ಸಡಗರದ ಶ್ರೀ ಅರಣ್ಯ ಸಿದ್ದೇಶ್ವರ-ಮಲಕಾರಿ ಸಿದ್ದೇಶ್ವರ ಜಾತ್ರೆ
ಲೋಕದರ್ಶನ ವರದಿ
ಚಿಕ್ಕೋಡಿ 05: ಉತ್ತರ ಕರ್ನಾಟಕ ಮತ್ತು ದಕ್ಷಿಣ ಮಹಾರಾಷ್ಟ್ರದ ಪ್ರಸಿದ್ಧ ಭಂಡಾರು ಜಾತ್ರೆ ಎಂದೇ ಕರೆಯಿಸಿಕೊಳ್ಳುವ ಚಿಕ್ಕೋಡಿ ತಾಲೂಕಿನ ಕೇರೂರ ಗ್ರಾಮದ ಶ್ರೀ ಅರಣ್ಯ ಸಿದ್ದೇಶ್ವರ-ಮಲಕಾರಿ ಸಿದ್ದೇಶ್ವರ ದೇವರ ಜಾತ್ರೆ ಅದ್ದೂರಿಯಾಗಿ ಜರುಗಿತು. ಗುರುವಾರ ನಿವ್ವಾಳಕಿ ಮತ್ತು ದೇವವಾಣಿ ಕಾರ್ಯಕ್ರಮದಲ್ಲಿ ಲಕ್ಷಾಂತರ ಭಕ್ತಾಧಿಗಳು ಭಂಡಾರು ಹಾರಿಸುವ ಮೂಲಕ ಭಕ್ತಿಭಾವ ಸಮರ್ಪಿಸಿದರು.
ಹಂಡ ಕುದರಿ..ಪುಂಡ ಅರಣ್ಯಸಿದ್ಧಗ ಚಾಂಗಭಲೋ ಎಂಬ ದೇವವಾಣಿ ಸದ್ದಿನ ಮಧ್ಯೆ ಭಕ್ತರು ತಮ್ಮ ಆರಾಧ್ಯದೇವನಿಗೆ ಸಡಗರ ಸಂಭ್ರಮದಿಂದ ಹರಕೆ ತೀರಿಸಿದರು. ಜಾತ್ರೆಯ ಕೊನೆದಿನವಾದ ಗುರುವಾರ ನಿವ್ವಾಳಕಿ ಮತ್ತು ದೇವವಾಣಿ ಕಾರ್ಯಕ್ರಮದಲ್ಲಿ ಭಕ್ತಾಧಿಗಳು ಆರಾಧ್ಯದೇವನಿಗೆ ಭಕ್ತಿಭಾವ ಸಮರ್ಪಿಸಿ ಭಂಡಾರದಲ್ಲಿ ಮಿಂದೆದ್ದರು.
ಬೃಹತ್ ಭಂಡಾರು ಜಾತ್ರೆಯಲ್ಲಿ ಶ್ರೀ ಅರಣ್ಯ ಸಿದ್ದೇಶ್ವರ ದೇವರ ಸನ್ನಿದಿಗೆ ಗಡಿ ಭಾಗದ ದಕ್ಷಿಣ ಮಹಾರಾಷ್ಟ್ರ ಹಾಗೂ ಉತ್ತರ ಕರ್ನಾಟಕದ ಲಕ್ಷಾಂತರ ಭಕ್ತರು ಆಗಮೀಸಿ ದೇವರ ದರ್ಶನ ಪಡೆದು ಪುಣಿತರಾದರು. ಮತ್ತು ದೇವರ ಪಲ್ಲಕ್ಕಿಗೆ ಭಂಡಾರ ಹಾಗೂ ಉತ್ತೋತ್ತಿಗಳನ್ನು ಹಾರಿಸುವುದರ ಮೂಲಕ ಹರಕೆ ತೀರಿಸಿ ಭಕ್ತಿಭಾವ ಮೆರೆದರು.
