ರಾಜ್ಯಪಾಲರ ಭಾಷಣದಲ್ಲಿ ಸಾಲಮನ್ನಾ ಪ್ರಸ್ತಾಪವಿಲ್ಲ ಆದರೆ ರೈತರಿಗಾಗಿ ಸಕರ್ಾರ ಬದ್ಧ
ರಾಜ್ಯಪಾಲ ವಿಆರ್ ವಾಲಾ ಅವರು ಸುಮಾರು 19 ಪುಟಗಳ ಸುದೀರ್ಘ ಭಾಷಣ
ಬೆಂಗಳೂರು: ರೈತರ, ಹಿಂದುಳಿದ, ಶೋಷಿತರ, ಮಹಿಳೆಯರ ಅಭಿವೃದ್ಧಿಗೆ ರಾಜ್ಯ ಸಕರ್ಾರ ಕಟಿ ಬದ್ಧವಾಗಿದೆ. ನನ್ನ ಸಕರ್ಾರ ಜನರ ಸಮಸ್ಯೆ ನಿವಾರಣೆಗೆ ಸಿದ್ಧವಾಗಿದೆ ಎಂದು ಮೈತ್ರಿ ಸಕರ್ಾರದ ಮೊದಲ ವಿಧಾನಮಂಡಲದ ಜಂಟಿ ಅಧಿವೇಶನವನ್ನು ಉದ್ದೇಶಿಸಿ ರಾಜ್ಯಪಾಲ ವಜೂಭಾಯ್ ವಾಲಾ ಹೇಳಿದರು.
ಸೋಮವಾರ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸಕರ್ಾರದ ಮೊದಲ ವಿಧಾನಮಂಡಲದ ಜಂಟಿ ಅಧಿವೇಶನಕ್ಕೆ ಚಾಲನೆ ನೀಡಿದರು. ಹತ್ತು ದಿನಗಳ ಕಾಲ ಅಧಿವೇಶನ ನಡೆಯಲಿದೆ.
ಸುಮಾರು 19 ಪುಟಗಳ ಸುದೀರ್ಘ ಭಾಷಣವನ್ನು ರಾಜ್ಯಪಾಲ ವಿಆರ್ ವಾಲಾ ಅವರು ಮಾಡಿದರೂ ಕೂಡಾ ಭಾರೀ ನಿರೀಕ್ಷೆ ಹುಟ್ಟಿಸಿದ್ದ ಸಾಲಮನ್ನಾದ ವಿಚಾರ ಭಾಷಣದಲ್ಲಿ ಪ್ರಸ್ತಾಪ ಆಗಿಲ್ಲ. ಆದರೆ ಪರೋಕ್ಷವಾಗಿ ರೈತರ ಸಾಲಮನ್ನಾದ ಬಗ್ಗೆ ಸುಳಿವು ನೀಡಿದೆ.
ರೈತರೇ ಆತ್ಮಹತ್ಯೆ ಮಾಡಿಕೊಳ್ಳಬೇಡಿ. ರೈತರ ಸಮಸ್ಯೆ ನಿವಾರಣೆಗೆ ನನ್ನ ಸಕರ್ಾರ ಬದ್ಧವಾಗಿದೆ. ಅಲ್ಲದೇ ರೈತರು ಇಸ್ರೇಲ್ ಮಾದರಿಯ ಕೃಷಿಯನ್ನು ಅನುಸರಿಸಬೇಕು. ಇದಕ್ಕೆ ಬೇಕಾದ ಪೂರಕ ವಾತಾವರಣವನ್ನು ಸಕರ್ಾರ ಕಲ್ಪಿಸಿಕೊಡಲಿದೆ ಎಂದು ಹೇಳಿದರು.
ಸೈಬರ್ ಕ್ರೈಂ ತಡೆಗೆ ಸೂಕ್ತ ವ್ಯವಸ್ಥೆ ರೂಪಿಸಲಾಗುವುದು. . ಸೈಬರ್ ಅಪರಾಧಿಗಳ ನಿಯಂತ್ರಣಕ್ಕೆ ಪೊಲೀಸ್ ಇಲಾಖೆ ಸಿದ್ಧವಾಗಿದೆ. ಪ್ಲಾಸ್ಟಿಕ್ ನಿಯಂತ್ರಣಕ್ಕೆ ನಿಯಮ ರೂಪಿಸಲಾಗಿದೆ ಎಂದರು.
ಸಾಲಮನ್ನಾ ಬಗ್ಗೆ ಬಜೆಟ್ ವರೆಗೆ ಕಾಯಿರಿ. ಬಜೆಟ್ ನ ಯಾವ ಅಂಶವನ್ನೂ ರಾಜ್ಯಪಾಲರ ಭಾಷಣದಲ್ಲಿ ಸೇರಿಸಿಲ್ಲ ಎಂದು ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಮಾಧ್ಯಮವೊಂದಕ್ಕೆ ಪ್ರತಿಕ್ರಿಯೆ ನೀಡಿದ್ದಾರೆ. ಜುಲೈ 5ರಂದು ಮಂಡಿಸುವ ಬಜೆಟ್ ನಲ್ಲಿ ಸಾಲಮನ್ನಾ ಬಗ್ಗೆ ಘೋಷಿಸುವುದಾಗಿ ಸ್ಪಷ್ಟಪಡಿಸಿದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 