ಓಲಾ, ಊಬರ್ ಮಾದರಿಯಂತೆ ರೈತರ ನೆರವಿಗೆ ಈಗ ಕಿಸಾನ್ ರಥ
ನವದೆಹಲಿ,
ಏ 18, ಕರೋನ ನಿವಾರಣೆಗಾಗಿ ಆರೋಗ್ಯ ಸೇತು ಮಾದರಿಯಂತೆ ಈಗ ರೈತರ ಪಾಲಿಗೆ
ವರವಾಗುವ ಕಿಸಾನ್ ರಥ ಆಪ್ ಸಿಹಿಸುದ್ದಿ ಬಂದಿದೆ. ರೈತರ ಹಣ್ಣು ಕಾಯಿ ತರಕಾರಿ
ಮುಂತಾದ ಉತ್ಪನ್ನಗಳನ್ನೂ ಸಾಗಾಣಿಕೆ ಮಾಡಲು ಅನುಕೂಲವಾಗುವಂತೆ ಓಲಾ ಹಾಗೂ ಊಬರ್ ಗಳು
ಕಾರ್ಯ ನಿರ್ವಹಿಸುವ ರೀತಿಯಂತೆ ಕಿಸಾನ್ ರಥ ಸಿದ್ದವಾಗಿದೆ.ಇದಕ್ಕಾಗಿ ಆಪ್
ಕೂಡ ಸಿದ್ದಪಡಿಸಲಾಗಿದೆ. ಲಾಕ್ ಡೌನ್ ನಿಂದ ತಮ್ಮ ಬೆಳೆಗಳನ್ನು ಮಾರುಕಟ್ಟೆಗೆ
ಸಾಗಿಸಲು ಪರದಾಡುತ್ತಿರುವ ರೈತರ ಸಮಸ್ಯೆಗಳನ್ನು ಬಗೆಹರಿಸಲು ಇದು ವರದಾನವಾಗಿದೆ.
ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಅವರು ಈ ಆಪ್ ನ್ನು ಬಿಡುಗಡೆ ಮಾಡಿದ್ದು,
ಲಾಕ್ ಡೌನ್ ನಿಂದ ರೈತರು ತಮ್ಮ ಬೆಳೆಗಳನ್ನು ಮಾರುಕಟ್ಟೆಗೆ ಸಾಗಿಸಬಹುದಾಗಿದೆ. ಕಿಸಾನ್ ರಥ ದ ಮೂಲಕ ರೈತರು ತಾವು ಬೆಳೆದ ಬೆಳೆಗಳನ್ನು ಮಾರುಕಟ್ಟೆಗೆ ಸಾಗಿಸಬಹುದು ಎಂದು ಹೇಳಿದ್ದಾರೆ.ಕೇಂದ್ರ
ಸರ್ಕಾರವು ಬಿಡುಗಡೆ ಮಾಡಿರುವ ಈ ನೂತನ ಕಿಸಾನ್ ರಥ್ ಮೂಲಕ ರೈತರು ತಮ್ಮ ಬೆಳೆಗಳನ್ನು
ಒಂದು ಜಾಗದಿಂದ ಮತ್ತೊಂದು ಜಾಗಕ್ಕೆ ಸಾಗಿಸಬಹುದಾಗಿದೆ. ತಕ್ಷಣದ ಅಗತ್ಯವನ್ನು
ಪೂರೈಸಲು ಮನಗಂಡ ಕೇಂದ್ರ ಸರ್ಕಾರ ಉಪಯೋಗ ಮಾಡಿಕೊಂಡು ರೈತರ ನೆರವಿಗೆ ಧಾವಿಸಿದೆ.
ಅನೆಕಲ್ಲು, ಮಳೆ ಅಬ್ಬರಕ್ಕೆ 39 ಕುರಿಗಳ ಸಾವು : ಬೀದಿಗೆ ಬಂತು ಬಡವನ ಬದುಕು
ಮಳೆಯ ಅವಾಂತರ : ನದಿಯಂತಾದ ರಾಷ್ಟ್ರೀಯ ಹೆದ್ದಾರಿ, ವಾಹನಗಳು ಸಿಲುಕಿ ಪರದಾಡಿದ ಪ್ರಯಾಣಿಕರು
ಬೆಳಗಾವಿಯಲ್ಲಿ ಆನೆಕಲ್ಲು ಮಿಶ್ರಿತ ಗಾಳಿ ಮಳೆಯ ಅರ್ಭಟಕ್ಕೆ ಜನಜೀವನ ಅಸ್ತವ್ಯಸ್ತ
ಹಣ ದ್ವಿಗುಣ ಹೆಸರಲ್ಲಿ ಜನರಿಗೆ ವಂಚಿಸುತ್ತಿದ್ದ ಅಂತರಾಜ್ಯ ಖದೀಮರ ಬಂಧನ : ಗೋಕಾಕ ಪೊಲೀಸರ ಕಾರ್ಯಕ್ಕೆ ಎಸ್ ಪಿ ಶ್ಲಾಘನೆ
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ 