ಡಿಕೆಶಿ ಭೇಟಿಯಾದ ಮುಸ್ಲಿಂ ನಿಯೋಗ
ಬೆಂಗಳೂರು, ಜೂನ್ 12,ಇದೇ ತಿಂಗಳ 29ರಂದು ನಡೆಯಲಿರುವ ಮೇಲ್ಮನೆ ಚುನಾವಣೆಗೆ ಮುಸ್ಲಿಂ ಅಭ್ಯರ್ಥಿಯನ್ನು ಪರಿಗಣಿಸಬೇಕೆಂದು ಕೇಂದ್ರದ ಮಾಜಿ ಸಚಿವ ಹಾಗೂ ರಾಜ್ಯಸಭೆಯ ಮಾಜಿ ಉಪ ಸಭಾಪತಿ ಕೆ.ರೆಹಮಾನ್ ಖಾನ್ ನೇತೃತ್ವದ ಮುಸ್ಲಿಂ ಮುಖಂಡರ ನಿಯೋಗ ಗುರುವಾರ ರಾತ್ರಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿತು.ನಿವೃತ್ತಿಯಾಗಲಿರುವ ಏಳು ಸ್ಥಾನಗಳ ಪೈಕಿ ಎರಡು ಸ್ಥಾನಗಳು ಕಾಂಗ್ರೆಸ್ ಪಾಲಾಗಲಿದ್ದು,ಎರಡು ಸ್ಥಾನಗಳಲ್ಲಿ ಒಂದನ್ನು ಮುಸ್ಲಿಂ ಸಮುದಾಯದ ಅಭ್ಯರ್ಥಿಗೆ ನೀಡಬೇಕೆಂದು ನಿಯೋಗದಿಂದ ಮನವಿ ಸಲ್ಲಿಸಲಾಯಿತು.ಮೇಲ್ಮನೆಗೆ ಸಲೀಂ ಅಹಮದ್, ನಾಸೀರ್ ಅಹಮದ್, ಅಬ್ದುಲ್ ಜಬ್ಬಾರ್, ಶಾಕೀರ್ ಸನದಿ ಆಕಾಂಕ್ಷಿಗಳಾಗಿದ್ದು, ನಾಸೀರ್ ಮತ್ತು ಅಬ್ದುಲ್ ಜಬ್ಬಾರ್ ಮರು ಆಯ್ಕೆ ಬಯಸಿದ್ದಾರೆ.ನಿಯೋಗದಲ್ಲಿ ರಾಜ್ಯಸಭಾ ಸದಸ್ಯ ಡಾ.ನಾಸಿರ್ ಹುಸೇನ್, ಶಾಸಕರಾದ ತನ್ವೀರ್ ಸೇಠ್, ಜಮೀರ್ ಅಹ್ಮದ್ ಖಾನ್, ಎನ್.ಎ ಹ್ಯಾರಿಸ್, ರಹೀಮ್ ಖಾನ್, ರಿಜ್ವಾನ್ ಅರ್ಷದ್ ಇದ್ದರು.
ಅಧಿಕಾರ ದರ್ಪ : ಖಾನಾಪುರ ತಹಸೀಲ್ದಾರ್ ವಿರುದ್ಧ ಶಿಸ್ತುಕ್ರಮಕ್ಕೆ ಪಿಡಿಒಗಳಿಂದ ಡಿಸಿ, ಚು. ಆಯೋಗಕ್ಕೆ ದೂರು
ಗಗನಯಾನ ಮಿಷನ್ಗಾಗಿ ಮಹತ್ವದ ಪ್ಯಾರಾಶೂಟ್ ಏರ್ಡ್ರಾಪ್ ಪರೀಕ್ಷೆಯನ್ನು ಇಸ್ರೋ ಯಶಸ್ವಿಯಾಗಿ ನಡೆಸಿತು
ಗದಗದಲ್ಲಿ ಮಾನಸಿಕ ಅಸ್ವಸ್ಥ ಯುವತಿಯ ಮೇಲೆ ಅತ್ಯಾಚಾರ ಆರೋಪ
ಹಿಡಕಲ್ ಜಲಾಶಯದ ನೀರಿನಲ್ಲಿ ವೃದ್ದೆಯ ಶವ ಪತ್ತೆ : ಹಳೇಗುಡನಟ್ಟಿ ಬಳಿ ಘಟನೆ
ಡ್ರಗ್ ಅವೇರ್ನೆಸ್ ವೀಕ್: ಆಚರಣೆ, ಕಾರ್ಯಾಚರಣೆ 12.38 ಲಕ್ಷ ಮಾಕದ ವಶ, 16 ಪ್ರಕರಣ ದಾಖಲು, 4 ಬಂಧನ
ರಾಜ್ಯ ನೇಕಾರರ ಸಂಘದಿಂದ ನಾಳೆ ಬೆಳಗಾವಿ ಚಲೋ ಕಾರ್ಯಕ್ರಮ : ಸಿಎಂ ಮುಂದೆ ಬೇಡಿಕೆಗಳ ಪಟ್ಟಿ 