ಉಪಚುನಾವಣೆ ಪ್ರತಿಷ್ಠೆಯ ಕಣವಾಗಿದೆ; ಧ್ವೇಷಗಳನ್ನು ಬಿಟ್ಟು ಬಿಜೆಪಿ ಸೋಲಿಸಲು ಕೆಲಸ ಮಾಡಿ: ಸಿಎಂ ಕರೆ
ಬೆಂಗಳೂರು 16: ಐದು ಕ್ಷೇತ್ರಗಳ ಉಪ ಚುನಾವಣೆ ಪ್ರತಿಷ್ಠೆಯಾಗಿ ಪರಿಣಮಿಸಿದೆ. ವಯಕ್ತಿಕ ಧ್ವೇಷಗಳನ್ನು ಬದಿಗಿಟ್ಟು ಬಿಜೆಪಿ ಸೋಲಿಸುವ ನಿಟ್ಟಿನಲ್ಲಿ ಕೆಲಸಮಾಡುವಂತೆ ಮುಖ್ಯಮಂತ್ರಿ ಎಚ್.ಡಿ ಕುಮಾರ ಸ್ವಾಮಿ ಕರೆ ನೀಡಿದ್ದಾರೆ.
ಬೆಂಗಳೂರಿನ ಜೆಡಿಎಸ್ ಕಚೇರಿಯಲ್ಲಿ ಮಾತನಾಡಿದ ಸಿಎಂ ಕುಮಾರ ಸ್ವಾಮಿ, ಶಿವಮೊಗ್ಗ ಕ್ಷೇತ್ರಕ್ಕೆ ಜೆಡಿಎಸ್- ಕಾಂಗ್ರೆಸ್ ಒಮ್ಮತದ ಅಭ್ಯರ್ಥಿಯಾಗಿ ಮಧು ಬಂಗಾರಪ್ಪ ಅವರನ್ನು ಕಣಕ್ಕಿಳಿಸಿದ್ದೇವೆ. ಹೀಗಾಗಿ ವಯಕ್ತಿಕ ದ್ವೇಷವನ್ನು ಬದಿಗೊತ್ತಿ ಬಿಜೆಪಿ ವಿರುದ್ಧ ಕೆಲಸ ಮಾಡಬೇಕೆಂದು ಕಾಂಗ್ರೆಸ್ ಹಾಗೂ ಜೆಡಿಎಸ್ ಕಾರ್ಯಕರ್ತರಿಗೆ ತಿಳಿಸಿದರು.
ಶಿವಮೊಗ್ಗದಲ್ಲಿ ಬಿಜೆಪಿಯಿಂದ ಯಡಿಯೂರಪ್ಪ ಪುತ್ರ ಬಿ ವೈ ರಾಘವೇಂದ್ರ ಕಣದಲ್ಲಿದ್ದು, ಅವರನ್ನು ಸೋಲಿಸುವ ಉದ್ದೇಶದಿಂದ ಕಾಂಗ್ರೆಸ್ ಕಾರ್ಯಕರ್ತರನ್ನು ವಿಶ್ವಾಸಕ್ಕೆ ತೆಗೆದುಕೊಂಡು ನಾಳೆ ನಾಮಪತ್ರ ಸಲ್ಲಿಸುವುದಾಗಿ ಹೇಳಿದ್ದಾರೆ.
ಈ ವೇಳೆ ಮಾತನಾಡಿದ ಮಧು ಬಂಗಾರಪ್ಪ, ವಿಧಾನಸಭೆ ಚುನಾವಣೆ ನಂತರ ಕೆಲ ದಿನಗಳ ಕಾಲ ಬೇಸರವಾಗಿತ್ತು, ಆದರೆ ನನ್ನ ತಂದೆಯೇ ಚುನಾವಣೆಯಲ್ಲಿ ಸೋತಿದ್ದರು, ಅದನ್ನೆಲ್ಲವನ್ನು ನಾವು ಮರೆತಿದ್ದೇವೆ ಈಗ ಈ ಚುನಾವನೆಯಲ್ಲಿ ಒಗ್ಗಟ್ಟಿನಿಂದ ಕೆಲಸ ಮಾಡಬೇಕು ಎಂದು ಹೇಳಿದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 