಪಂಚಾಯತ ಅಭಿಯಂತರರಾದ ವಿರಣ್ಣ ವಾಲಿ, ಕಿರಿಯ ಅಭಿಯಂತರರು ಮಡಿವಾಳ ಪಾಟೀಲ, ವಿಶಾಲ ನಿಂಬಾಳ, ಹೊಣ್ಣಪ್ಪ ಬಗಲಿ, ರಮೇಶ ಪಾಟೀಲ, ಸತೀಶ ಹೊನ್ನಾಗೋಳ, ಸಂತೋಷ ದಿವಾನಗೋಳ, ರಾಮ ಶಿರಗುಪ್ಪಿ, ಸುರೇಶ ಅವಟಿ, ದಿಪಕ ಶಿವಾಗೋಳ, ರಘುನಾಥ ಹಜಾರೆ, ಎಸ್.ಎಲ್ ಪಾಟೀಲ ಇನ್ನೀತರು.
ಮಳೆಯಿಂದ ಕಾರಲಗಾ ಗ್ರಾಮ ಜಲಾವೃತ; ವಿದ್ಯಾರ್ಥಿಗಳ ಪರದಾಟ : ಶಾಲಾ ಕಾಲೇಜುಗಳಿಗೆ ರಜೆ
ಆಲಂದಿಯಲ್ಲಿ ಪ್ರವಾಹ: ಭಾರೀ ಮಳೆಯಿಂದ ಇಂದ್ರಾಯಣಿ ನದಿ ಉಕ್ಕಿ ಹರಿದು ಸೇತುವೆಗಳು ಮುಚ್ಚಲ್ಪಟ್ಟವು; ನದಿತೀರ ಪ್ರದೇಶಗಳು ಜಲಾವೃತ
ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ, ಜೀವ ಬೆದರಿಕೆ, ನ್ಯಾಯಕ್ಕಾಗಿ ಡಿಸಿ, ಎಸ್ಪಿಗೆ ಉಪನ್ಯಾಸಕನ ಮೊರೆ
ಗೌರಿ ಸ್ಪ್ರಾಟ್ ಅವರನ್ನು ವಿವಾಹವಾದ ಅಮೀರ್ ಖಾನ್; ಮುಂಬೈಯಲ್ಲಿ ಆಪ್ತರ ಸಮ್ಮುಖದಲ್ಲಿ ಸರಳ ವಿವಾಹ ಸಮಾರಂಭ
ಬೆಳಗಾವಿಗೆ ಮೋಹನ್ ಭಾಗವತ್ ಭೇಟಿ: 9 ದಿನ ಡ್ರೋನ್ ಹಾರಾಟಕ್ಕೆ ನಿಷೇಧ, 3 ಸ್ಥಳಗಳು ರೆಡ್ ಝೋನ್ : ಡಿಸಿ ಆದೇಶ
ಕೋಲ್ಕತ್ತಾ ಟಿಎಂಸಿ ಕಚೇರಿ ವಿವಾದದ ಮೇಲೆ ಬಂಡಾಯ ಗುಂಪಿಗೆ ಮಮತಾ ಬ್ಯಾನರ್ಜಿ ತೀವ್ರ ವಾಗ್ದಾಳಿ, “ಸಂಸ್ಥೆಗಳನ್ನು ಸ್ವಾಧೀನಪಡಿಸಿಕೊಳ್ಳಲು ಸಾಧ್ಯವಿಲ್ಲ” ಎಂದು ಹೇಳಿಕೆ 