ಭಕ್ತರು ಶ್ರೀ ಅರಣ್ಯಸಿದ್ದೇಶ್ವರನಿಗೆ ಮಹಾಭೀಷೇಕ, ಉಡಿತುಂಬಿದರು. ಕಳೆದ ನಾಲ್ಕು ದಿನಗಳಿಂದ ಡೊಳ್ಳುಗಾಯನ, ಮಹಾಪ್ರಸಾದ, ನಾಟಕ ಸೇರಿದಂತೆ ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತೀಕ ಕಾರ್ಯಕ್ರಮಗಳು ನಡೆದವು. ಪಲ್ಲಕ್ಕಿ ಉತ್ಸವ ಜನಮನ ಸೆಳೆಯಿತು. ಜಾತ್ರಾ ಮಹೋತ್ಸವ ಅಂಗವಾಗಿ ಹಮ್ಮಿಕೊಂಡ ಎತ್ತಿನ ಗಾಡಿ ಶರ್ಯತ್ತು, ಜೋಡುಕುದುರೆ ಶರ್ಯತ್ತು ಜನರನ್ನು ರಂಜಿಸುವ ಜೊತೆಗೆ ಹಲವಾರು ಕೃಷಿ ಪ್ರಧಾನ ಕ್ರೀಡೆಗಳು ನಡೆದವು.
ಜಾತ್ರಾ ಮಹೋತ್ಸವ ಸಮಿತಿಯ ಸದಸ್ಯರಾದ ಮಲ್ಲಿಕಾರ್ಜುನ ಪಾಟೀಲ, ಜಿ.ಪಂ ಮಾಜಿ ಸದಸ್ಯ ಮಲ್ಲಪ್ಪ ಬಾಗಿ, ತಾಪಂ ಸದಸ್ಯ ವೀರೇಂದ್ರ ಪಾಟೀಲ, ದುರೀಣ ರವಿ ಪಾಟೀಲ, ವಿಠ್ಠಲ ವಾಳಕೆ,ಪ್ರಕಾಶ ಬ್ಯಾಳಿ, ಮಲ್ಲಿಕಾರ್ಜುನ ಹಿರೇಮಠ, ಸಿದ್ದು ನಾವಿ, ಎಂ.ಎ.ಪಾಟೀಲ, ಚನಗೌಡ ಪಾಟೀಲ,ಸುರೇಶ ಬಾಡಕರ,ಬಾಳಗೌಡ ರೇಂದಾಳೆ, ಬಾಬಾಸಾಹೇಬ ಕೆಂಚನ್ನವರ, ಭೀಮು ಯಡ್ರಾಂವೆ ಸೇರಿದಂತೆ ಗ್ರಾಮ ಪಂಚಾಯತಿ ಸದಸ್ಯರು,ಮುಖಂಡರು ಪಾಲ್ಗೊಂಡಿದ್ದರು.
ಬೆಳಗಾವಿಯಲ್ಲಿ ನ್ಯಾಯವಾದಿ ಮನೆ ಮೇಲೆ ಗುಂಡಿನ ದಾಳಿ, ಹತ್ಯೆಗೆ ಯತ್ನ : ಅತಂಕದಲ್ಲಿ ಜನ
ಬೆಳಗಾವಿಯಲ್ಲಿ ನ್ಯಾಯವಾದಿ ಮನೆ ಮೇಲೆ ಗುಂಡಿನ ದಾಳಿ, ಹತ್ಯೆಗೆ ಯತ್ನ : ಅತಂಕದಲ್ಲಿ ಜನ
ಬೆಳಗಾವಿಯಲ್ಲಿ ನ್ಯಾಯವಾದಿ ಮನೆ ಮೇಲೆ ಗುಂಡಿನ ದಾಳಿ, ಹತ್ಯೆಗೆ ಯತ್ನ : ಅತಂಕದಲ್ಲಿ ಜನ
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ 