ಮೈಸೂರು ಮೃಗಾಲಯಕ್ಕೆ 21.14 ಲಕ್ಷ ರೂ. ಚೆಕ್ ನೀಡಿದ ಸಹಕಾರ ಸಚಿವ
ಮೈಸೂರು, ಮೇ 7, ಮೈಸೂರು ಜಯಚಾಮರಾಜೇಂದ್ರ ಮೃಗಾಲಯದ ನಿರ್ವಹಣೆಗೋಸ್ಕರ ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಅವರು 3ನೇ ಹಂತವಾಗಿ ಗುರುವಾರ 21.14 ಲಕ್ಷ ರೂಪಾಯಿ ಚೆಕ್ ಅನ್ನು ಮೃಗಾಲಯದ ಕಾರ್ಯನಿರ್ವಾಹಕ ನಿರ್ದೇಶಕ ಅಜಿತ್ ಕುಲಕರ್ಣಿ ಅವರಿಗೆ ಹಸ್ತಾಂತರಿಸಿದರು. ಇದೇ ವೇಳೆ, ಉಸ್ತುವಾರಿ ಸಚಿವರ ಮನವಿ ಮೇರೆಗೆ ಕೆ.ಆರ್.ಪುರಂ ವಿಧಾನಸಭಾ ಕ್ಷೇತ್ರದ ವತಿಯಿಂದ ನಗರಾಭಿವೃದ್ಧಿ ಸಚಿವ ಬಿ.ಎ. ಬಸವರಾಜು ಅವರು 84 ಲಕ್ಷ ರೂಪಾಯಿ ಚೆಕ್ ಅನ್ನು ಸಚಿವ ಸೋಮಶೇಖರ್ ಮೂಲಕ ಮೃಗಾಲಯಕ್ಕೆ ಹಸ್ತಾಂತರಿಸಿದರು.ಈ ಮೂಲಕ ಗುರುವಾರ ಒಂದೇ ದಿನ ಮೃಗಾಲಯಕ್ಕೆ ಒಟ್ಟಾರೆ 1,05,14,000 ರೂಪಾಯಿಯನ್ನು ದೇಣಿಗೆಯಾಗಿ ನೀಡಿದಂತಾಗಿದೆ. ಸೋಮಶೇಖರ್ ಅವರು ಇದುವರೆಗೆ ತಮ್ಮ ಕ್ಷೇತ್ರ ಹಾಗೂ ಇತರ ಸಚಿವರಿಂದ ಮೃಗಾಲಯಕ್ಕೆ ಒಟ್ಟಾರೆಯಾಗಿ 2,31,60,000 ರೂಪಾಯಿಯನ್ನು ದೇಣಿಗೆಯಾಗಿ ನೀಡಿದಂತಾಗಿದೆ.
ತಲ್ವಾರ್ ಹಲ್ಲೆ: ಒಂದೇ ಗಂಟೆಯಲ್ಲಿ 6 ಆರೋಪಿಗಳ ಬಂಧಿಸಿದ ಮಾಳಮಾರುತಿ ಪೋಲೀಸರು : ತನಿಖೆ ಚುರುಕು
ಹಳೇಯ ವೈಷಮ್ಯ : ಮೂವರ ಮೇಲೆ ತಲ್ವಾರ್ ನಿಂದ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ 