ಜಾಗೃತಿ ವಿಡಿಯೊ ಬಳಿಕ ತೆಂಡೂಲ್ಕರ್ ದಾನ
ನವದೆಹಲಿ, ಮಾ 27 ಜಾಗತಿಕವಾಗಿ
ಭಯಭೀತಗೊಳಿಸಿರುವ ಕೊರೊನಾ ವೈರಸ್ ವಿರುದ್ಧ ಹೋರಾಟ ನಡೆಸುತ್ತಿರುವ ಭಾರತ ಸರಕಾರಕ್ಕೆ
ಹಲವು ಕ್ರೀಡಾಪಟುಗಳು ಈಗಾಗಲೇ ನೆರವಿನ ಹಸ್ತ ಚಾಚಿದ್ದಾರೆ. ಇದೀಗ ಮಾಸ್ಟರ್ ಬ್ಲಾಸ್ಟರ್
ಸಚಿನ್ ತೆಂಡೂಲ್ಕರ್ ಸಹ ಸರಕಾರಕ್ಕೆ 50 ಲಕ್ಷ ರೂ. ನೆರವು ಘೋಷಿಸಿದ್ದಾರೆ.ಇತ್ತೀಚೆಗಷ್ಟೇ
ತಮ್ಮ ಟ್ವೀಟರ್ ಖಾತೆಯಲ್ಲಿ ಕೊರೊನಾ ವೈರಸ್ ತಡೆಗಟ್ಟುವ ಕುರಿತಾದ ವಿಡಿಯೋ ಸಂದೇಶ
ಹಂಚಿಕೊಂಡಿದ್ದ ಸಚಿನ್, ಇದೀಗ ಜಾಗತಿಕ ಪಿಡುಗಾಗಿರುವ ಕೊರೊನಾ ವಿರುದ್ಧ ಹೋರಾಟಕ್ಕೆ 50
ಲಕ್ಷ ರೂಪಾಯಿ ನೀಡಲು ನಿರ್ಧರಿಸಿದ್ದಾರೆ ಎಂದು ವಿಶ್ವಾಸನೀಯ ಮೂಲಗಳು ತಿಳಿಸಿವೆ. ''ಜಾಗೃತಿ
ಮೂಡಿಸುವ ನಿಟ್ಟಿನಲ್ಲಿ ನಿಯಮಿತವಾಗಿ ವಿಡಿಯೊಗಳನ್ನು ಹಂಚಿಕೊಳ್ಳುತ್ತಿರುವ ಸಚಿನ್
ಪ್ರಧಾನ ಮಂತ್ರಿಗಳ ಪರಿಹಾರ ನಿಧಿ ಮತ್ತು ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ತಲಾ 25
ಲಕ್ಷ ರೂ. ಕೊಡುಗೆ ನೀಡಲು ನಿರ್ಧರಿಸಿದ್ದಾರೆ. ಈ ಹಿಂದೆ ಅವರು, ಆಸ್ಟ್ರೇಲಿಯಾದಲ್ಲಿ
ಬುಷ್ಫೈರ್ನಂತಹ ದೇಣಿಗೆಗಳ ಭಾಗವಾಗಿದ್ದರು ಮತ್ತು ಈ ಪ್ರಯತ್ನದ ಸಮಯದಲ್ಲಿ
ಒಗ್ಗೂಡುವುದು ಮುಖ್ಯ ಎಂದು ನಂಬಿದ್ದಾರೆ,'' ಎಂದು ಮೂಲಗಳು ತಿಳಿಸಿವೆ.
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ 