ಮಂಗಳೂರಿನಲ್ಲಿ ಲಾಕ್ಡೌನ್ ಟೀಕಿಸಿ ಸಂದೇಶ ಕಳುಹಿಸಿದ್ದ ಒಬ್ಬನ ಬಂಧನ
ಮಂಗಳೂರು, ಏಪ್ರಿಲ್ 1,ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕರೋನವೈರಸ್ ಸೋಂಕು ತಡೆಗಟ್ಟುವಲ್ಲಿ ತೊಡಗಿರುವ ರಾಜ್ಯ ಸರ್ಕಾರಿ ಸಿಬ್ಬಂದಿ ವಿರುದ್ಧ ದುರುದ್ದೇಶಪೂರಿತ ಆರೋಪಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ಹರಡಿದ ಆರೋಪದ ಮೇಲೆ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ.'ಇದು ನಮ್ಮ ಧ್ವನಿ’ ಎಂಬ ವೇದಿಕೆ ಮೂಲಕ ಸಾಮಾಜಿಕ ಮಾಧ್ಯಮದಲ್ಲಿ ದುರುದ್ದೇಶಪೂರಿತ ವಿಷಯವನ್ನು ಹರಡಿದ ಆರೋಪದ ಮೇಲೆ ನಿಜಾಮ್ ಎಂಬುವವನ್ನು ಬಂಧಿಸಲಾಗಿದ್ದು, ಈತನನ್ನು ನ್ಯಾಯಾಲಯದ ಆದೇಶದ ಮೇರೆಗೆ ನ್ಯಾಯಾಂಗ ಕಸ್ಟಡಿಗೆ ಕಳುಹಿಸಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಡಾ.ಹರ್ಷ ತಿಳಿಸಿದ್ದಾರೆ. ಆರೋಪಿ ಕೊವಿದ್ -19 ಸೋಂಕು ಹರಡುವಿಕೆ ತಡೆಯುವಿಕೆ ಕೆಲಸದಲ್ಲಿ ತೊಡಗಿರುವ ವಿವಿಧ ಸರ್ಕಾರಿ ಕಾರ್ಯಕರ್ತರ ಕಾರ್ಯದ ಬಗ್ಗೆ ಟೀಕಿಸಿ, ವದಂತಿಗಳನ್ನು ಹರಡಿದ್ದಾನೆ ಎಂದು ಅವರು ಮಂಗಳವಾರ ಟ್ವೀಟ್ ಮಾಡಿದ್ದಾರೆ.
ಮಹಾರಾಷ್ಟ್ರದಲ್ಲಿ ಭೂಕುಸಿತದಿಂದ ರೈಲು ಸಂಚಾರಕ್ಕೆ ಅಡ್ಡಿ; ಎಸ್ಸಿಆರ್ 25 ರೈಲುಗಳ ಮಾರ್ಗ ಬದಲಾವಣೆ
ಖಾನಾಪೂರ ಶಾಸಕ ಹಲಗೇಕರ ಅಡ್ಡ ಮತದಾನ ಮಾಡಿದರಾ?, ಅಂಜಲಿ ನಿಂಬಾಳಕರ್ ಮಾತಿನ ಮರ್ಮವೇನು
ಲಕ್ಷ್ಮಣ್ ಉಟೇಕರ್ ಅವರ ಮುಂಬರುವ ಚಿತ್ರದಲ್ಲಿ ಹೃತಿಕ್ ರೋಷನ್ ಅಭಿನಯಿಸುವ ಸಾಧ್ಯತೆ
ಚಂದ್ರಪುರ ಅರಣ್ಯದಲ್ಲಿ ಕಾಡುಪ್ರಾಣಿ ದಾಳಿಗೆ ಯುವಕ ಬಲಿ
ಅಧಿಕಾರ ದರ್ಪ : ಖಾನಾಪುರ ತಹಸೀಲ್ದಾರ್ ವಿರುದ್ಧ ಶಿಸ್ತುಕ್ರಮಕ್ಕೆ ಪಿಡಿಒಗಳಿಂದ ಡಿಸಿ, ಚು. ಆಯೋಗಕ್ಕೆ ದೂರು
ಗಗನಯಾನ ಮಿಷನ್ಗಾಗಿ ಮಹತ್ವದ ಪ್ಯಾರಾಶೂಟ್ ಏರ್ಡ್ರಾಪ್ ಪರೀಕ್ಷೆಯನ್ನು ಇಸ್ರೋ ಯಶಸ್ವಿಯಾಗಿ ನಡೆಸಿತು 