ಜಾಗೃತಿ ವಿಡಿಯೊ ಬಳಿಕ ತೆಂಡೂಲ್ಕರ್ ದಾನ
ನವದೆಹಲಿ, ಮಾ 27 ಜಾಗತಿಕವಾಗಿ
ಭಯಭೀತಗೊಳಿಸಿರುವ ಕೊರೊನಾ ವೈರಸ್ ವಿರುದ್ಧ ಹೋರಾಟ ನಡೆಸುತ್ತಿರುವ ಭಾರತ ಸರಕಾರಕ್ಕೆ
ಹಲವು ಕ್ರೀಡಾಪಟುಗಳು ಈಗಾಗಲೇ ನೆರವಿನ ಹಸ್ತ ಚಾಚಿದ್ದಾರೆ. ಇದೀಗ ಮಾಸ್ಟರ್ ಬ್ಲಾಸ್ಟರ್
ಸಚಿನ್ ತೆಂಡೂಲ್ಕರ್ ಸಹ ಸರಕಾರಕ್ಕೆ 50 ಲಕ್ಷ ರೂ. ನೆರವು ಘೋಷಿಸಿದ್ದಾರೆ.ಇತ್ತೀಚೆಗಷ್ಟೇ
ತಮ್ಮ ಟ್ವೀಟರ್ ಖಾತೆಯಲ್ಲಿ ಕೊರೊನಾ ವೈರಸ್ ತಡೆಗಟ್ಟುವ ಕುರಿತಾದ ವಿಡಿಯೋ ಸಂದೇಶ
ಹಂಚಿಕೊಂಡಿದ್ದ ಸಚಿನ್, ಇದೀಗ ಜಾಗತಿಕ ಪಿಡುಗಾಗಿರುವ ಕೊರೊನಾ ವಿರುದ್ಧ ಹೋರಾಟಕ್ಕೆ 50
ಲಕ್ಷ ರೂಪಾಯಿ ನೀಡಲು ನಿರ್ಧರಿಸಿದ್ದಾರೆ ಎಂದು ವಿಶ್ವಾಸನೀಯ ಮೂಲಗಳು ತಿಳಿಸಿವೆ. ''ಜಾಗೃತಿ
ಮೂಡಿಸುವ ನಿಟ್ಟಿನಲ್ಲಿ ನಿಯಮಿತವಾಗಿ ವಿಡಿಯೊಗಳನ್ನು ಹಂಚಿಕೊಳ್ಳುತ್ತಿರುವ ಸಚಿನ್
ಪ್ರಧಾನ ಮಂತ್ರಿಗಳ ಪರಿಹಾರ ನಿಧಿ ಮತ್ತು ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ತಲಾ 25
ಲಕ್ಷ ರೂ. ಕೊಡುಗೆ ನೀಡಲು ನಿರ್ಧರಿಸಿದ್ದಾರೆ. ಈ ಹಿಂದೆ ಅವರು, ಆಸ್ಟ್ರೇಲಿಯಾದಲ್ಲಿ
ಬುಷ್ಫೈರ್ನಂತಹ ದೇಣಿಗೆಗಳ ಭಾಗವಾಗಿದ್ದರು ಮತ್ತು ಈ ಪ್ರಯತ್ನದ ಸಮಯದಲ್ಲಿ
ಒಗ್ಗೂಡುವುದು ಮುಖ್ಯ ಎಂದು ನಂಬಿದ್ದಾರೆ,'' ಎಂದು ಮೂಲಗಳು ತಿಳಿಸಿವೆ.
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್
ವಿವಾಹಿತೆಯ ಜೊತೆ ಪಲಾಯನ ಮಾಡಿದ ಯುವಕನ ಮನೆ ಧ್ವಂಸ : ಮಾರಕಾಸ್ತ್ರ ಹಿಡಿದು 50ಕ್ಕು ಹೆಚ್ಚು ಜನರಿಂದ ಕೃತ್ಯ
ಬೆಳಗಾವಿಯ ನಡುರಸ್ತೆಯಲ್ಲಿ ಹೊತ್ತಿ ಉರಿದ ಕಾರು : ತಡರಾತ್ರಿ ಘಟನೆಯಿಂದ ಬೆಚ್ವಿಬಿದ್ದ ಜನ 