ಮಲಗಿದ್ದ ಮಗು ಚಿರತೆಗೆ ಬಲಿ
ರಾಮನಗರ, ಮೇ 9, ಮನೆಯಲ್ಲಿ ಮಲಗಿದ್ದ 3 ವರ್ಷದ ಗಂಡು ಮಗುವನ್ನು ಚಿರತೆಯೊಂದು ಹೊತ್ತೊಯ್ದು ಕೊಂದು ತಿಂದಿರುವ ಘಟನೆ ಮಾಗಡಿ ತಾಲೂಕಿನ ಕದಿರಯ್ಯನಪಾಳ್ಯ ಗ್ರಾಮದಲ್ಲಿ ಶುಕ್ರವಾರ ರಾತ್ರಿ ನಡೆದಿದೆ.ಚಂದ್ರಣ್ಣ ಹಾಗೂ ಮಂಗಳಗೌರಮ್ಮ ದಂಪತಿಯ ಮಗನಾದ ಹೇಮಂತ್ ಚಿರತೆ ದಾಳಿಗೆ ಬಲಿಯಾಗಿದ್ದಾನೆ.ಬೇಸಿಗೆ ಕಾಲವಿದ್ದರಿಂದ ಸೆಕೆ ಹೆಚ್ಚಾದ ಹಿನ್ನೆಲೆಯಲ್ಲಿ ದಂಪತಿ ಬಾಗಿಲು ತೆರೆದು ಮಲಗಿದ್ದರು. ಈ ವೇಳೆ ಏಕಾಏಕೀ ಮನೆಗೆ ನುಗ್ಗಿದ ಚಿರತೆ ಮಗುವನ್ನು ಹೊತ್ತೊಯ್ದಿದೆ. ಎಚ್ಚರಗೊಂಡ ಬಳಿಕ ಪೋಷಕರು ಆತನನ್ನು ಹುಡುಕಲು ಆರಂಭಿಸಿದ್ದಾಗ ಮನೆಯಿಂದ ಸ್ವಲ್ಪ ದೂರದ ಪೊದೆಯಲ್ಲಿ ಮಗುವಿನ ಶವ ಪತ್ತೆಯಾಗಿದೆ.ತಡರಾತ್ರಿ ಮಳೆಯಾದ ಹಿನ್ನೆಲೆಯಲ್ಲಿ ಮನೆಯಲ್ಲಿ ವಿದ್ಯುತ್ ಇಲ್ಲದಿರುವುದರಿಂದ ದಂಪತಿ ಬಾಗಿಲು ತೆರೆದು ಮಲಗಿದ್ದರು ಎನ್ನಲಾಗಿದೆ.ಘಟನಾ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಘಟನೆಗೆ ಸಂಬಂಧಿಸಿದಂತೆ ಮಾಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ತಲ್ವಾರ್ ಹಲ್ಲೆ: ಒಂದೇ ಗಂಟೆಯಲ್ಲಿ 6 ಆರೋಪಿಗಳ ಬಂಧಿಸಿದ ಮಾಳಮಾರುತಿ ಪೋಲೀಸರು : ತನಿಖೆ ಚುರುಕು
ಹಳೇಯ ವೈಷಮ್ಯ : ಮೂವರ ಮೇಲೆ ತಲ್ವಾರ್ ನಿಂದ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ 