ಕೋಟರ್್ ಆದೇಶಕ್ಕೆ ಕ್ಯಾರೆ ಎನ್ನದ ತಿರುಪತಿ-ಪುದುಚೇರಿ ಫಾಸ್ಟ್ ಪ್ಯಾಸೆಂಜರ್ ರೈಲು
ಕಾಂಚೀಪುರಂ(ತಮಿಳುನಾಡು), ಡಿ.1 - ಪರಿಹಾರ ನೀಡಲು ವಿಫಲವಾಗಿದ್ದಕ್ಕೆ ಎಂಜಿನ್ ಜಪ್ತಿ ಮಾಡಲು ಸ್ಥಳೀಯ ನ್ಯಾಯಾಲಯ ನೀಡಿದ್ದ ಆದೇಶ ಪಾಲಿಸಲು ಮುಂದಾದ ಸಿಬ್ಬಂದಿ ಯತ್ನವನ್ನು ತಿರುಪತಿ-ಪುದುಚೇರಿ ಫಾಸ್ಟ್ ಪ್ಯಾಸೆಂಜರ್ ರೈಲು ವಿಫಲಗೊಳಿಸಿದ ಘಟನೆ ನಡೆದಿದೆ.
20 ವರ್ಷಗಳ ಹಿಂದೆ ರೈಲ್ವೆ ಯೋಜನೆಗಾಗಿ ಭೂಮಿಯನ್ನು ಸ್ವಾಧೀನ ಮಾಡಿಕೊಂಡಿದ್ದಕ್ಕೆ ಇನ್ನೂ ಪರಿಹಾರ ನೀಡದ ಪ್ರಕರಣದ ಸಂಬಂಧ ತಮಿಳುನಾಡಿನ ಕಾಂಚೀಪುರಂನ ಉಪ ನ್ಯಾಯಾಲಯ ಎಂಜಿನ್ ಜಪ್ತಿ ಮಾಡುವಂತೆ ನ.23ರಂದು ಆದೇಶ ಹೊರಡಿಸಿತ್ತು.
ಈ ಆದೇಶವನ್ನು ಜಾರಿಗೊಳಿಸಲು ನ್ಯಾಯಾಲಯದ ಸಿಬ್ಬಂದಿ ಶುಕ್ರವಾರ ಕಾಂಚೀಪುರಂನ ರೈಲ್ವೆ ನಿಲ್ದಾಣದಲ್ಲಿ ಎಂಜಿನ್ನನ್ನು ಜಪ್ತಿ ಮಾಡಿ ಕಾನೂನು ಪಾಲಿಸಲು ಮುಂದಾದರು. ನ್ಯಾಯಾಲಯದ ಸ್ಪಷ್ಟ ಆದೇಶವಿದೆ. ಎಂಜಿನ್ ಜಪ್ತಿ ಮಾಡಬೇಕೆಂದು ಸಿಬ್ಬಂದಿ ತಿಳಿಸಿದರು. ಇದರಿಂದ ನಿಲ್ದಾಣದಲ್ಲಿ ಮಾತಿನ ಚಕಮಕಿ ಮತ್ತು ಗೊಂದಲದ ವಾತಾವರಣ ನಿಮರ್ಾಣವಾಯಿತು. ಆದರೆ ಇದೇ ವೇಳೆ ಕೋಟರ್್ ಆದೇಶಕ್ಕೆ ಕ್ಯಾರೆ ಎನ್ನದ ತಿರುಪತಿ-ಪುದುಚೇರಿ ಮಾರ್ಗದ ರೈಲು ಅಲ್ಲಿಂದ ಜಾಗ ಖಾಲಿ ಮಾಡಿತು. ನ್ಯಾಯಾಲಯದ ಆದೇಶ ಉಲ್ಲಂಘನೆಯಾಗಿದೆ ಎಂದು ಕೋಟರ್್ ಅಧಿಕಾರಿಗಳು ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಈ ಎಲ್ಲ ಘಟನೆಯನ್ನು ನ್ಯಾಯಾಲಯಕ್ಕೆ ವರದಿ ಮಾಡಿ ರೈಲ್ವೆ ಇಲಾಖೆಯ ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ನ್ಯಾಯಾಲಯಕ್ಕೆ ಮನವಿ ಮಾಡುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ 