ಬೆಳಗಾವಿ: ದಾನ ದಾನಗಳಲ್ಲಿ ಶ್ರೇಷ್ಠದಾನ ರಕ್ತದಾನ
ಲೋಕದರ್ಶನ ವರದಿ
ಬೆಳಗಾವಿ 14: ದಾನ ದಾನಗಳಲ್ಲಿ ಶ್ರೇಷ್ಠದಾನ ರಕ್ತದಾನ, ರಕ್ತವು ನಮ್ಮ ಶರೀರದ ಅವಿಭಾಜ್ಯ ಅಂಗವಾಗಿದ್ದು ರಕ್ತಕ್ಕೆ ಪಯರ್ಾಯವಾದುದು ಬೇರೊಂದಿಲ್ಲ ಎಂದು ಯು ಎಸ್ ಎಮ್ ಕೆ ಎಲ್ ಇ ಯ ನಿದರ್ೇಶಕ ಡಾ. ಹೆಚ್ ಬಿ ರಾಜಾಶೇಖರ ಮಾತನಾಡುತ್ತಿದ್ದರು ಅವರು ಇಂದು ನಗರದ ಕೆ ಎಲ್ ಇ ಶತಮಾನೋತ್ಸವ ಚಾರಿಟೆಬಲ್ ಆಸ್ಪತ್ರೆಯ ರಕ್ತ ಭಂಡಾರದಲ್ಲ್ಲಿ ವಿಶ್ವ ರಕ್ತದಾನಿಯ ದಿನಾಚರಣೆಯ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು. ಇಂದು ನಮ್ಮ್ ವೈದ್ಯ ವಿಜ್ಞಾನವು ನಮ್ಮ ಶರೀರದಲ್ಲಿರುವ ಯಾವುದೇ ಅಂಗವನ್ನು ಕೃತಕವಾಗಿ ಅಥವಾ ಕಸಿ ವಿಧಾನದಿಂದ ಮರುಜೋಡಿಸಬಹುದಾಗಿದೆ ಆದರೆ ರಕ್ತವು ಒಂದು ವಿಶಿಷ್ಟಗುಣವನ್ನು ಹೊಂದಿದ್ದು ಇದನ್ನು ಯಾವುದೇ ರೀತಿಯ ವಿಧಾನಗಳಿಂದ ತಯಾರಿಸಲು ಸಾಧ್ಯವಿಲ್ಲ ಆದ್ದರಿಂದ ಸಶಕ್ತ ಹೆಣ್ಣು ಗಂಡು ಎಂಬ ಭೇದವಿಲ್ಲದೆ ಎಲ್ಲರೂ ರಕ್ತದಾನ ಮಾಡಿ ಇನ್ನೊಂದು ಜೀವ ಉಳಿಸಲು ಕಾರಣಕರ್ತರಾಗಿ ಎಂದು ಕರೆ ನೀಡಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಕೆ ಎಲ್ ಇ ಶತಮಾನೋತ್ಸವ ಚಾರಿಟೆಬಲ್ ಆಸ್ಪತ್ರೆಯ ನಿದರ್ೇಶಕ ಡಾ ಎಸ್ ಸಿ ಧಾರವಾಡ ಮಾತನಾಡುತ್ತ ಅಪಘಾತ, ಹೆರಿಗೆ, ಥಲೆಸಿಮಿಯಾ ಹಾಗೂ ಶಸ್ತ್ರಚಿಕಿತ್ಸೆ ಮುಂತಾದ ಸಮಸ್ಯೆಗಳಿಂದ ಇಂದು ನಮ್ಮ ದೇಶದಲ್ಲಿ ಪ್ರತಿ ನಿಮಿಷಕ್ಕೆ ಇಬ್ಬರಂತೆ ಅಸುನೀಗುತ್ತಿರುವದು ನಿಜಕ್ಕೂ ಖೇದಕರವೆನ್ನಿಸುತ್ತದೆ. ಶರವೇಗದಲ್ಲಿ ಅಭಿವೃದ್ದಿಹೊಂದುತ್ತಿರುವ ಜನಸಂಖ್ಯೆಗನುಗುಣವಾಗಿ ಪ್ರತಿಯೊಬ್ಬ ಅರ್ಹ ವ್ಯಕ್ತಿ ರಕ್ತದಾನಮಾಡಿದ್ದಾದರೆ ಇಂತಹ ಸಾವು ನೋವುಗಳನ್ನು ತಡೆಹಿಡಿಯಬಹುದಾಗಿದೆ ಎಂದು ತಿಳಿ ಹೇಳಿದರು.
ಈ ಸಂದರ್ಭದಲ್ಲಿ ಆಸ್ಪತ್ರೆಯ ಹಿರಿಯ ವೈದ್ಯ ಡಾ. ಬಿ ಎಸ್ ಮಹಾಂತಶೆಟ್ಟಿ, ಹಿರಿಯ ಶಸ್ತ್ರಚಿಕಿತ್ಸಜ್ಞ ಡಾ ಅಶೋಕ ಪಾಂಗಿ, ಡಾ. ಅಶೋಕ ಅಲತಗಿ, ರಕ್ತ ಭಂಡಾರ ಅಧಿಕಾರಿ ಡಾ. ವಸಂತ ಶಿಂಧೆ ವೈದ್ಯಕೀಯ ಹಾಗೂ ವೈದ್ಯಕೀಯೇತರ ಸಿಬ್ಬಂದಿ ಉಪಸ್ಥಿತರಿದ್ದರು. ಈ ದಿನದ ಅಂಗವಾಗಿ 25 ಕ್ಕೂ ಅಧಿಕ ದಾನಿಗಳು ರಕ್ತದಾನ ಮಾಡಿದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 