ಭೂಗ್ರಹದ ಸಮೃದ್ಧ ಜೀವವೈವಿಧ್ಯತೆ ಸಂರಕ್ಷಿಸುವ ಸಂಕಲ್ಪಕ್ಕೆ ಪ್ರಧಾನಿ ಕರೆ
ನವದೆಹಲಿ, ಜೂನ್ 5, ಭೂಗ್ರಹದಲ್ಲಿನ ಸಸ್ಯ ಮತ್ತು ಪ್ರಾಣಿ-ಪಕ್ಷಿ ಸಂಕುಲವನ್ನು ಸಂರಕ್ಷಿಸುವಂತೆ ವಿಶ್ವ ಪರಿಸರ ದಿನಾಚರಣೆಯ ಸಂದರ್ಭದಲ್ಲಿ ಪ್ರಧಾನಿ ಶುಕ್ರವಾರ ಜನತೆಗೆ ಕರೆ ನೀಡಿದ್ದಾರೆ. ‘ನಮ್ಮ ಭೂಗ್ರಹದ ಸಮೃದ್ಧ ಜೀವವೈವಿಧ್ಯತೆಯನ್ನು ಕಾಪಾಡುವ ನಮ್ಮ ಸಂಕಲ್ಪವನ್ನು ನಾವು ಪುನರುಚ್ಚರಿಸುತ್ತೇವೆ. ಸಸ್ಯ ಮತ್ತು ಪ್ರಾಣಿ-ಪಕ್ಷಿ ಸಂರಕ್ಷಿಸಲು ಒಟ್ಟಾಗಿ ಸಾಧ್ಯವಾದಷ್ಟು ಕೆಲಸ ಮಾಡೋಣ. ಮುಂದಿನ ಪೀಳಿಗೆಗೆ ಇನ್ನೂ ಉತ್ತಮ ಪರಿಸರದ ಮತ್ತು ಸಮೃದ್ಧ ಜೀವವೈವಿಧ್ಯತೆಯ ಭೂಮಿಯನ್ನು ಕಾಪಾಡೋಣ' ಎಂದು ದೇಶಕ್ಕೆ ನೀಡಿದ ಸಂದೇಶದಲ್ಲಿ ನರೇಂದ್ರಮೋದಿ ಹೇಳಿದ್ದಾರೆ. ವಿಶ್ವ ಪರಿಸರ ದಿನವನ್ನು ಪ್ರತಿವರ್ಷ ಜೂನ್ 5 ರಂದು ಆಚರಿಸಲಾಗುತ್ತದೆ. ನಮ್ಮ ಪರಿಸರ ಸಂರಕ್ಷಣೆಗಾಗಿ ಜಾಗೃತಿ ಮತ್ತು ಕ್ರಮಗಳನ್ನು ಉತ್ತೇಜಿಸುವ ವಿಶ್ವಸಂಸ್ಥೆಯ ಪ್ರಮುಖ ವಾಹಕ ಇದಾಗಿದೆ.1974 ರಲ್ಲಿ ಮೊದಲ ಬಾರಿಗೆ ನಡೆದ ಈ ದಿನವನ್ನು ಆಚರಿಸಲಾಯಿತು. ಪರಿಸರ ಸಮಸ್ಯೆಗಳಿಂದ ಸಮುದ್ರ ಮಾಲಿನ್ಯ, ಜನಸಂಖ್ಯೆ ಏರಿಕೆ ಮತ್ತು ಜಾಗತಿಕ ತಾಪಮಾನ ಏರಿಕೆ, ಸುಸ್ಥಿರ ಬಳಕೆ ಮತ್ತು ವನ್ಯಜೀವಿ ಮೇಲಿನ ಅಪರಾಧಗಳ ಬಗ್ಗೆ ಜಾಗೃತಿ ಮೂಡಿಸುವ ಪ್ರಮುಖ ಅಭಿಯಾನವಾಗಿ ಈ ದಿನವನ್ನು ಆಚರಿಸಲಾಗುತ್ತದೆ.
ಅನೆಕಲ್ಲು, ಮಳೆ ಅಬ್ಬರಕ್ಕೆ 39 ಕುರಿಗಳ ಸಾವು : ಬೀದಿಗೆ ಬಂತು ಬಡವನ ಬದುಕು
ಮಳೆಯ ಅವಾಂತರ : ನದಿಯಂತಾದ ರಾಷ್ಟ್ರೀಯ ಹೆದ್ದಾರಿ, ವಾಹನಗಳು ಸಿಲುಕಿ ಪರದಾಡಿದ ಪ್ರಯಾಣಿಕರು
ಬೆಳಗಾವಿಯಲ್ಲಿ ಆನೆಕಲ್ಲು ಮಿಶ್ರಿತ ಗಾಳಿ ಮಳೆಯ ಅರ್ಭಟಕ್ಕೆ ಜನಜೀವನ ಅಸ್ತವ್ಯಸ್ತ
ಹಣ ದ್ವಿಗುಣ ಹೆಸರಲ್ಲಿ ಜನರಿಗೆ ವಂಚಿಸುತ್ತಿದ್ದ ಅಂತರಾಜ್ಯ ಖದೀಮರ ಬಂಧನ : ಗೋಕಾಕ ಪೊಲೀಸರ ಕಾರ್ಯಕ್ಕೆ ಎಸ್ ಪಿ ಶ್ಲಾಘನೆ
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ 