ಸಮಾಜದ ಸ್ವಾಸ್ಥ್ಯಕ್ಕೆ ಮಾಧ್ಯಮ ಬಹು ಪರಿಣಾಮಕಾರಿ: ಸೋಮಶೇಖರ ರೆಡ್ಡಿ
ಬಳ್ಳಾರಿ: ಸಮಾಜದ ಅಭಿವೃದ್ದಿಗಾಗಿ ಆಡಳಿತ ನಡೆಸುವವರು, ಸರಿದಾರಿಯಲ್ಲಿ ಹೋಗದಿದ್ದಾಗ ಎಚ್ಚರಿಸಿ ಸಮಾಜದ ಸ್ವಾಸ್ಥ್ಯ ಕಾಪಾಡಲು ಇಂದಿನಿಂದಲೂ ಮಾಧ್ಯಮಗಳ ಪಾತ್ರ ಮಹತ್ವ ಪೂರ್ಣವಾದುದು ಎಂದು ನಗರ ಶಾಸಕ ಗಾಲಿ ಸೋಮಶೇಖರ ರೆಡ್ಡಿ ಹೇಳಿದ್ದಾರೆ.
ಅವರು ನಿನ್ನೆ ಸಂಜೆ ಬಳ್ಳಾರಿ ಪತ್ರಕರ್ತರು ನಗರದ ಸಾಂಸ್ಕೃತಿಕ ಸಮುಚ್ಚಯದ ಬಯಲು ರಂಗ ಮಂದಿರದಲ್ಲಿ ಹಮ್ಮಿಕೊಂಡಿದ್ದ ಪತ್ರಿಕಾ ದಿನಾಚರಣೆಗೆ ಸುರಿಯುತ್ತಿದ್ದ ಜಿಟಿ ಜಿಟಿ ಮಳೆಯ ನಡುವೆ ಚಾಲನೆ ನೀಡಿ ಮಾತನಾಡುತ್ತಿದ್ದರು.
ಮಾಧ್ಯಮಗಳು ಇಂದು ಹಲವು ರೀತಿಯಲ್ಲಿ ವಿಸ್ತಾರಗೊಂಡಿವೆ. ಪತ್ರಿಕೆ, ರೇಟಿಯೋ, ಟಿವಿ, ವೆಬ್ ಚಾಲನ್, ಪೋರ್ಟಲ್, ಸಮಾಜಿಕ ಜಲಾತಾಣಗಳಿಂದಲೂ ಇಂದಿನ ಆಗು ಹೋಗುಗಳ ಮಾಹಿತಿ ನೀಡುವುದರ ಜೊತೆ. ಸಮಾಜದಲ್ಲಿ ನಡೆಯುವ ತಪ್ಪು ಒಪ್ಪುಗಳನ್ನು ಸಹ ತಕ್ಷಣದಲ್ಲಿ ಪ್ರತಿಬಿಂಬಿಸುವ ಕಾರ್ಯ ಮಾಡುತ್ತಿವೆ ಎಂದರು.
ವಾತರ್ಾ ಇಲಾಖೆಯ ಹಿರಿಯ ಸಹಾಯಕ ನಿದರ್ೇಶಕ ಬಿ.ಕೆ.ರಾಮಲಿಂಗಪ್ಪ ಅಧ್ಯಕ್ಷತೆ ವಹಿಸಿದ್ದರು. ಎಸ್ಪಿ ಅರುಣ್ ರಂಗರಾಜನ್, ಕನ್ನಡ ಮತ್ತು ಸಂಸ್ಕೃತಿ ಇಲಾಕೆಯ ಸಹಾಯಕ ನಿದರ್ೇಶಕ ಬಿ.ನಾಗರಾಜ್ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು.
ಸಮಾರಂಭಕ್ಕೂ ಮುನ್ನ ಸಾಯಿ ಶೃತಿ ಮತ್ತು ಶ್ರೀನಿವಾಸರೆಡ್ಡಿ ಅವರಿಂದ ಗಾಯನ, ಸೂರ್ಯ ಕಲಾ ಟ್ರಸ್ಡ್ ಮಕ್ಕಳಿಂದ ಆಕರ್ಷಕ ನೃತ್ಯ ಕಾರ್ಯಕ್ರಮ ನಡೆಯಿತು. ಮಾಧ್ಯಮ ಪ್ರತಿನಿಧಿಗಳಾದ ಸುರೇಶ್ ಚವ್ಹಾಣ್ ಕಾರ್ಯಕ್ರಮ ನಿರೂಪಣೆ ಮಾಡಿದರೆ, ನರಸಿಂಹ ಮೂತರ್ಿ ಕುಲಕಣರ್ಿ ಸ್ವಾಗತಿಸಿದರು
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 