ಚಿನ್ನದ ಸರ ಮರಳಿಸಿ ಪ್ರಾಮಾಣಿಕತೆ ಮರೆದ ಪ್ರಭು
The Lord who returned the gold chain and forgot his honesty
ಚಿನ್ನದ ಸರ ಮರಳಿಸಿ ಪ್ರಾಮಾಣಿಕತೆ ಮರೆದ ಪ್ರಭು
ಶಿಗ್ಗಾವಿ 01: ತಾಲೂಕಿನ ಹುಲಗೂರ ಗ್ರಾಮದ ಎಟಿಎಂ ಒಂದರ ಬಳಿ ಸಿಕ್ಕಿದ್ದ 2.50 ಲಕ್ಷ ರೂ. ಮೌಲ್ಯದ 25 ಗ್ರಾಂ ಚಿನ್ನದ ಸರವನ್ನು ಹುಲಗೂರ ಪೊಲೀಸ್ ಠಾಣೆಗೆ ಒಪ್ಪಿಸುವ ಮೂಲಕ ಗ್ರಾಮದ ಪ್ರಭು ಬಸವಣ್ಣೆಪ್ಪ ಬೀಳಗಿ ಪ್ರಾಮಾಣಿಕತೆ ಮೆರೆದಿದ್ದಾರೆ. ತಾಲೂಕಿನ ಬಸನಾಳ ಗ್ರಾಮದ ಲಲಿತಾ ರುದ್ರ್ಪ ಒಡ್ಡಟ್ಟಿ ಎಂಬುವರು ಹುಲಗೂರ ಗ್ರಾಮದ ಎಟಿಎಂ ಬಳಿ ಚಿನ್ನದ ಸರ ಕಳೆದುಕೊಂಡಿದ್ದರು. ಮಧ್ಯಾಹ್ನ ಎಟಿಎಂ ಬಳಿ ಬಂದಿದ್ದ ಪ್ರಭು ಬೀಳಗಿ ಅವರಿಗೆ ಸರ ಸಿಕ್ಕಿತ್ತು. ಪ್ರಭು ಆ ಸರವನ್ನು ತೆಗೆದುಕೊಂಡು ಹೋಗಿ ಹುಲಗೂರ ಪೊಲೀಸ್ ಠಾಣೆಗೆ ಒಪ್ಪಿಸಿದ್ದರು. ಹುಲಗೂರ ಠಾಣೆ ಪಿಎಸ್ಐ ಪರಶುರಾಮ ಕಟ್ಟಿಮನಿ ಹಾಗೂ ತಂಡ, ಸರ ಕಳೆದುಕೊಂಡಿದ್ದ ಲಲಿತಾ ಅವರನ್ನು ಪತ್ತೆ ಮಾಡಿ, ಗುರುವಾರ ಠಾಣೆಗೆ ಕರೆಸಿ ಪ್ರಭು ಅವರ ಸಮ್ಮುಖದಲ್ಲಿ ಲಲಿತಾ ಅವರಿಗೆ ಸರವನ್ನು ಒಪ್ಪಿಸಿದರು. ತಾಯಿ- ಮಗನಿಗೆ ಸನ್ಮಾನ: ಲಕ್ಷಾಂತರ ರೂ. ಮೌಲ್ಯದ ಚಿನ್ನದ ಸರವನ್ನು ಕಳೆದುಕೊಂಡವರಿಗೆ ಒಪ್ಪಿಸುವ ಮೂಲಕ ಪ್ರಾಮಾಣಿಕತೆ ಮೆರೆದ ಪ್ರಭು ಹಾಗೂ ಅವರ ತಾಯಿ ರತ್ನಮ್ಮ ಬೀಳಗಿ ಅವರನ್ನು ಇಲಾಖೆ ಪರವಾಗಿ ಪಿಎಸ್ಐ ಪರಶುರಾಮ ಕಟ್ಟಿಮನಿ ಸನ್ಮಾನಿಸಿದರು. ಠಾಣೆ ಅಧಿಕಾರಿ, ಸಿಬ್ಬಂದಿ, ಗ್ರಾಮದ ಹಿರಿಯರು ಉಪಸ್ಥಿತರಿದ್ದರು.
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ 