ದೇವಾಲಯದ ಕಾಂಪೌಂಡ್ ನಿರ್ಮಾಣ:ರಮೇಶ ಜಿಗಜಿಣಗಿ
Temple Compound Construction: Ramesh Jigajinagi
ಇಂಡಿ 18: ತಾಲ್ಲೂಕಿನ ಸುಕ್ಷೇತ್ರ ತಡವಲಗಾ (ಜೋಡಗುಡಿ) ಗ್ರಾಮದ ಮರುಳಸಿದ್ದೇಶ್ವರ ದೇವಾಲಯ ಕಾಂಪೌಂಡ್ ನಿರ್ಮಾಣ ಮಾಡಿಕೊಡುವುದಾಗಿ ಮಾಜಿ ಕೇಂದ್ರ ಸಚಿವರು ಹಾಗೂ ಹಾಲಿ ವಿಜಯಪೂರ ಲೋಕಸಭಾ ಸದಸ್ಯರಾದ ರಮೇಶ ಜಿಗಜಿಣಗಿ ಅವರು ವಾಗ್ದಾನ ಮಾಡಿದರು. ಅವರು ನಿನ್ನೆ ನಡೆದ ಜೋಡಗುಡಿ ಮರುಳಸಿದ್ದೇಶ್ವರ ಜಾತ್ರೆಯ ನಿಮಿತ್ತವಾಗಿ ಹಮ್ಮಿಕೊಂಡಿದ್ದ ಸರಳ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು ಮುಂದಿನ ದಿನಗಳಲ್ಲಿ ನಾನು ನನ್ನ ಅನುದಾನಲ್ಲಿ ಆಗಲಿ ಅಥವಾ ಬೇರೆ ಯಾವುದೇ ರೀತಿಯಲ್ಲಿ ಆದರೂ ಕೂಡಾ ನಾನು ಜೋಡಗುಡಿ ಮರುಳಸಿದ್ದೇಶ್ವರ ದೇವಾಲಯದ ಕಾಂಪೌಂಡ್ ನಿರ್ಮಾಣ ಮಾಡಿಕೊಡುವುದಾಗಿ ಕಾಶಿ ಜಗದ್ಗುರುಗಳ ಸಮ್ಮುಖದಲ್ಲಿ ಘೋಷಣೆ ಮಾಡುತ್ತಿದ್ದಂತೆ ನೇರದ ಭಕ್ತಸಮೂಹ ಚಪ್ಪಾಳೆ ತಟ್ಟಿ ಹರ್ಷ ವ್ಯಕ್ತಪಡಿಸಿದ್ದರು.
ಈ ಮುಂಚೆ ಕೂಡಾ ನಾನು ಅನುದಾನ ಹಣ ನೀಡಿದ್ದೆನೆ. ರಾಷ್ಟೀಯ ಹೆದ್ದಾರಿ ಪಕ್ಕದಲ್ಲಿ ಇರುವ ಈ ದೇವಾಲಯ ಮುಂದಿನ ದಿನಗಳಲ್ಲಿ ದೊಡ್ಡ ಪ್ರೇಕ್ಷಣಿಯ ತಾಣವಾಗಿ ಬೆಳೆಯಲಿ ಎಂದು ಹೇಳಿದರು. ಈ ಕಾರ್ಯಕ್ರಮ ದಿವ್ಯ ಸಾನಿಧ್ಯವನ್ನು ಕಾಶಿ ಜಗದ್ಗುರುಗಳ ವಹಿಸಿದ್ದರು. ಈ ಸಂದರ್ಭದಲ್ಲಿ ತಡವಲಗಾ ಅಭಿನವ ರಾಚೋಟೇಶ್ವರ ಶಿವಾಚಾರ್ಯರು ಆಲಮೇಲದ ಚಂದ್ರಶೇಖರ ಶಿವಾಚಾರ್ಯರು ಜಿಗಜಿಣಗಿಯ ಮುಪ್ಪಿನಾರ್ಯ ಶಿವಾಚಾರ್ಯರು ಮಮದಾಪೂರ ಶ್ರೀಗಳು, ಶಿವಾನಂದಯ್ಯ ಶಾಸ್ತ್ರಿಗಳು, ನಿಕಟಪೂರ್ವ ದೆಹಲಿ ಪ್ರತಿನಿಧಿ ಶಂಕರಗೌಡ ಪಾಟೀಲ ಮಂಜುನಾಥ ವಂದಾಲ ನಾಗುಗೌಡ ಪಾಟೀಲ ಚಂದ್ರಶೇಖರ ಹೂಗಾರ ಬಾಬುಸಾಹುಕಾರ ಮೇತ್ರಿ ಬಸವರಾಜ ಇಂಡಿ ಚಂದ್ರಶೇಖರ ರೂಗಿ ತಮ್ಮಣ್ಣ ಪೂಜಾರಿ ಅಣ್ಣಾರಾಯ ಮದರಿ ಮಳಸಿದ್ದಪ್ಪ ಖಸ್ಕಿ ಅಪ್ಪು ಇಂಡಿ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 