ಸಂವಿಧಾನ ನಮ್ಮೆಲ್ಲರ ಭರವಸೆಯಾಗಿದೆ-ಸಿದ್ದಪ್ಪ ಲಿಂಗದಾಳ
The Constitution is the hope of all of us - Siddappa Lingadala
ಗದಗ 26 : 1948 ರಲ್ಲಿ ಡಾ.ಬಿ ಆರ್ ಅಂಬೇಡ್ಕರ ನೇತೃತ್ವದ ಸಮಿತಿ ಸಂವಿಧಾನ ಕರಡನ್ನು ಪೂರ್ಣಗೊಳಿಸಿ ಸಂವಿಧಾನ ಸಭೆಯಲ್ಲಿ ಮಂಡಿಸಿತು. 1949 ನವ್ಹಂಬರ್ 26ರಂದು ಸರ್ಕಾರ ಅಂಗೀಕರಿಸಿತು. ಅದರ ನೆನಪಿಗಾಗಿ ಪ್ರತಿ ವರ್ಷ ಸಂವಿಧಾನ ದಿನಾಚರಣೆಯನ್ನು ಆಚರಿಸಿಲಾಗುತ್ತಿದೆ ಎಂದು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಘಟಕದ ಕಾರ್ಯಾಧಕ್ಷ ಸಿದ್ದಪ್ಪ ಲಿಂಗದಾಳ ಹೇಳಿದರು.
ಬುಧವಾರ ಗದಗ ತಾಲೂಕಾ ಆರೋಗ್ಯಾಧಿಕಾರಿಗಳ ಕಾರ್ಯಾಲಯದಲ್ಲಿ ಏರಿ್ಡಸಲಾಗಿದ್ದ ಭಾರತ ಸಂವಿಧಾನದ ದಿನಾಚರಣೆಯ ಸಂಮಾರಂಭದಲ್ಲಿ ತಾಲೂಕಾ ಆರೋಗ್ಯ ಶಿಕ್ಷಣಾಧಿಕಾರಿ ಡಾ.ರಾಜೇಂದ್ರ ಗಡಾದ ಮಾತನಾಡಿ ನ್ಯಾಯ, ಸ್ವಾತಂತ್ರ ಸಮಾನತೆ ಸಂವಿಧಾನ ನೀಡಿರುವ ಅಮೂಲ್ಯ ಕೊಡುಗೆಗಳಾಗಿದ್ದು ಭಾರತದ ಶಕ್ತಿ ಸಂವಿಧಾನದಲ್ಲಿದೆ ಭವ್ಯವಾದ ರಾಷ್ಟ್ರ ನಿರ್ಮಿಸಲು ಸಂವಿಧಾನವನ್ನು ಗೌರವಿಸೋಣ ಮತ್ತು ಪಾಲಿಸೋಣ ಎಂದು ಹೇಳಿ ಸಂವಿಧಾನ ಪೀಠಿಕೆಯ ಪ್ರತಿಜ್ಷಾ ವಿಧಿ ಭೋಧಿಸಿದರು.
ಸಮಾರಂಭದ ಅದ್ಯಕ್ಷತೆಯನ್ನು ವಹಿಸಿದ ತಾಲೂಕಾ ಆರೋಗ್ಯಾಧಿಕಾರಿ ಡಾ ಪ್ರೀತ್ ಖೋನಾ ಮಾತನಾಡಿ ನಾವುಗಳು ನಮ್ಮ ನಮ್ಮ ಜವಾಬ್ದಾರಿ ಮತ್ತು ಕರ್ತವ್ಯಗಳ ಪಾಲನೆಯೊಂದಿಗೆ ಒಳ್ಳೆಯ ಮಾನವರಾಗಿ ಹೆಮ್ಮೆಯ ಪ್ರಜೆಗಳಾಗಿ ಸಂವಿಧಾನಕ್ಕೆ ಗೌರವ ನೀಡುವ ಮೂಲಕ ಸಂವಿಧಾನದ ಆಶಯದಲ್ಲಿ ಮುನ್ನಡೆಯೋಣ ಎಂದರು. ಪುಷ್ಟಾವತಿ ಮಡಿವಾಳರ ಪ್ರಾರ್ಥಿಸಿದರು, ಗುಡದಪ್ಪ ಜಗ್ಗಿನ ಇವರು ಸ್ವಾಗತಿಸಿದರು. ಬೂದೇಶ ಶಿದ್ದನಗೌಡರ ನಿರೂಪಿಸಿದರು. ಸಲ್ಮಾನ ಸಾಂತಗೇರಿ ವಂದಿಸಿದರು. ಕಾರ್ಯಕ್ರಮದಲ್ಲಿ ಆರ್.ಬಿ.ಎಸ್.ಕೆ ವೈದ್ಯಾಧಿಕಾರಿಗಳಾದ ಡಾ.ಜಯಕುಮಾರ ಬ್ಯಾಳಿ ಡಾ. ಅಶ್ವಿನಿ, ಸರೋಜಾ ಕಟ್ಟಿಮನಿ, ವಾಯ್.ಎನ್ ಕಡೆಮನಿ, ಬಿ.ಎಸ್ ಹಿರೇಹಾಳ ಮುಂತಾದವರು ಪಾಲ್ಗೊಂಡಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 