ಲಾಕ್ಡೌನ್ ಸಮಯದಲ್ಲಿ ಬಡವರಿಗೆ ಉಚಿತ ಹಾಲು ನೀಡುವ ಯೋಜನೆಗೆ ಮುಖ್ಯಮಂತ್ರಿ ಚಾಲನೆ
ಬೆಂಗಳೂರು, ಏ.2, ಬಡವರಿಗೆ ಉಚಿತ ಹಾಲು ವಿತರಿಸುವ ಯೋಜನೆಗೆ ಬೆಂಗಳೂರಿನ ಅಶ್ವಥ್ ನಗರದಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಇಂದು ಚಾಲನೆ ನೀಡಿದರು.ಕೆಎಂಎಫ್ನ ಹೆಚ್ಚುವರಿ ಹಾಲನ್ನು ಖರೀದಿಸಿ ಬಡವರಿಗೆ ವಿಸ್ತರಿಸುವ ಯೋಜನೆ ಇದಾಗಿದೆ. ಮುಖ್ಯಮಂತ್ರಿ ಮತ್ತು ಸಚಿವರ ತಂಡ ಈ ಪ್ರದೇಶದಲ್ಲಿ ಮನೆ ಮನೆಗೂ ತೆರಳಿ ಹಾಲು ವಿತರಿಸುವ ಮೂಲಕ ಈ ಯೋಜನೆಗೆ ಚಾಲನೆ ನೀಡಿದರು. ಉಪಮುಖ್ಯಮಂತ್ರಿ ಅಶ್ವತ್ಥ ನಾರಾಯಣ, ಸಚಿವ ಶಿವರಾಮ್ ಹೆಬ್ಬಾರ್ ಮೊದಲಾದವರು ಮುಖ್ಯಮಂತ್ರಿಗೆ ಸಾಥ್ ನೀಡಿದರು.ಈ ಬಗ್ಗೆ ಟ್ವೀಟ್ ಮಾಡಿರುವ ಮುಖ್ಯಮಂತ್ರಿ ಯಡಿಯೂರಪ್ಪ, ಕೊರೊನಾ ಸೋಂಕು ನಿರ್ಮೂಲನೆಗಾಗಿ ಲಾಕ್ ಡೌನ್ ಜಾರಿಯಲ್ಲಿದ್ದಾಗಲೂ ರೈತರಿಂದ ಅಬಾಧಿತವಾಗಿ ಹಾಲು ಖರೀದಿಸಲು ಕೆಎಂಎಫ್ ಗೆ ಸೂಚಿಸಲಾಗಿತ್ತು. ಹಾಗೆ ರೈತರಿಂದ ಖರೀದಿಸಲಾಗುತ್ತಿರುವ ಹಾಲಿನ ಪೈಕಿ ಸುಮಾರು 7.5 ಲಕ್ಷ ಲೀಟರ್ ಹಾಲನ್ನು ಬಡವರಿಗೆ ಉಚಿತವಾಗಿ ಹಂಚಬೇಕು ಎಂಬ ನಿರ್ಧಾರಕ್ಕೆ ಬಂದಿದ್ದೆವು. ಅದರಂತೆ ಇಂದಿನಿಂದ ಬೆಂಗಳೂರಿನ ಅಶ್ವತ್ಥ ನಗರದ ಕೊಳಗೇರಿ ನಿವಾಸಿಗಳಿಗೆ ಉಚಿತವಾಗಿ ಹಾಲು ವಿತರಿಸುವುದರ ಮೂಲಕ ಈ ವ್ಯವಸ್ಥೆಗೆ ಚಾಲನೆ ನೀಡಲಾಯಿತು ಎಂದು ಯಡಿಯೂರಪ್ಪ ತಿಳಿಸಿದ್ದಾರೆ.
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್ 