ಚಾಮುಂಡಿ ಬೆಟ್ಟದಲ್ಲಿ ನಾಡಅಧಿದೇವತೆಯ ವಿಜೃಂಭಣೆಯ ರಥೋತ್ಸವ
ಮೈಸೂರು, ಅ 13: ಚಾಮುಂಡಿ ಬೆಟ್ಟದಲ್ಲಿ ನಾಡ ಅಧಿದೇವತೆ ಚಾಮುಂಡಿ ದೇವಿಯ ರಥೋತ್ಸವ ವಿಜೃಂಭಣೆಯಿಂದ ನಡೆಯಿತು. ಭಾನುವಾರ ಬೆಳಗ್ಗೆ 6.30 ರಿಂದ 7.15ರ ಶುಭ ಮುಹೂರ್ತದಲ್ಲಿ ರಥೋತ್ಸವ ನೆರವೇರಿತು.
ರಥೋತ್ಸವವನ್ನು ಕಣ್ತುಂಬಿಕೊಳ್ಳಲು ಭಾರಿ ಸಂಖ್ಯೆಯ ಭಕ್ತಾದಿಗಳು ಮುಂಜಾನೆಯೇ ಚಾಮುಂಡಿ ಬೆಟ್ಟಕ್ಕೆ ಆಗಮಿಸಿದ್ದರು
ಸಂಪ್ರದಾಯದಂತೆ ರಾಜವಂಶಸ್ಥ ಯದುವೀರ ಕೃಷ್ಣ ದತ್ತ ಒಡೆಯರ್ ಪೂಜೆ ಸಲ್ಲಿಸಿದ ಬಳಿಕ ಚಾಮುಂಡಿ ದೇವಿಯ ಮೂರ್ತಿಯನ್ನು ರಥದಲ್ಲಿ ಪ್ರತಿಷ್ಠಾಪಿಸಲಾಯಿತು. ಸಾವಿರಾರು ಮಂದಿ ಭಕ್ತಾದಿಗಳು ರಥೋತ್ಸವದಲ್ಲಿ ಭಾಗಿಯಾಗಿದ್ದರು. ರಥ ಎಳೆದು ದೇವಿಯ ದರ್ಶನ ಪಡೆದು ಪುನೀತರಾದರು.
ರಾಜವಂಶಸ್ಥೆ ಪ್ರಮೋದಾದೇವಿ, ಯದುವೀರ್ ಒಡೆಯರ್ ಪತ್ನಿ ತ್ರಿಷಿಕಾ ಕುಮಾರಿ ಒಡೆಯರ್ ಚಾಮುಂಡೇಶ್ವರಿ ದರ್ಶನ ಪಡೆದರು.
ಅಕ್ಟೋಬರ್ 15 ರಂದು ಸಂಜೆ 6.30ಕ್ಕೆ ದೇವಿಕೆರೆಯಲ್ಲಿ ತೆಪ್ಪೊತ್ಸವ ನಡೆಯಲಿದೆ.
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 