ಮದಲಗಟ್ಟಿ ಆಂಜನೇಯ ಸ್ವಾಮಿಯ ರಥೋತ್ಸವ
The chariot festival of Madalagatti Anjaneya Swamy
ಹೂವಿನ ಹಡಗಲಿ 08: ತಾಲ್ಲೂಕಿನ ಮದಲಗಟ್ಟಿ ಗ್ರಾಮದಲ್ಲಿ ಆಂಜನೇಯ ಸ್ವಾಮಿಯ ಜಾತ್ರಾ ಮಹೋತ್ಸವವು ಭಾನುವಾರ ಸಂಜೆ ಅಪಾರ ಭಕ್ತ ಸಮೂಹದ ನಡುವೆ ವಿಜೃಂಭಣೆಯಿಂದ ಜರುಗಿತು.ರಥೋತ್ಸವಕ್ಕೂ ಮುನ್ನ ಬೆಳಿಗ್ಗೆಯಿಂದಲೇ ಅನೇಕ ಭಾಗಗಳಿಂದ ಭಕ್ತಾದಿಗಳು ತಮ್ಮ ಇಷ್ಟಾರ್ಥ ದೇವರಾದ ಆಂಜನೇಯ ಸ್ವಾಮಿಯ ಹಣ್ಣು-ಕಾಯಿ, ಹೂವುಗಳ ಅರ್ಚನೆ ಮಾಡಿಸಿದರು. ಮಂಗಳಾರತಿ, ಅಭಿಷೇಕಗಳು ನಡೆಯುತ್ತಿದ್ದವು.ಸಂಜೆ ಜರುಗಿದ ರಥೋತ್ಸವದಲ್ಲಿ ಸಾವಿರಾರು ಜನರು ಭಾಗವಹಿಸಿ ತಮ್ಮ ಭಕ್ತಿ-ಭಾವ ಅರ್ಿಸಿದರು. ರಥೋತ್ಸವವು ಸಾಗುತ್ತಿದ್ದಂತೆ ನೆರೆದಿದ್ದ ಭಕ್ತರು ಬಾಳೆಹಣ್ಣು, ಉತ್ತತ್ತಿಗಳನ್ನು ರಥಕ್ಕೆಸೆದು ಕೈ ಮುಗಿದರು.
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ
ಇಂಗ್ಲೆಂಡ್ನ ಮಹರ್ಷಿ ಶ್ರೀ ವಾಲ್ಮೀಕಿ ಆಶ್ರಮಕ್ಕೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಮನೆ ಮನೆಗಳ ಮೇಲೆ ಕನ್ನಡ ಬಾವುಟ ಅಭಿಯಾನ–2026’: 5 ಸಾವಿರ ಕನ್ನಡ ಧ್ವಜಗಳ ಉಚಿತ ವಿತರಣೆ
ಉತ್ತರ ವಲಯ ಪೊಲೀಸರಿಂದ ರೌಡಿ ನಿಗ್ರಹಕ್ಕೆ ಕಠಿಣ ಕ್ರಮ : 23 ರೌಡಿಗಳ ಗಡಿಪಾರು 