2 ಕೋಟಿ ರೂ. ವೆಚ್ಚದಲ್ಲಿ ದೇವಸ್ಥಾನದ ಜೀರ್ಣೋದ್ಧಾರ
Temple renovation at a cost of Rs. 2 crore
ಲೋಕದರ್ಶನ ವರದಿ
ಬೆಳಗಾವಿ 14: ಬೆಳಗಾವಿಯ ಸಹ್ಯಾದ್ರಿ ನಗರದಲ್ಲಿ ಸುಮಾರು 2 ಕೋಟಿ ರೂ.ಗಳ ವೆಚ್ಚದಲ್ಲಿ ಜೀರ್ಣೋದ್ಧಾರಗೊಂಡಿರುವ ಶ್ರೀ ಮಹಾಬಳೇಶ್ವರ ದೇವಸ್ಥಾನವನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಶನಿವಾರ ಉದ್ಘಾಟಿಸಿದರು.
ಜನರ ನೆಮ್ಮದಿಯೇ ನನಗೆ ಮುಖ್ಯವಾಗಿದ್ದು, ಗ್ರಾಮೀಣ ಕ್ಷೇತ್ರದಲ್ಲಿ 150ಕ್ಕೂ ಹೆಚ್ಚು ದೇವಸ್ಥಾನಗಳನ್ನು ಜೀರ್ಣೋದ್ಧಾರ ಮಾಡಲಾಗಿದೆ. ಇಲ್ಲಿ 2 ಕೋಟಿ ರೂ. ವೆಚ್ಚದಲ್ಲಿ ಶಿವನ ದೇವಸ್ಥಾನ ನಿರ್ಮಾಣ ಮಾಡಲಾಗಿದ್ದು, ಶಿವರಾತ್ರಿಯ ಸಂದರ್ಭದಲ್ಲೇ ಉದ್ಘಾಟನೆ ಮಾಡುತ್ತಿರುವುದು ಖುಷಿ ತಂದಿದೆ ಎಂದು ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.
ಇದೇ ವೇಳೆ ಸಚಿವರ ಹುಟ್ಟು-ಹಬ್ಬದ ಪ್ರಯುಕ್ತ ಹಮ್ಮಿಕೊಳ್ಳಲಾಗಿದ್ದ ವಿಶೇಷ ಪೂಜೆ ಹಾಗೂ ಹೋಮದಲ್ಲಿ ಅವರು ಪಾಲ್ಗೊಂಡು, ನಾಡಿನ ಸುಭೀಕ್ಷೆಗಾಗಿ ಪ್ರಾರ್ಥನೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಸ್ಥಳೀಯ ನಿವಾಸಿಗಳು, ದೇವಸ್ಥಾನ ಜೀರ್ಣೋದ್ಧಾರ ಸಮಿತಿಯ ಸದಸ್ಯರು, ಮೃಣಾಲ್ ಹೆಬ್ಬಾಳಕರ್ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 