ಮಹಾತ್ಮರ ಜಯಂತಿಗಳನ್ನು ಅತ್ಯಂತ ಅರ್ಥಪೂರ್ಣವಾಗಿ ಆಚರಣೆ ಮಾಡಬೇಕು :
The birth anniversaries of great personalities should be celebrated in the most meaningful way:
ಲೋಕದರ್ಶನ ವರದಿ
ಮಹಾತ್ಮರ ಜಯಂತಿಗಳನ್ನು ಅತ್ಯಂತ ಅರ್ಥಪೂರ್ಣವಾಗಿ ಆಚರಣೆ ಮಾಡಬೇಕು :
ಎಂ.ಆರ್.ಷಣ್ಮುಖಪ್ಪ. ಕಂಪ್ಲಿ 29: ಮಹಾತ್ಮರ, ಮಹನೀಯರ, ಸಂತರ ಜಯಂತಿಗಳನ್ನು ಪ್ರತಿಯೊಬ್ಬರೂ ಅತ್ಯಂತ ಅರ್ಥಪೂರ್ಣವಾಗಿ ಆಚರಣೆ ಮಾಡಬೇಕೆಂದು ಗ್ರೇಡ್-2 ತಹಸಿಲ್ದಾರ್ ಎಂ.ಆರ್.ಷಣ್ಮುಖಪ್ಪ ಹೇಳಿದರು. ಅವರು ಪಟ್ಟಣದ ತಹಸಿಲ್ದಾರ್ ಕಚೇರಿ ಸಭಾಂಗಣದಲ್ಲಿ ಮೇ.2ರಂದು ಆಚರಣೆ ಮಾಡಲಿರುವ ಶ್ರೀ ಶಂಕರಚಾರ್ಯರ ಜಯಂತಿ ಹಾಗೂ ಮೇ.4ರಂದು ಆಚರಿಸಲಿರುವ ಶ್ರೀ ಭಗಿರಥಿ ಜಯಂತಿಗಳ ಪೂರ್ವಭಾವಿ ಸಭೆಯ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿ ಈ ನಾಡಿನಲ್ಲಿ ಅನೇಕ ಮಹಾಂತರು, ಮಹಾನೀಯರು, ಸಾಧು,ಸಂತರು ತಮ್ಮ ಅಪಾರವಾದ ಜ್ಞಾನ, ಆದರ್ಶ,ತತ್ವಗಳನ್ನು ನಮಗಾಗಿ ಬಿಟ್ಟುಹೋಗಿದ್ದಾರೆ. ಅಂತವರ ಜಯಂತಿಗಳನ್ನು ಅರ್ಥಪೂರ್ಣವಾಗಿ ಆಚರಣೆ ಮಾಡುವ ಅವರಿಗೆ ನಮ್ಮ ಗೌರವಗಳನ್ನು ಸಲ್ಲಿಸಬೇಕು ಹಾಗೂ ಅವರ ತತ್ವಾದರ್ಶಗಳನ್ನು ಪ್ರತಿಯೊಬ್ಬರೂ ಅಳವಡಿಸಿಕೊಳ್ಳಬೇಕು ಎಂದರು. ಮೇ.2ರಂದು ಬೆಳಿಗ್ಗೆ 10-30ಕ್ಕೆ ಮತ್ತು ಮೇ.4ರಂದು ಬೆಳಿಗ್ಗೆ 10-30ಕ್ಕೆ ತಹಸಿಲ್ದಾರ್ ಕಚೇರಿ ಸಭಾಂಗಣದಲ್ಲಿ ತಾಲ್ಲೂಕು ಆಡಳಿತದಿಂದ ಜಯಂತಿಗಳನ್ನು ಆಚರಣೆ ಮಾಡಲಾಗುತ್ತಿದ್ದು, ಎಲ್ಲಾ ಸರ್ಕಾರಿ ಇಲಾಖೆಗಳ ಅಧಿಕಾರಿಗಳು ತಮ್ಮ ಕಚೇರಿಗಳಲ್ಲಿ ಜಯಂತಿಯನ್ನು ಆಚರಣೆ ಮಾಡಿ ತಹಸಿಲ್ದಾರ್ ಕಚೇರಿಗೆ ಆಗಮಿಸಬೇಕು ಮತ್ತು ಎಲ್ಲಾ ಸಮುದಾಯಗಳ ಮುಖಂಡರು ಆಗಮಿಸಿ ಯಶಸ್ವಿಗೊಳಿಸಬೇಕೆಂದು ಮನವಿ ಮಾಡಿದರು. ಈ ಸಂದರ್ಭದಲ್ಲಿ ತಾ.ಪಂ.ಇಒ ಆರ್.ಕೆ.ಶ್ರೀಕುಮಾರ್. ಶಿರಸ್ತೆದಾರ ಎಸ್.ಕೆ.ರಮೇಶ್, ವಿವಿಧ ಇಲಾಖೆಗಳ ಸಿಬ್ಬಂದಿಗಳು, ಉಪ್ಪಾರ ಸಮಾಜದ ಯು.ರಾಮದಾಸ್,ಯು ರುದ್ರ್ಪ ಸೇರಿದಂತೆ ಇತರರು ಇದ್ದರು.
ಬೆಳಗಾವಿಯಲ್ಲಿ ಆನೆಕಲ್ಲು ಮಿಶ್ರಿತ ಗಾಳಿ ಮಳೆಯ ಅರ್ಭಟಕ್ಕೆ ಜನಜೀವನ ಅಸ್ತವ್ಯಸ್ತ
ಹಣ ದ್ವಿಗುಣ ಹೆಸರಲ್ಲಿ ಜನರಿಗೆ ವಂಚಿಸುತ್ತಿದ್ದ ಅಂತರಾಜ್ಯ ಖದೀಮರ ಬಂಧನ : ಗೋಕಾಕ ಪೊಲೀಸರ ಕಾರ್ಯಕ್ಕೆ ಎಸ್ ಪಿ ಶ್ಲಾಘನೆ
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ 