36 ಗಂಟೆಯಲ್ಲಿ ತಾಯಿ ಮಡಿಲು ಸೇರಿದ ಮಗು
ತಾಯಿ ಮಡಿಲು
ಕಲಬುರಗಿ: ನಗರದ ಜಿಮ್ಸ್ ಆಸ್ಪತ್ರೆಯಿಂದ ಸೋಮವಾರ ಅಪಹರಣವಾಗಿದ್ದ ನವಜಾತ ಗಂಡು ಶಿಶುವನ್ನು ನಗರ ಪೊಲೀಸರು 36 ಗಂಟೆಗಳಲ್ಲಿ ಪತ್ತೆ ಮಾಡಿ ತಾಯಿ ಮಡಿಲಿಗೆ ಸೇರಿಸಿದ ಪ್ರಶಂಸನೀಯ ಘಟನೆ ನಡೆದಿದೆ.
ಸೋಮವಾರ ಅಪರನ್ನ ಅಪಹರಣವಾಗಿದ್ದ ಮಗು ಮಂಗಳವಾರ ತಡರಾತ್ರಿ ತಾಯಿ ಮಡಿಲು ಸೇರಿದ ಕಳೆದ 36 ಗಂಟೆಯಿಂದ ಮಮ್ಮಲ ಮರುಗುತ್ತಿದ್ದ ತಾಯಿ ಮಗುವಿನ ಮುಖ ನೋಡಿ ಸಂತಸ ದಿಂದ ಮುದ್ದಾಡಿದ್ದು ನೋಡಿ ಪೊಲೀಸ್ ಇಲಾಖೆ ಕೂಡ ಖುಷಿಯಿಂದ ನಿಟ್ಟಿಸಿರು ಬಿಟ್ಟಿದೆ.
ಸೋಮವಾರ ಮಧ್ಯಾಹ್ನ ಜಿಮ್ಸ್ ನವಜಾತ ಶಿಶು ವಿಭಾಗದಿಂದ ಚಿತ್ತಾಪುರ ತಾಲೂಕಿನ ರಾಮಕೃಷ್ಣ ಸಗರ ಹಾಗೂ ಕಸ್ತೂರಿ ದಂಪತಿಗಳ ಎರಡನೇ ಮಗುವಿಗೆ ಚಿಕಿತ್ಸೆ ನೀಡುವ ನೆಪದಲ್ಲಿ ನರ್ಸ್ ಗಳ ಪೋಷಾಕಿನಲ್ಲಿ ಆಗಮಿಸಿದ್ದ ಇಬ್ಬರು ಮಹಿಳೆಯರು, ಮಗುವಿಗೆ ತುರ್ತು ಚಿಕಿತ್ಸೆ ಕೊಡುವುದಾಗಿ ಹೇಳಿ ತಾಯಿಯಿಂದ ಮಗುವನ್ನು ಪಡೆದು ಪರಾರಿಯಾಗಿದ್ದರು.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳವಾರ ರಾಜ್ಯ ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣ್ ಪ್ರಕಾಶ್ ಪಾಟೀಲ್ ಜಿಮ್ಸಿಗೆ ಭೇಟಿ ನೀಡಿ ತಾಯಿಗೆ ಸಾಂತ್ವಾನ ಹೇಳಿ, ಆದಷ್ಟು ಬೇಗ ಮಗುವನ್ನು ಮಡಿಲಿಗೆ ಹಾಕಿಸುವುದಾಗಿ ಭರವಸೆ ನೀಡಿದ್ದರು.
ನಾಲ್ಕು ತಂಡ ರಚನೆ ಮಗು ಅಪಹರಣವಾಗಿರುವ ಹಿನ್ನೆಲೆಯಲ್ಲಿ ಒಟ್ಟು ನಾಲ್ಕು ತಂಡಗಳನ್ನು ರಚನೆ ಮಾಡಿ ನಗರ ಪೊಲೀಸ್ ಆಯುಕ್ತ ಡಾ. ಶರಣಪ್ಪ ಢಗೆ ಹಾಗೂ ಎಸಿಬಿ ಬೂತೇಗೌಡ ನೇತೃತ್ವದಲ್ಲಿ ಭರ್ಜರಿ ಕಾರ್ಯಾಚರಣೆಗೆ ಇಳಿಯಲಾಗಿತ್ತು. ಆದರೆ ಸಾರ್ವಜನಿಕರು ನೀಡಿದ ಮಾಹಿತಿಯನ್ನಾಧರಿಸಿ ಕೈರುನ್ ಎನ್ನುವ ಮಹಿಳೆಯ ಮನೆಯನ್ನು ಶೋಧಿಸಿ ಮಗುವನ್ನು ವಶಪಡಿಸಿಕೊಂಡಿರುವ ಪೊಲೀಸರು ಮಗುವನ್ನು ತಾಯಿ ಕಸ್ತೂರಿಗೆ ಒಪ್ಪಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಈ ಮಧ್ಯೆ ಜಿಮ್ಸ್ ನವಜಾತ ಶಿಶು ವಿಭಾಗದಿಂದ ಮಗುವನ್ನು ಅಪಹರಣ ಮಾಡಿದ್ದ ಮೂವರು ಮಹಿಳೆಯರನ್ನು ಕೂಡ ಪೊಲೀಸರು ಬಂಧಿಸಿದ್ದಾರೆ ಆದರೆ ಪೊಲೀಸ್ ಮಾಹಿತಿಯನ್ನ ಪಡೆದ ಕೈರುನ್ ಪರಾರಿಯಾಗಿದ್ದು ಆಕೆಯ ಪತ್ತೆಗೆ ಜಾಲ ಬೀಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಬಂಧಿತರನ್ನು ಎಂ ಎಸ್ ಕೆ ಮಿಲ್ ಪ್ರದೇಶದ ಉಮೆರಾ, ಫಾತಿಮಾ ಹಾಗೂ ನಶರಿನ್ ಎಂದು ಗುರುತಿಸಲಾಗಿದೆ. ಈ ಮೂವರು ಮಗುವನ್ನು ಅಪಹರಣ ಮಾಡಿ ಕೈ ರೂಂಗೆ 50,000 ಗೆ ಮಾರಾಟ ಮಾಡಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
ಮಗು ಅಪಹರಣಗೊಂಡು 36 ಗಂಟೆಯಲ್ಲಿ ತಾಯಿಯ ಮಡಿಲು ಸೇರಿದ ಹಿನ್ನೆಲೆಯಲ್ಲಿ ರಾಜ್ಯ ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣ್ ಪ್ರಕಾಶ್ ಪಾಟೀಲ್ ಹಾಗೂ ಜಿಲ್ಲಾ ಉಸ್ತುವಾರಿ ಮಂತ್ರಿ ಪ್ರಿಯಾಂಕ ಖರ್ಗೆ ಮತ್ತು ನಗರ ಪೊಲೀಸ್ ಆಯುಕ್ತ ಡಾಕ್ಟರ್ ಶರಣಪ್ಪ ಢಗೆ ಸಂತಸ ವ್ಯಕ್ತಪಡಿಸಿದ್ದಾರೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 