ಯಾವುದೇ ಕಲೆಯ ಸಾಧನೆ ಅನನ್ಯ ಪ್ರಯತ್ನದಿಂದ ಮಾತ್ರ ಸಾಧ್ಯ
The achievement of any art is possible only through unique effort.
ಯಾವುದೇ ಕಲೆಯ ಸಾಧನೆ ಅನನ್ಯ ಪ್ರಯತ್ನದಿಂದ ಮಾತ್ರ ಸಾಧ್ಯ
ಹಾವೇರಿ 20 : ಪ್ರತಿಭೆಗೆ, ಕಲೆಗೆ ವಯಸ್ಸು ಎಂದು ಮುಖ್ಯ ವಾಗುವುದಿಲ್ಲ, ಯಾವುದೇ ಕಲೆಯ ಸಾಧನೆ ಎಲ್ಲರಿಂದಲೂ ಸಾಧ್ಯವಿಲ. ದೈವ ಕೃಪೆ, ಸಂಸ್ಕಾರ, ಅನನ್ಯ ಪ್ರಯತ್ನ ಮಾತ್ರದಿಂದಲೇ ಸಾಧ್ಯ ಎಂದು ಕರ್ಕಿಹಳ್ಳಿ ಸ್ವಾಮೀಜಿ ಹೇಳಿದರು. ತಾಲೂಕಿನ ಅಗಡಿ ಆನಂದವನದಲ್ಲಿ ಶ್ರೀ ಶೇಷಾಚಲ ಸದ್ಗುರುಗಳ 177 ನೇ ಜಯಂತಿ ಉತ್ಸವದ ಅಂಗವಾಗಿ ಮಕ್ಕಳ ಸಂಸ್ಕೃತಿಕ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಶಾರ್ವರಿಶ ನಾಟ್ಯ ಕೇಂದ್ರದ ಪಿ.ಆರ್. ಗಗನ ಗೌತಮಿ ಸಹೋದರಿಯರ ಸೀತಾ ಸ್ವಯಂವರ ಭರತನಾಟ್ಯ ವಿಶೇಷ ಗಮನ ಸೆಳೆಯಿತು. ಹತ್ತಕ್ಕೂ ಅಧಿಕ ಮಕ್ಕಳು ಭಕ್ತಿ ಗೀತೆ, ಮೋಜಿನ ವೇಷ ಹಾಗೂ ನೃತ್ಯ ಪ್ರದರ್ಶಿಸಿದರು. ಗುರುದತ್ತಮೂರ್ತಿ ಚಕ್ರವರ್ತಿ ಸ್ವಾಮೀಜಿ, ವಿಶ್ವನಾಥ ಚಕ್ರವರ್ತಿ ಸ್ವಾಮೀಜಿ ಹಾಗೂ ಸುರೇಶ್ ಮಹಾರಾಜರು ಉಪಸ್ಥಿತರಿದ್ದರು. ಭಾಗ್ಯಲಕ್ಷ್ಮಿ ರಾಘವೇಂದ್ರ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 