ಉತ್ತಮ ಕ್ರೀಡಾಪಟುಗಳಿಗೆ ಪೊಲೀಸ್ ಇಲಾಖೆಯಲ್ಲಿ ಉದ್ಯೋಗ ಅವಕಾಶಗಳಿವೆ: ಡಿಎಸ್ಪಿ ಪ್ರಲ್ಹಾದ
ಲೋಕದರ್ಶನ ವರದಿ
ಗದಗ 10: ಮಕ್ಕಳು ಆರೋಗ್ಯವಾಗಿರಲು ಸ್ಕೇಟಿಂಗ್, ಕರಾಟೆ ಅಂತಹ ಹವ್ಯಾಸಿಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಡಿಎಸ್ಪಿ ಎಸ್.ಕೆ.ಪ್ರಲ್ಹಾದ ಅವರು ಹೇಳಿದರು.
ನಗರದ ಅಂಬೇಡ್ಕರ್ ಭವನದ ಎದುರಿಗೆ ಇತ್ತೀಚಿಗೆ ಜರುಗಿದ ಇನ್ಸ್ಪೈರ್ ಸ್ಪೋಟ್ರ್ಸ ಅಸೋಶಿಯೇಶನ್ ಸಹಯೋಗದಲ್ಲಿ ಸ್ಕೇಟಿಂಗ್ ಹಾಗೂ ಕರಾಟೆ ತರಬೇತಿ ಕೇಂದ್ರವನ್ನು ಉದ್ಘಾಟಿಸಿ ಅವರು ಮಾತನಾಡಿ, ಉತ್ತಮ ಕ್ರೀಡಾಪಟುಗಳಿಗೆ ಪೊಲೀಸ್ ಇಲಾಖೆಯಲ್ಲಿ ಅನೇಕ ಉದ್ಯೋಗ ಅವಕಾಶಗಳಿವೆ ತರಬೇತಿ ಶಿಬಿರಗಳನ್ನು ಸದುಪಯೋಗ ಪಡೆಸಿಕೊಳ್ಳಬೇಕು ಎಂದು ಹೇಳಿದರು.
ಕಳಸಾಪೂರ ಓಂಕಾರೇಶ್ವರ ಹಿರೇಮಠದ ಫಕ್ಕಿರೇಶ್ವರ ಮಹಾಸ್ವಾಮಿಗಳು ಸಾನಿಧ್ಯವಹಿಸಿದ್ದರು. ಈ ಸಂದರ್ಭದಲ್ಲಿ ಹಿರಿಯರಾದ ಫಕ್ಕಿರಪ್ಪ ಹೆಬಸೂರ, ಪರಶುರಾಮ ಹಬೀಬ, ಮಂಜುಳಾ ದಾನಿ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು. ತರಬೇತುದಾರ ಮಂಜುನಾಥ ಕುರಿ ಕಾರ್ಯಕ್ರಮ ನಿರೂಪಿಸಿದರು.
ದಕ್ಷಿಣ ಭಾರತದ ಕೋಗಿಲೆ ಎಸ್. ಜಾನಕಿ ನಿಧನ; 88ನೇ ವಯಸ್ಸಿನಲ್ಲಿ ಕೊನೆಯುಸಿರು
ಮಹಾರಾಷ್ಟ್ರದಲ್ಲಿ ಭೂಕುಸಿತದಿಂದ ರೈಲು ಸಂಚಾರಕ್ಕೆ ಅಡ್ಡಿ; ಎಸ್ಸಿಆರ್ 25 ರೈಲುಗಳ ಮಾರ್ಗ ಬದಲಾವಣೆ
ಖಾನಾಪೂರ ಶಾಸಕ ಹಲಗೇಕರ ಅಡ್ಡ ಮತದಾನ ಮಾಡಿದರಾ?, ಅಂಜಲಿ ನಿಂಬಾಳಕರ್ ಮಾತಿನ ಮರ್ಮವೇನು
ಲಕ್ಷ್ಮಣ್ ಉಟೇಕರ್ ಅವರ ಮುಂಬರುವ ಚಿತ್ರದಲ್ಲಿ ಹೃತಿಕ್ ರೋಷನ್ ಅಭಿನಯಿಸುವ ಸಾಧ್ಯತೆ
ಚಂದ್ರಪುರ ಅರಣ್ಯದಲ್ಲಿ ಕಾಡುಪ್ರಾಣಿ ದಾಳಿಗೆ ಯುವಕ ಬಲಿ
ಅಧಿಕಾರ ದರ್ಪ : ಖಾನಾಪುರ ತಹಸೀಲ್ದಾರ್ ವಿರುದ್ಧ ಶಿಸ್ತುಕ್ರಮಕ್ಕೆ ಪಿಡಿಒಗಳಿಂದ ಡಿಸಿ, ಚು. ಆಯೋಗಕ್ಕೆ ದೂರು 