ಮನುಷ್ಯ ಜನ್ಮ ಪವಿತ್ರವಾದದ್ದು: ಬೆನ್ನಾಳಿ ಮಹಾರಾಜರು
ಲೋಕದರ್ಶನ ವರದಿ
ಗೋಕಾಕ 31: ಮನುಷ್ಯ ಜನ್ಮ ಪವಿತ್ರವಾದದ್ದು. ಮನುಷ್ಯ ಜನ್ಮದ ಬದುಕಿನ ಸಾಕ್ಷಾರತೆಯನ್ನು ಕಂಡು ಸಂಸ್ಕಾರಯುತ ಜೀವನವನ್ನು ನಡೆಸಿ ಮುಕ್ತಿಯ ಕಡೆಗೆ ನಡೆಯಬೇಕಾದರೆ ದೈವಿ ಸ್ವರೂಪದ ಆತ್ಮ ಶಕ್ತಿಯನ್ನು ಶಕ್ತಿಯುತವಾಗಿ ಮಾಡುವ ಮೂಲಕ ನಮ್ಮಲ್ಲಿಯೇ ನಾವು ದೈವತ್ವವನ್ನು, ದೇವರ ಸ್ವರೂಪವನ್ನು ಕಾಣಬೇಕಾಗುತ್ತದೆ. ಆದರೆ ಕಾಮ, ಕ್ರೋಧ, ಲೋಭ, ಮಧ, ಮತ್ಸರಾಧಿಗಳಿಂದ ಕೂಡಿದ ಮನಸನ್ನು ನಿಯಂತ್ರಿಸಿದಾಗಲೇ ಮಾತ್ರ ಆತ್ಮ ಶಕ್ತಿಯನ್ನು ಜಾಗೃತಗೊಳಿಸಲು ಸಾಧ್ಯ.
ಬೇಕು ಎಂಬ ಭಯಕೆಗಳಿಂದ ಹೊರಬಂದಾಗ ಮಾತ್ರ ನಮ್ಮ ಬದುಕು ಸಂತೃಪ್ತಮಯವಾಗುತ್ತದೆ. ದೈವತ್ವದ ಸಾಕ್ಷಾರವಾಗುತ್ತದೆ ಎಂದು ಸ.ಸ. ಪ್ರಭುಜೀ ಬೆನ್ನಾಳಿ ಮಹಾರಾಜರು ಇಂಚಗೇರಿಮಠ ಅವರು ಪುಡಕಲಕಟ್ಟಿ ಗ್ರಾಮದ ಇಂಚಗೇರಿ ಮಠದ ಜ್ಞಾನಯೋಗಾಶ್ರಮದಲ್ಲಿ ಜರುಗಿದ ಸದ್ಗರು ಸಮರ್ಥ ಮಾಧವಾನಂದ ಪ್ರಭುಜೀ ಅವರ ಜಯಂತ್ರೋತ್ಸವದ ನಿಮಿತ್ಯ ಹಮ್ಮಿಕೊಂಡ ಸಪ್ತಾಹದ ಆಧ್ಯಾತ್ಮ ಚಿಂತನ ಪ್ರವಚನದ ಕಾರ್ಯಕ್ರಮವನ್ನು ಉದ್ಘಾಟಿಸಿ ಹೇಳಿದರು.
ವರ್ಷ ಪದ್ದತಿಯ ಸಂಪ್ರದಾಯದಂತೆ ಮಲ್ಲೂರ ಗ್ರಾಮದಿಂದ ಆಗಮಿಸಿದ ಪಾಲಕಿ ಸೇವೆಯೊಂದಿಗೆ ಪ್ರಾರಂಭವಾದ ಆಧ್ಯಾತ್ಮ ಚಿಂತನಗೋಷ್ಠಿಯ ಪ್ರಾರಂಭೋತ್ಸವದ ಈ ಸಮಾರಂಭದಲ್ಲಿ ಗೊರಗುದ್ದಿಯ ತುಕಾರಾಮ ಮಹಾರಾಜರು, ಇಂಚಗೇರಿ ಸಂಪ್ರದಾಯದ ಪ್ರಚಾರಕ ಚಿದಾನಂದ ಪಾಲಭಾಂವಿ, ಬಿ.ಜೆ.ಪಿ. ಮುಖಂಡ ಅಶೋಕ ಪೂಜಾರಿ, ಮಾಜಿ ತಾ.ಪಂ. ಅಧ್ಯಕ್ಷ ಗುರಪ್ಪ ಹಿಟ್ಟಣಗಿ, ಮುಖಂಡರುಗಳಾದ ಅಂಬಿರಾವ್ ಪಾಟೀಲ, ಜಿ.ಪಂ. ಸದಸ್ಯರುಗಳಾದ ತುಕಾರಾಮ ಕಾಗಲ್, ಮಡೆಪ್ಪ ತೋಳಿನವರ ಮುಂತಾದವರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಗ್ರಾಮದ ಹಿರಿಯರಾದ ಗೋಪಾಲ ಗಿರಿಯಾಲ, ರಾಯಪ್ಪ ಕುಂಟಗೋಳ, ಶಿವಪುತ್ರ ಗೌಡರ, ಶಿವನಪ್ಪ ಜನಕಟ್ಟಿ ಮುಂತಾದ ಗಣ್ಯರು ಕಾರ್ಯಕ್ರಮವನ್ನು ಸಂಯೋಜಿಸಿದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 