ಬಾಲ ನ್ಯಾಯ ಕಾಯ್ದೆ, ಪೋಕ್ಸೊ ಕಾಯ್ದೆ ಅರಿವು ಕಾರ್ಯಕ್ರಮ ಯಶಸ್ವಿ
ಕೊಪ್ಪಳ 18: ಕೊಪ್ಪಳ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ವಕೀಲರ ಸಂಘ, ಸಾರ್ವಜನಿಕ ಶಿಕ್ಷಣ ಇಲಾಖೆ ಇವರ ಸಯುಕ್ತಾಶ್ರಯದಲ್ಲಿ ಜನವರಿ. 17 ರಂದು ಹಮ್ಮಿಕೊಂಡಿದ್ದ "ಬಾಲ ನ್ಯಾಯ ಕಾಯ್ದೆ ಮತ್ತು ಪೋಕ್ಸೊ ಕಾಯ್ದೆ" ಕುರಿತು ವಿಶೇಷ ಕಾನೂನು ಅರಿವು-ನೆರವು ಕಾರ್ಯಕ್ರಮವು ಯಶಸ್ವಿಯಾಗಿ ಜರುಗಿತು.
ಕೊಪ್ಪಳ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಸದಸ್ಯ ಕಾರ್ಯದರ್ಶಿಗಳಾದ ಟಿ. ಶ್ರೀನಿವಾಸ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಮಕ್ಕಳಿಗೆ ಸಂಬಂಧಿಸಿದ ಕಾನೂನುಗಳಲ್ಲಿ ಬಾಲ ನ್ಯಾಯ ಕಾಯ್ದೆಯು ಅತ್ಯಂತ ಶಕ್ತಿಶಾಲಿಯಾಗಿದೆ. ಇತ್ತೀಚಿನ ದಿನಗಳಲ್ಲಿ ಹೆಣ್ಣು ಮಕ್ಕಳ ಮೇಲೆ ದೌರ್ಜನ್ಯ ಮತ್ತು ಅತ್ಯಾಚಾರ ಪ್ರಕರಣಗಳು ಹೆಚ್ಚುತ್ತಿವೆ. ಸಂತ್ರಸ್ತ ಮಗು ಮತ್ತು ಕುಟುಂಬಕ್ಕೆ ಸೂಕ್ತ ರಕ್ಷಣೆ, ಪೋಷಣೆ, ಕಾನೂನಿನ ನೆರವು ಮತ್ತು ಪುನರ್ವಸತಿ ಕಲ್ಪಿಸಲು ಪೋಕ್ಸೊ ಕಾಯ್ದೆ-2012ನ್ನು ಜಾರಿಗೆ ತರಲಾಗಿದ್ದು, ಈ ಕಾಯ್ದೆಯಡಿಯಲ್ಲಿ ಹೆಣ್ಣು ಮಕ್ಕಳಿಗೆ ಸಮಾಜದಲ್ಲಿ ಸೂಕ್ತ ರಕ್ಷಣೆ ಒದಗಿಸಲಾಗುತ್ತದೆ. ಇಷ್ಟೆಲ್ಲ ಕಠಿಣ ಕಾಯ್ದೆಗಳಿದ್ದರೂ ಸಹ ವರ್ಷದಿಂದ ವರ್ಷಕ್ಕೆ ಪೋಕ್ಸೋ ಕಾಯ್ದೆಯಡಿ ಪ್ರಕರಣಗಳು ಹೆಚ್ಚುತ್ತಿವೆ ಎಂದು ಕಳವಳ ವ್ಯಕ್ತಪಡಿಸಿದರು. ಕಾರ್ಯಕ್ರಮದಲ್ಲಿ ಮಕ್ಕಳ ವಿಶೇಷ ಪೋಲಿಸ್ ಘಟಕದ ಬಸಪ್ಪ ಹಾದಿಮನಿ ಇವರು ಮಕ್ಕಳ ಹಕ್ಕುಗಳ ಕುರಿತು ವಿಶೇಷ ಉಪನ್ಯಾಸ ನೀಡಿದರು. ಹಾಗೂ ವಕೀಲರಾದ ಸಾವಿತ್ರಿ ಮುಜಮದಾರ ಇವರು ಮಕ್ಕಳಿಗಾಗಿ ಇರುವ ವಿಶೇಷ ಅವಶ್ಯಕ ಕಾನೂನುಗಳ ಬಗ್ಗೆ ಮತ್ತು ಸಮಾಜದ ಸುವ್ಯವಸ್ಥೆ ಕಾಪಾಡುವಲ್ಲಿ ಮಹಿಳೆಯರ ಪಾತ್ರ ಹಾಗೂ ಮಹಿಳೆಯರ ಮೇಲೆ ಆಗುತ್ತಿರುವ ದೌರ್ಜನ್ಯಗಳನ್ನು ಯಾವ ರೀತಿಯಿಂದ ಎದುರಿಸಿ ರಕ್ಷಿಸಿಕೊಳ್ಳಬೇಕೆಂಬ ಕುರಿತು ವಿಶೇಷ ಉಪನ್ಯಾಸ ನೀಡಿದರು.
ಕೊಪ್ಪಳ ಬಾಲಕರ ಸರ್ಕಾರಿ ಪ್ರೌಢ ಶಾಲೆಯ ಪ್ರಾಂಶುಪಾಲರಾದ ಪ್ರಾಣೇಶ ಜಿ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ಕೊಪ್ಪಳ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಆಡಳಿತ ಸಹಾಯಕ ಶಿವಕುಮಾರ ಗೋನಾಳ ಹಾಗೂ ಬಾಲಕರ ಸರ್ಕಾರಿ ಪ್ರೌಢ ಶಾಲೆ ಶಿಕ್ಷಕರು ಹಾಗೂ ಇತರರು ಹಾಜರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 