ಅಯೋಧ್ಯೆ ಭೇಟಿ ಮುಂದೂಡಿದ ಉದ್ದವ್ ಠಾಕ್ರೆ
ಅಯೋಧ್ಯೆ, ನ.18 : ಮಹಾರಾಷ್ಟ್ರದಲ್ಲಿ ಶಿವಸೇನೆಯ ಮೊದಲ ಮುಖ್ಯಮಂತ್ರಿಯಾಗಲು ಪ್ರಯತ್ನದಲ್ಲಿ ತೊಡಗಿರುವ ಪಕ್ಷದ ಮುಖ್ಯಸ್ಥ ಉದ್ದವ್ ಠಾಕ್ರೆ ಅವರು ನವೆಂಬರ್ 24 ರಂದು ತಮ್ಮ ಉದ್ದೇಶಿತ ಅಯೋಧ್ಯೆ ಭೇಟಿಯನ್ನು ಮುಂದೂಡುವ ಸಾಧ್ಯತೆ ಇದೆ. ಠಾಕ್ರೆ ಮಹಾರಾಷ್ಟ್ರದಲ್ಲಿ ಸರ್ಕಾರ ರಚನೆಯಲ್ಲಿ ನಿರತರಾಗಿದ್ದಾರೆ, ಆದ್ದರಿಂದ ಅವರ ಉದ್ದೇಶಿತ ಅಯೋಧ್ಯೆಯ ಭೇಟಿಯನ್ನು ಮುಂದೂಡಲಾಗಿದೆ ಎಂದು ಪಕ್ಷದ ಮೂಲಗಳು ಸೋಮವಾರ ತಿಳಿಸಿವೆ ಅಯೋಧ್ಯೆ ವಿವಾದದ ಬಗ್ಗೆ ಸುಪ್ರೀಂ ಕೋರ್ಟ್ ನವೆಂಬರ್ 9ರಂದು ತೀಪು ನೀಡಿದ ನಂತರ, ಠಾಕ್ರೆ ಅವರು ನವೆಂಬರ್ 24 ರಂದು ರಾಮ್ ಲಲ್ಲಾ ಮಂದಿರಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸುವುದಾಗಿ ಘೋಷಿಸಿದ್ದರು. ಸುಪ್ರೀಂಕೋರ್ಟ್ ತೀರ್ಪುನ ನಂತರ ಶಿವಸೇನೆ ಮುಖ್ಯಸ್ಥರು ಈ ದಿನವನ್ನು ದೇಶಕ್ಕೆ ಐತಿಹಾಸಿಕ ದಿನವೆಂದು ಬಣ್ಣಿಸಿದ್ದರು. ರಾಮ ಮಂದಿರ ಆಂದೋಲನಕ್ಕಾಗಿ ಸಮರ್ಪಣೆ ಮಾಡಿದ್ದಕ್ಕಾಗಿ ಧನ್ಯವಾದ ಹೇಳಲು ಬಿಜೆಪಿ ಮುಖಂಡ ಲಾಲ್ ಕೃಷ್ಣ ಅಡ್ವಾಣಿಯವರನ್ನು ಭೇಟಿ ಮಾಡುವುದಾಗಿಯೂ ಅವರು ಘೋಷಿಸಿದ್ದರು. ಆದರೆ, ಬಿಜೆಪಿ ಮತ್ತು ಶಿವಸೇನೆ ನಡುವಿನ ಸಂಬಂಧವು ಮಹಾರಾಷ್ಟ್ರದಲ್ಲಿ ಸರ್ಕಾರ ರಚನೆಯ ವಿಷಯದಲ್ಲಿ ಹದಗೆಟ್ಟಿರುವುದರಿಂದ ಉಭಯ ಪಕ್ಷಗಳ ಮೈತ್ರಿ ಮುರಿದುಬಿದ್ದಿದೆ.
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ 