ಯೋಗಿ ಸರ್ಕಾರವು ಶಾಸಕರ ಸಂಬಳ ಕಡಿತಗೊಳಿಸುವ ಸಾಧ್ಯತೆ
ಲಕ್ನೋ, ಏ.7 ,ಕೇಂದ್ರದ ಸರ್ಕಾರದಂತೆ, ಉತ್ತರ ಪ್ರದೇಶ ಸರ್ಕಾರವು ಶಾಸಕರು ಮತ್ತು ಮಂತ್ರಿಗಳ ವೇತನವನ್ನು ಶೇಕಡಾ 30 ರಷ್ಟು ಕಡಿತಗೊಳಿಸುವ ಸಾಧ್ಯತೆ ಇದೆ. ಈ ನಿಟ್ಟಿನಲ್ಲಿ ಅಧಿಸೂಚನೆಯ ಮೂಲಕ ಸರ್ಕಾರವು ಸಂಪುಟದಲ್ಲಿ ಪ್ರಸ್ತಾವನೆಯನ್ನು ಅನುಮೋದಿಸುವ ಮೂಲಕ ಶೀಘ್ರದಲ್ಲೇ ಸುಗ್ರೀವಾಜ್ಞೆಯನ್ನು ತರುವ ಸಾಧ್ಯತೆ ಇದೆ. ಕೋವಿಡ್-19 ನಿಧಿ ಹಣವನ್ನು ಸಂಗ್ರಹಿಸಲು ಶಾಸಕರು ಮತ್ತು ಸಚಿವರ ವೇತನವನ್ನು ಕಡಿತಗೊಳಿಸುವುದರ ಜೊತೆಗೆ ಮುಂದಿನ ಎರಡು ವರ್ಷಗಳವರೆಗೆ ನೀಡಲಾಗುವ ಶಾಸಕರ ಅಭಿವೃದ್ಧಿ ನಿಧಿಯನ್ನು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮುಂದೂಡಬಹುದು ಎಂದು ಸರ್ಕಾರದ ಮೂಲಗಳು ಮಂಗಳವಾರ ತಿಳಿಸಿವೆ.ವಿಪತ್ತಿನ ಈ ಸಮಯದಲ್ಲಿ ವಿರೋಧ ಪಕ್ಷಗಳು ಸರ್ಕಾರದ ಈ ಕ್ರಮವನ್ನು ಬೆಂಬಲಿಸುತ್ತವೆ ಎಂದು ಅವರು ಹೇಳಿದ್ದಾರೆ. ಈ ಎಲ್ಲಾ ಪ್ರಕ್ರಿಯೆ ಪಾರದರ್ಶಕತೆಯಿಂದ ಮಾಡಲಾಗುವುದು. ಈ ಹಣವನ್ನು ಕೋವಿಡ್ -19 ಪೀಡಿತರ ಜನರಿಗಾಗಿ ಬಳಸಲಾಗುತ್ತದೆ. ಸೋಮವಾರ, ಸುಗ್ರೀವಾಜ್ಞೆಯ ಮೂಲಕ ಕೇಂದ್ರ ಸರ್ಕಾರವು ಮಂತ್ರಿಗಳು ಮತ್ತು ಸಂಸದರ ವೇತನವನ್ನು ಕಡಿತಗೊಳಿಸಿದೆ ಮತ್ತು ಸಂಸದರ ನಿಧಿಯನ್ನು ಸಹ ಎರಡು ವರ್ಷಗಳವರೆಗೆ ಸ್ಥಗಿತಗೊಳಿಸಿದೆ ಎಂದು ತಿಳಿದಿದೆ.
ಮಹಾರಾಷ್ಟ್ರದಲ್ಲಿ ಭೂಕುಸಿತದಿಂದ ರೈಲು ಸಂಚಾರಕ್ಕೆ ಅಡ್ಡಿ; ಎಸ್ಸಿಆರ್ 25 ರೈಲುಗಳ ಮಾರ್ಗ ಬದಲಾವಣೆ
ಖಾನಾಪೂರ ಶಾಸಕ ಹಲಗೇಕರ ಅಡ್ಡ ಮತದಾನ ಮಾಡಿದರಾ?, ಅಂಜಲಿ ನಿಂಬಾಳಕರ್ ಮಾತಿನ ಮರ್ಮವೇನು
ಲಕ್ಷ್ಮಣ್ ಉಟೇಕರ್ ಅವರ ಮುಂಬರುವ ಚಿತ್ರದಲ್ಲಿ ಹೃತಿಕ್ ರೋಷನ್ ಅಭಿನಯಿಸುವ ಸಾಧ್ಯತೆ
ಚಂದ್ರಪುರ ಅರಣ್ಯದಲ್ಲಿ ಕಾಡುಪ್ರಾಣಿ ದಾಳಿಗೆ ಯುವಕ ಬಲಿ
ಅಧಿಕಾರ ದರ್ಪ : ಖಾನಾಪುರ ತಹಸೀಲ್ದಾರ್ ವಿರುದ್ಧ ಶಿಸ್ತುಕ್ರಮಕ್ಕೆ ಪಿಡಿಒಗಳಿಂದ ಡಿಸಿ, ಚು. ಆಯೋಗಕ್ಕೆ ದೂರು
ಗಗನಯಾನ ಮಿಷನ್ಗಾಗಿ ಮಹತ್ವದ ಪ್ಯಾರಾಶೂಟ್ ಏರ್ಡ್ರಾಪ್ ಪರೀಕ್ಷೆಯನ್ನು ಇಸ್ರೋ ಯಶಸ್ವಿಯಾಗಿ ನಡೆಸಿತು 