ನೆರೆ ಪರಿಸ್ಥಿತಿಯ ಬಗ್ಗೆ ನಮಗಿಂತ ಪ್ರಧಾನಿಗೆ ಚೆನ್ನಾಗಿ ಗೊತ್ತಿದೆ: ಯಡಿಯೂರಪ್ಪ
ಮೈಸೂರು, ಸೆ 7 ರಾಜ್ಯದ ನೆರೆ ಪರಿಸ್ಥಿತಿಯ ಬಗ್ಗೆ ನಮಗಿಂತ ಚೆನ್ನಾಗಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಗೊತ್ತಿದೆ, ಸದ್ಯದಲ್ಲಿಯೇ ಕೇಂದ್ರದಿಂದ ಸಿಹಿ ಸುದ್ದಿಯ ನಿರೀಕ್ಷೆಯಲ್ಲಿದ್ದೇವೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಿಳಿಸಿದ್ದಾರೆ. ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಧಾನಿಯವರು ರಾಜ್ಯಕ್ಕೆ ಬಂದು ಹೋಗಿದ್ದಾರೆ, ಅವರು ಇಸ್ರೋ ಸಂಸ್ಥೆ ಬಳಿ ಬಂದು ಮಾತನಾಡಿ ವಾಪಾಸ್ ಆಗಿದ್ದಾರೆ, ನಾನು ಅವರಿಗೆ ರಾಜ್ಯದ ನೆರೆ ಪರಿಸ್ಥಿತಿಯ ಬಗ್ಗೆ ಈಗಾಗಲೇ ಮಾಹಿತಿ ಕೊಟ್ಟಿದ್ದೇನೆ, ಕೇಂದ್ರ ಸಚಿವರಾದ ಅಮಿತ್ ಶಾ, ನಿರ್ಮಲಾ ಸೀತಾರಾಮ್ ಅವರು ರಾಜ್ಯಕ್ಕೆ ಬಂದು ಹೋಗಿದ್ದಾರೆ ಎಂದರು. ರಾಜ್ಯದ ಎಲ್ಲಾ ಅಭಿವೃದ್ಧಿ ಕೆಲಸಗಳನ್ನು ಕಡೆಗಣಿಸಿ ನೆರೆಪರಿಸ್ಥಿತಿ ನಿಭಾಯಿಸಲಾಗುತ್ತಿದೆ. ರಾಜ್ಯದ ಈ ಬಾರಿ ಬಂದ ಮಳೆಗೆ ಭಾರಿ ನಷ್ಟ ಉಂಟಾಗಿದ್ದು, ಸುಮಾರು 1.5 ಲಕ್ಷಕ್ಕೂ ಅಧಿಕ ಮನೆಗಳು ನಾಶವಾಗಿವೆ. ರಾಜ್ಯ ಸರ್ಕಾರ ಅದಕ್ಕೆ ಬೇಕಾದ ಎಲ್ಲ ಹಣವನ್ನು ನೀಡಲು ಮುಂದಾಗಿದೆ ಎಂದು ತಿಳಿಸಿದರು.
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 