ಆಯೋಧ್ಯೆ ಕುರಿತ ತೀರ್ಪು, ಸುನ್ನಿ ವಕ್ಫ್ ಮಂಡಳಿ ನಿರ್ಧಾರಕ್ಕೆ ಬಿಜೆಪಿ ಸ್ವಾಗತ
sriram
ನವದೆಹಲಿ, ನ 26: ಆಯೋಧ್ಯೆ ವಿವಾದ ಕುರಿತ ಸುಪ್ರೀಂ ಕೋರ್ಟ್ ತೀರ್ಪನ್ನು ಗೌರವಿಸಿ, ಆದರ ವಿರುದ್ದ ಮರು ಪರಿಶೀಲನಾ ಆರ್ಜಿ ಸಲ್ಲಿಸದಿರಲು ಸುನ್ನಿ ವಕ್ಫ್ ಮಂಡಳಿಯ ಕೈಗೊಂಡಿರುವ ನಿರ್ಧಾರವನ್ನು ಬಿಜೆಪಿ ಸ್ವಾಗತಿಸಿದೆ.
ಮುಸ್ಲಿಂ ಸಮಾಜದ ಭಾವನೆಗಳನ್ನು ಅರ್ಥಮಾಡಿಕೊಂಡು, ಎರಡು ಸಮುದಾಯಗಳ ನಡುವೆ ವೈಮಮಸ್ಸು, ಭಿನ್ನಾಭಿಪ್ರಾಯ ಸೃಷ್ಟಿಸುವಂತಹ ಯಾವುದೇ ಕ್ರಮ ಕೈಗೊಳ್ಳದಂತೆ ಅಖಿಲ ಭಾರತ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿಗೆ ಮತ್ತೆ ಬಿಜೆಪಿ ಮನವಿ ಮಾಡಿದೆ.
ಆಯೋಧ್ಯೆ ರಾಮಜನ್ಮ ಭೂಮಿ ವಿವಾದ ಕುರಿತು ಸುಪ್ರೀಂ ಕೋರ್ಟ್ ತೀರ್ಪು ಪ್ರಕಟಿಸುವ ಮುನ್ನ ದೇಶದ ಎಲ್ಲ ಮುಸ್ಲಿಂ ಧರ್ಮಗುರುಗಳು ಹಾಗೂ ಹಿಂದೂ ಸಂತರು ನ್ಯಾಯಾಲಯ ಯಾವುದೇ ತೀರ್ಪು ಪ್ರಕಟಿಸಿದರೂ ಅದನ್ನು ಶಾಂತಿಯುತವಾಗಿ, ವಿನಮ್ರವಾಗಿ ಸ್ವೀಕರಿಸುವುದಾಗಿ ಹೇಳಿದ್ದರು ಎಂದು ಬಿಜೆಪಿ ಹಿರಿಯ ವಕ್ತಾರ ಸಯ್ಯದ್ ಶಹನವಾಜ್ ಹುಸೇನ್ ಮಂಗಳವಾರ ಹೇಳಿದ್ದಾರೆ.
ಅದರಂತೆ, ಸುಪ್ರೀಂ ಕೋರ್ಟ್ ತೀರ್ಪನ್ನು ಗೌರವಿಸಿ, ಅದರ ವಿರುದ್ದ ಯಾವುದೇ ಮರು ಪರಿಶೀಲನಾ ಆರ್ಜಿ ಸಲ್ಲಿಸದಿರಲು ಬಾಬ್ರಿ ಮಸೀದಿ ಪ್ರತಿನಿಧಿ ಅಕ್ಮಲ್ ಅನ್ಸಾರಿ ಹಾಗೂ ಸುನ್ನಿ ವಕ್ಫ್ ಮಂಡಳಿ ನಿರ್ಧರಿಸಿದೆ ಎಂದು ತಿಳಿಸಿದ್ದಾರೆ.
ಈ ಸಂಬಂಧ ಸುನ್ನಿ ವಕ್ಫ್ ಮಂಡಳಿಯ ಕೈಗೊಂಡಿರುವ ನಿರ್ಧಾರ ಅತ್ಯಂತ ಮಹತ್ವದ್ದು, ದೇಶಾದ್ಯಂತ ಮಂಡಳಿಯ ನಿರ್ಧಾರ ಪ್ರಶಂಸೆಗೆ ಒಳಗಾಗಿದೆ. ಬಿಜೆಪಿಯೂ ಈ ನಿರ್ಧಾರವನ್ನು ಸ್ವಾಗತಿಸುತ್ತದೆ ಎಂದು ತಿಳಿಸಿದರು.
ಮುಸ್ಲಿಂ ಜನರ ಭಾವನೆ ಹಾಗೂ ದೇಶದ ಸಾಮಾನ್ಯ ಜನರ ಭಾವನೆಗಳನ್ನು ಅರ್ಥ ಮಾಡಿಕೊಂಡು ಎರಡು ಸಮಮುದಾಯಗಳ ನಡುವೆ ಭಿನ್ನಾಭಿಪ್ರಾಯ ಮೂಡುವಂತಹ ಯಾವುದೇ ಕ್ರಮ ಕೈಗೊಳ್ಳದಂತೆ ಅಖಿಲ ಭಾರತ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ ಹಾಗೂ ಅದರ ಪದಾಧಿಕಾರಿಗಳನ್ನು ಮತ್ತೊಮ್ಮೆ ಮನವಿ ಮಾಡುವುದುದಾಗಿ ಹೇಳಿದರು.
ಸಮಾಜದಲ್ಲಿನ ಸಮುದಾಯಗಳ ನಡುವೆ ಸೌಹಾರ್ಧತೆ ಹೆಚ್ಚಲು ನೆರವಾಗುವಂತೆ, ದೇಶದ ಹಿತದೃಷ್ಟಿಯಿಂದ ಸುಪ್ರೀಂ ಕೋರ್ಟ್ ತೀರ್ಪನ್ನು ಒಪ್ಪಿಕೊಳ್ಳಬೇಕು ಎಂದು ಅವರು ಮನವಿ ಮಾಡಿದ್ದಾರೆ.
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ 