ಪ್ರವಾದಿಯವರು ವಿಶ್ವಕ್ಕೆ ಸಮಾನತೆಯ ಸಂದೇಶ ಸಾರಿದ ಮಹಾನ್ ಶಾಂತಿಧೂತ
The Prophet was a great messenger of peace who brought a message of equality to the world
ಗಜೇಂದ್ರಗಡ 23: ಇಸ್ಲಾಂ ಧರ್ಮದ ಸ್ಥಾಪಕರಾದ ಪ್ರವಾದಿ ಮುಹಮ್ಮದ್ ಪೈಗಂಬರ್ ಅವರು ಮನುಕುಲದ ಉದ್ಧಾರಕ್ಕಾಗಿ ಶ್ರಮಿಸಿದ ಮಹಾನ್ ಮಾನವತಾವಾದಿಯಾಗಿದ್ದು, ವಿಶ್ವಕ್ಕೆ ಸಮಾನತೆಯ ಸಂದೇಶ ಸಾರಿದ್ದಾರೆ ಎಂದು ಪುರಸಭೆ ಸದಸ್ಯ ಶಿವರಾಜ್ ಘೋರೆ್ಡ ಹೇಳಿದರು.
ನಗರದ ಟೆಕ್ಕದ ದರ್ಗಾದಲ್ಲಿ ಈದ್ ಮೀಲಾದುನ್ನಬೀ ಪ್ರಯುಕ್ತ ಆಯೋಜಿಸಿದ್ದ ಮಕ್ಕಳ ಧಾರ್ಮಿಕ ನಾಥ್ ಬಯಾನ್ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.ಪ್ರವಾದಿ ಮುಹಮ್ಮದ್ ಪೈಗಂಬರ್ ಅವರು ಎಲ್ಲರನ್ನು ಸಮಾನವಾಗಿ ಕಾಣುವ ಮೂಲಕ ಸೌಹಾರ್ದತೆಯ ಸಂದೇಶ ನೀಡಿದವರು ಎಂದರು. ಪ್ರಾಸ್ತಾವಿಕವಾಗಿ ಅಂಜುಮನ್ ಇಸ್ಲಾಂ ಕಮೀಟಿ ಮಾಜಿ ಕಾರ್ಯದರ್ಶಿ ದಾವಲಸಾಬ ತಾಳಿಕೋಟಿ ಮಾತನಾಡಿ ಪ್ರವಾದಿ ಮುಹಮ್ಮದ್ ಪೈಗಂಬರ್ ಅವರು ಸಾಮಾಜಿಕ ಪಿಡುಗುಗಳ ವಿರುದ್ಧ ಹೋರಾಟ ನಡೆಸಿದ ವಿಶ್ವದ ಮಹಾನ್ ನಾಯಕರಾಗಿದ್ದು ಅಸಮಾನತೆ, ಗುಲಾಮಗಿರಿ ವಿರುದ್ಧ ಸಮರ ಸಾರಿದ ಜಗತ್ತಿನ ಸರ್ವಶ್ರೇಷ್ಠ ಸಮಾಜ ಸುಧಾಕರು ಎಂದರು.
60 ಕ್ಕೂ ಹೆಚ್ಚು ಮಕ್ಕಳು ನಾಥ್ ಬಯಾನ್ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ದಿವ್ಯ ಸಾನಿಧ್ಯ ವಹಿಸಿದ ಟೆಕ್ಕದ ದರ್ಗಾದ ಹಜರತ್ ನಿಜಾಮುದ್ದಿನಷಾ ಅಶ್ರಫಿ ಮಕಾನದಾರ ಆಶಿರ್ವಚನ ನೀಡಿದರು. ಅಂಜುಮನ್ ಇಸ್ಲಾಂ ಕಮೀಟಿ ಚೇರಮನ್ನ ಹಸನಸಾಬ ತಟಗಾರ, ಎ ಡಿ ಕೋಲಕಾರ ಮಾತನಾಡಿದರು.
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ 