ಕಾಶ್ಮೀರದ ವಿಶೇಷ ಅಧಿಕಾರ ರದ್ದು ಭಾರತದ ಆಂತರಿಕ ವಿಷಯ: ಹರಿಂದರ್ ಸಿಧು
ನವದೆಹಲಿ, ಆ. 31 ಜಮ್ಮು ಕಾಶ್ಮೀರಕ್ಕೆ ನೀಡಿದ್ದ ವಿಶೇಷ ಅಧಿಕಾರ ರದ್ದುಗೊಳಿಸುವ ಕೇಂದ್ರ ಸರ್ಕಾರದ ನಿರ್ಧಾರ ಭಾರತದ ಆಂತರಿಕ ವಿಷಯ ಎಂದು ನವದೆಹಲಿಯಲ್ಲಿನ ಆಸ್ಟ್ರೇಲಿಯಾ ಹೈಕಮಿಷನರ್ ಹರಿಂದರ್ ಸಿಧು ಹೇಳಿದ್ದಾರೆ.
ಕಾಶ್ಮೀರ ಸಮಸ್ಯೆಯನ್ನು ನವದೆಹಲಿ ಮತ್ತು ಇಸ್ಲಾಮಾಬಾದ್ ದ್ವಿಪಕ್ಷೀಯವಾಗಿ ಬಗೆಹರಿಸಬೇಕು ಎಂದು ಅವರು ಒತ್ತಿ ಹೇಳಿದರು.
ಇದು ತನ್ನ ಆಂತರಿಕ ವಿಷಯ ಎಂದು ಭಾರತ ಸರ್ಕಾರ ಹೇಳಿದೆ. ಅದನ್ನು ನಾವು ಸಮ್ಮತಿಸುತ್ತೇವೆ ಮತ್ತು ಗೌರವಿಸುತ್ತೇವೆ. ಈ ವಿಷಯವನ್ನು ಭಾರತ ಮತ್ತು ಪಾಕಿಸ್ತಾನ ದ್ವಿಪಕ್ಷೀಯವಾಗಿಯೇ ಪರಿಹರಿಸಿಕೊಳ್ಳಬೇಕು ಎಂಬುದು ಆಸ್ಟ್ರೇಲಿಯಾದ ನಿಲುವು ಕೂಡ ಆಗಿದೆ ಎಂದು ಅವರು ತಿಳಿಸಿದರು.
ಈ ಪ್ರದೇಶದಲ್ಲಿ ಶಾಂತಿ ನೆಲೆಸಿದರೆ ಆರ್ಥಿಕವಾಗಿಯೂ ಅಭಿವೃದ್ಧಿಯಾಗಲಿದೆ ಎಂಬ ಆಶಯ ವ್ಯಕ್ತಪಡಿಸಿದರು.
ಎರಡೂ ದೇಶಗಳು ಸಂಯಮದಿಂದ ವರ್ತಿಸಿ ಜನರ ಸುರಕ್ಷತೆಗೆ ಹೆಚ್ಚಿನ ಗಮನ ಕೊಡಲಿದೆ ಎಂದು ನಾವು ಭಾವಿಸುವುದಾಗಿ ಅವರು ಹೇಳಿದರು.
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ 