ಸಮಾಜಮುಖಿ ಕಾರ್ಯವೇ ರೋಟರಿ ಸಂಸ್ಥೆ ಗುರಿ
ಅಥಣಿ(ಶಿವಪುತ್ರ ಯಾದವಾಡ): ಸಮಾಜಮುಖಿ ಕಾರ್ಯವೇ ರೋಟರಿ ಸಂಸ್ಥೆ ಗುರಿ ಎಂದು ರೋಟರಿ ಕ್ಲಬ್ ಅಧ್ಯಕ್ಷ ಶ್ರೀಕಾಂತ ಕುಲಕರ್ಣಿ ಮಾತನಾಡುತ್ತಾ ಅಥಣಿ ತಾಲೂಕಿನಲ್ಲಿ ಎರಡು ದಶಕಗಳಿಂದ ರೋಟರಿ ಸಂಸ್ಥೆ ಸಮಾಜಮುಖಿ ಕಾರ್ಯ ಮಾಡುತ್ತ ಮುಂದೆ ಸಾಗಿದೆ. ಇಂದಿನ ವಿದ್ಯಾರ್ಥಿಗಳು ಸಮಾಜ ಕಾರ್ಯಗಳಲ್ಲಿ ತೋಡಗಬೇಕಾದರೆ , ತಮ್ಮ ಕಲಿಕೆಯೊಂದಿಗೆ ಸಮಾಜ ಸೇವೆಯನ್ನು ರುಡಿಸಿಕೊಳ್ಳಬೇಕು. ಎಂದು ಕಿವಿ ಮಾತು ಹೇಳಿದರು.
ಸ್ಥಳಿಯ ರಾಷ್ಟ್ರ ಪ್ರಶಸ್ತಿ ಭೂಷಿತ ವಿಮೋಚನಾ ಸಂಸ್ಥೆಯ ಸಂತರಾಮ ಪಿಯು ಮಹಾವಿದ್ಯಾಲಯದಲ್ಲಿ ಸಮಾಜ ಸೇವೆಯಲ್ಲಿ ತೋಡಗಿರುವ ರೋಟರಿ ಸಂಸ್ಥೆಯ ಅಂಗ ಸಂಸ್ಥೆಯಾದ ರೋಟ್ರ್ಯಾಕ್ಟ ಕ್ಲಬ್ ಇದರ ನೂತನ ಸದಸ್ಯರ ಪದಗ್ರಹನ ಸಮಾರಂಭ ನಡೆಯಿತು. ರೋಟರಿ ಕ್ಲಬ್ ಮಾಜಿ ಅಧ್ಯಕ್ಷ ಡಾ ಆನಂದ ಕುಲಕರ್ಣಿ ರೋಟ್ರ್ಯಾಕ್ಟ ಕ್ಲಬ್ ಜಿಲ್ಲಾಪ್ರತಿನಿಧಿ ರಾಹುಲ ಮೋಹಿತ, ಪ್ರಾಚಾರ್ಯ ಭಾರತಿ ಬಿಜಾಪುರೆ ಮಾತನಾಡಿದರು.
ರೋಟ್ರ್ಯಾಕ್ಟ ಕ್ಲಬ ಅಧ್ಯಕ್ಷರಾಗಿ ದೀಪಾ ಬಳ್ಳಿಗೇರಿ, ಕಾರ್ಯದರ್ಶಿಯಾಗಿ ದಾನೇಶ್ವರಿ ಚಿಮ್ಮಡ, ಖಜಾಂಚಿಯಾಗಿ ಮಂಜುಳಾ, ಉಪಾಧ್ಯಕ್ಷರಾಗಿ ತೋಹಿದ ಬಾಲದಾರ ಸೇರಿ 15 ವಿದ್ಯಾರ್ಥಿಗಳು ನಿರ್ದೇಶಕರಾಗಿ ಪದಗ್ರಹಣ ಸ್ವೀಕರಿಸಿದರು. ರೋಟರಿ ಕ್ಲಬ್ ಹಿರಿಯ ಸದಸ್ಯರು ಬಾಲಚಂದ್ರ ಬುಕಿಟಗಾರ, ಸಚಿನ ದೇಸಾಯಿ, ಮೇಗರಾಜ ಪರಮಾರ, ಡಾ ಅಮೃತ ಕುಲಕಣರ್ಣಿ, ಶಿವಾನಂದ ಕಾರೆ ಹಾಗೂ ಕ್ಲಬಿನ ಇತರ ಸದಸ್ಯರು ಮತ್ತು ವಿಮೋಚನ ಪದಾಧಿಕಾರಿಗಳು ಉಪಸ್ಥಿತರಿದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 