‘ಇಂಡಿಯಾ’ ಮೈತ್ರಿಕೂಟ ಲೋಕಸಭೆಗೆ ಮಾತ್ರ ಸೀಮಿತವಾಗಿತ್ತು: ಅರವಿಂದ ಕೇಜ್ರಿವಾಲ್
The 'India' alliance was limited to the Lok Sabha only
ಅಹಮದಾಬಾದ್ 03: ಕಳೆದ ವರ್ಷ ನಡೆದ ಲೋಕಸಭೆ ಚುನಾವಣೆಗಾಗಿ ಮಾತ್ರವೇ ‘ಇಂಡಿಯಾ’ ಮೈತ್ರಿಕೂಟವನ್ನು ರಚಿಸಲಾಗಿತ್ತು. ಕಾಂಗ್ರೆಸ್ನೊಂದಿಗೆ ನಮ್ಮ ಪಕ್ಷ ಯಾವುದೇ ಮೈತ್ರಿ ಹೊಂದಿಲ್ಲ ಎಂದು ಆಮ್ ಆದ್ಮಿ ಪಕ್ಷದ ಮುಖ್ಯಸ್ಥ ಅರವಿಂದ ಕೇಜ್ರಿವಾಲ್ ಹೇಳಿದ್ದಾರೆ.
ಇಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ‘ಗುಜರಾತ್ನಲ್ಲಿ ಆಡಳಿತಾರೂಢ ಬಿಜೆಪಿಗೆ ಕಾಂಗ್ರೆಸ್ ಸಹಾಯ ಮಾಡುತ್ತಿದೆ. ಎಎಪಿ ಹಾಗೂ ಕಾಂಗ್ರೆಸ್ ಮಧ್ಯೆ ಯಾವುದೇ ಮೈತ್ರಿ ಇಲ್ಲ. ಜುನಾಗಢ ಜಿಲ್ಲೆಯ ವಿಸಾವದರ್ ಕ್ಷೇತ್ರಕ್ಕೆ ನಡೆದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಏಕೆ ನಮ್ಮ ವಿರುದ್ಧ ಸ್ಪರ್ಧಿಸಿತು? ನಮ್ಮನ್ನು ಸೋಲಿಸಲು ಅದು ಹೀಗೆ ಮಾಡಿದೆ. ನಮ್ಮ ಮತಗಳನ್ನು ಒಡೆಯಲು ಬಿಜೆಪಿಯೇ ಕಾಂಗ್ರೆಸ್ ಅನ್ನು ಚುನಾವಣೆಗೆ ಕಳುಹಿಸಿತ್ತು’ ಎಂದು ದೂರಿದರು.
‘ಎಎಪಿ ಗೆಲುವು ಸಾಧಿಸಿತು. ಸೋತ ಕಾಂಗ್ರೆಸ್ಗೆ ಬಿಜೆಪಿ ಛೀಮಾರಿ ಹಾಕಿದೆ. ವಿರೋಧ ಪಕ್ಷಗಳ ‘ಇಂಡಿಯಾ’ ಮೈತ್ರಿಕೂಟವು ಕಳೆದ ವರ್ಷ ನಡೆದ ಲೋಕಸಭೆ ಚುನಾವಣೆಯಲ್ಲಿ ಒಟ್ಟಾಗಿ ಸ್ಪರ್ಧಿಸುವ ಉದ್ದೇಶವನ್ನು ಮಾತ್ರ ಹೊಂದಿತ್ತು. ಈಗ ಯಾವ ಮೈತ್ರಿಯೂ ಇಲ್ಲ. ಗುಜರಾತ್ನಲ್ಲಿ 30 ವರ್ಷಗಳಿಂದ ಆಡಳಿತದಲ್ಲಿರುವ ಬಿಜೆಪಿ, ರಾಜ್ಯವನ್ನು ಹಾಳು ಮಾಡಿದೆ. ವಿಪಕ್ಷವಾಗಿ ಕಾಂಗ್ರೆಸ್ ಕೂಡ ವಿಫಲವಾಗಿದೆ’ ಎಂದು ಟೀಕಿಸಿದರು.
‘ಇಂದಿನಿಂದ ‘ಗುಜರಾತ್ ಜೋಡೊ ಅಭಿಯಾನ’ವನ್ನು ಪಕ್ಷವು ಹಮ್ಮಿಕೊಂಡಿದೆ. ನಮ್ಮ ಸಂಖ್ಯೆಗೆ ಮಿಸ್ಡ್ ಕಾಲ್ ನೀಡುವ ಮೂಲಕ ಜನರು ಎಎಪಿಯನ್ನು ಸೇರಬಹುದು. ನಮ್ಮ ಕಾರ್ಯಕರ್ತರೂ ಎಲ್ಲಾ ಮನೆಗಳಿಗೆ ತೆರಳಲಿದ್ದಾರೆ. ಎಎಪಿಯು ಯುವಜನರ ಪಕ್ಷ. ಭ್ರಷ್ಟಾಚಾರ ರಹಿತ ಗುಜರಾತ್ಗಾಗಿ ನಮ್ಮ ಪಕ್ಷದೊಂದಿಗೆ ಕೈ ಜೋಡಿಸಿ ಎಂದು ಯುವಜನರಲ್ಲಿ ಮನವಿ ಮಾಡುತ್ತೇನೆ’ ಎಂದು ಕೇಜ್ರಿವಾಲ್ ಹೇಳಿದರು.
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 